ಬ್ರೇಕಿಂಗ್ ನ್ಯೂಸ್
06-07-26 04:49 pm HK News Staffer ಕ್ರೈಂ
ಮಂಗಳೂರು, ಜುಲೈ 6: ಪಣಂಬೂರು ಬೀಚ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಎಂಟ್ರಿ ಕೊಡುವ ಸಂದರ್ಭದಲ್ಲಿ ಚಾಲಕನ ನಿರ್ಲಕ್ಷ್ಯದಿಂದಾಗಿ ಬೃಹತ್ ಗಾತ್ರದ ಟ್ರೇಲರ್ ವಾಹನ ಹೆದ್ದಾರಿಯಲ್ಲಿ ಸಿಲುಕಿ ಭಾನುವಾರ ಸಂಜೆ ತೀವ್ರ ಟ್ರಾಫಿಕ್ ಜಾಮ್ ಉಂಟಾಗಿತ್ತು. ಘಟನೆಗೆ ಚಾಲಕನ ನಿರ್ಲಕ್ಷ್ಯ ಮತ್ತು ಕಂಪನಿ ಅಧಿಕಾರಿಗಳು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದಿರುವುದೇ ಕಾರಣ ಎಂಬುದನ್ನು ಮನಗಂಡು ಮಂಗಳೂರು ಉತ್ತರ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಶನಿವಾರ ಎನ್ಎಂಪಿಟಿ ಬಂದರಿಗೆ ಆಗಮಿಸಿದ್ದ ವಾಹನ ಸರಕನ್ನು ಇಳಿಸಿ ಭಾನುವಾರ ಸಂಜೆ ಹೊರಬಂದಿತ್ತು. ಆದರೆ ಬೀಚ್ ರಸ್ತೆಯಿಂದ ಹೆದ್ದಾರಿಗೆ ಸೇರುವ ಸಂದರ್ಭದಲ್ಲಿ ಟ್ರೇಲರ್ ಮುಂಭಾಗ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದ್ದು ಹಿಂಭಾಗ ಪೂರ್ತಿಯಾಗಿ ಹೆದ್ದಾರಿಗೆ ಅಡ್ಡಲಾಗಿ ನಿಂತು ವಾಹನ ಸಂಚಾರ ಸ್ಥಗಿತಗೊಂಡಿತ್ತು. ಇದರಿಂದ ಮಂಗಳೂರು–ಸುರತ್ಕಲ್ ನಡುವೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ಎರಡು ಗಂಟೆ ಕಾಲ ಟ್ರಾಫಿಕ್ ಜಾಮ್ ಆಗಿತ್ತು.




ಪ್ರಾಥಮಿಕ ತನಿಖೆಯಲ್ಲಿ, ಸಂಬಂಧಿಸಿದ ಬೃಹತ್ ಟ್ರೇಲರ್ ವಾಹನವು ರಸ್ತೆ ಸಂಚಾರಕ್ಕೆ ಅಗತ್ಯವಿರುವ ಅನುಮತಿ ಪಡೆಯದೇ/ಮಾಹಿತಿ ನೀಡದೇ ಹಾಗೂ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೇ ಬೃಹತ್ ಯಂತ್ರೋಪಕರಣವನ್ನು ಸಾಗಾಟ ಮಾಡಿರುವುದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಟ್ರೇಲರ್ ವಾಹನದ ಚಾಲಕ ವಿನೋದ್ ಕುಮಾರ್ ಸಿಂಗ್, EXG Express Global Logistics ಟ್ರಾನ್ಸ್ ಪೋರ್ಟ್ ಕಂಪನಿಯ ಮಾಲೀಕ ಹಾಗೂ ಯಂತ್ರೋಪಕರಣ ಸಾಗಾಟಕ್ಕೆ ಸಂಬಂಧಿಸಿದ ಕಂಪನಿಯ ಅಧಿಕಾರಿಗಳ ವಿರುದ್ಧ ಮಂಗಳೂರು ಸಂಚಾರ ಉತ್ತರ ಪೊಲೀಸ್ ಠಾಣೆಯಲ್ಲಿ ಠಾಣಾ ಅ.ಕ್ರ 173/2026 ಕಲಂ 281, 285 ಬಿ.ಎನ್.ಎಸ್ ಮತ್ತು 184, 201 ಐ.ಎಂ.ವಿ ಅಕ್ಟ್ ರಂತೆ ಪ್ರಕರಣ ದಾಖಲಿಸಲಾಗಿದೆ.
ಸಾರ್ವಜನಿಕರ ಸುರಕ್ಷತೆ ಹಾಗೂ ವಾಹನ ಸಂಚಾರದ ಸುಗಮ ಸಂಚಾರದ ದೃಷ್ಟಿಯಿಂದ ಬೃಹತ್ ಗಾತ್ರದ ವಾಹನಗಳ ಚಾಲನೆ ಸಂದರ್ಭದಲ್ಲಿ ಮತ್ತು ಸಾಗಾಟ ಸಂಸ್ಥೆಗಳು ನಿಯಮಾನುಸಾರ ಅನುಮತಿ ಪಡೆದು, ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
06-07-26 04:40 pm
HK News Staffer
ಬೆಂಗಳೂರು ಕೆ.ಆರ್ ವೃತ್ತದಲ್ಲಿ ಬಿಎಂಟಿಸಿ ಬಸ್ಸುಗಳ ಡ...
04-07-26 02:51 pm
ರಾಮನಗರ ಕಲ್ಯಾಣ ಮಂಟಪದಲ್ಲಿ ಮತದಾರರನ್ನು ಸೇರಿಸಿ ಎಸ್...
03-07-26 01:21 pm
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
06-07-26 01:14 pm
HK News Staffer
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
ರಷ್ಯಾದಿಂದ ತೈಲ ಖರೀದಿಸಿ ಮತ್ತೆ ಆ ದೇಶಕ್ಕೇ ಪೆಟ್ರೋಲ...
03-07-26 09:40 pm
ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಸೇರಿ 52 ಕ್ರಿಮಿ...
02-07-26 03:37 pm
05-07-26 10:15 pm
HK News Desk
ಉನ್ನತ ಶಿಕ್ಷಣಕ್ಕಾಗಿ ಜರ್ಮನಿ ತೆರಳಿದ್ದ ಮಂಗಳೂರಿನ ಯ...
05-07-26 09:34 pm
Panambur Block, Mangalore: ಪಣಂಬೂರು ಹೆದ್ದಾರಿಯಲ...
05-07-26 06:33 pm
Kuloor Accident: ಕುಳೂರು ಬಳಿ ಸ್ಕೂಟರ್ ಗೆ ಟ್ಯಾಂಕ...
03-07-26 10:17 pm
ಕೆರೆಬೈಲ್ ಎಸ್ಟೇಟ್ ಆವರಣ ಗೋಡೆ ಕುಸಿದು ಅವಾಂತರ ; ಸ...
02-07-26 10:53 pm
06-07-26 04:49 pm
HK News Staffer
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am
ಅಯೋಧ್ಯೆ ರಾಮ ಮಂದಿರ ಬೆನ್ನಲ್ಲೇ ಬದರಿನಾಥ ಕ್ಷೇತ್ರದಲ...
04-07-26 09:47 pm
Panambur Gold Robbery, Update: ಚಿನ್ನದ ವ್ಯಾಪಾರ...
04-07-26 09:43 pm