ಬ್ರೇಕಿಂಗ್ ನ್ಯೂಸ್
06-07-26 04:49 pm HK News Staffer ಕ್ರೈಂ
ಮಂಗಳೂರು, ಜುಲೈ 6: ಪಣಂಬೂರು ಬೀಚ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಎಂಟ್ರಿ ಕೊಡುವ ಸಂದರ್ಭದಲ್ಲಿ ಚಾಲಕನ ನಿರ್ಲಕ್ಷ್ಯದಿಂದಾಗಿ ಬೃಹತ್ ಗಾತ್ರದ ಟ್ರೇಲರ್ ವಾಹನ ಹೆದ್ದಾರಿಯಲ್ಲಿ ಸಿಲುಕಿ ಭಾನುವಾರ ಸಂಜೆ ತೀವ್ರ ಟ್ರಾಫಿಕ್ ಜಾಮ್ ಉಂಟಾಗಿತ್ತು. ಘಟನೆಗೆ ಚಾಲಕನ ನಿರ್ಲಕ್ಷ್ಯ ಮತ್ತು ಕಂಪನಿ ಅಧಿಕಾರಿಗಳು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದಿರುವುದೇ ಕಾರಣ ಎಂಬುದನ್ನು ಮನಗಂಡು ಮಂಗಳೂರು ಉತ್ತರ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಶನಿವಾರ ಎನ್ಎಂಪಿಟಿ ಬಂದರಿಗೆ ಆಗಮಿಸಿದ್ದ ವಾಹನ ಸರಕನ್ನು ಇಳಿಸಿ ಭಾನುವಾರ ಸಂಜೆ ಹೊರಬಂದಿತ್ತು. ಆದರೆ ಬೀಚ್ ರಸ್ತೆಯಿಂದ ಹೆದ್ದಾರಿಗೆ ಸೇರುವ ಸಂದರ್ಭದಲ್ಲಿ ಟ್ರೇಲರ್ ಮುಂಭಾಗ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದ್ದು ಹಿಂಭಾಗ ಪೂರ್ತಿಯಾಗಿ ಹೆದ್ದಾರಿಗೆ ಅಡ್ಡಲಾಗಿ ನಿಂತು ವಾಹನ ಸಂಚಾರ ಸ್ಥಗಿತಗೊಂಡಿತ್ತು. ಇದರಿಂದ ಮಂಗಳೂರು–ಸುರತ್ಕಲ್ ನಡುವೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ಎರಡು ಗಂಟೆ ಕಾಲ ಟ್ರಾಫಿಕ್ ಜಾಮ್ ಆಗಿತ್ತು.




ಪ್ರಾಥಮಿಕ ತನಿಖೆಯಲ್ಲಿ, ಸಂಬಂಧಿಸಿದ ಬೃಹತ್ ಟ್ರೇಲರ್ ವಾಹನವು ರಸ್ತೆ ಸಂಚಾರಕ್ಕೆ ಅಗತ್ಯವಿರುವ ಅನುಮತಿ ಪಡೆಯದೇ/ಮಾಹಿತಿ ನೀಡದೇ ಹಾಗೂ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೇ ಬೃಹತ್ ಯಂತ್ರೋಪಕರಣವನ್ನು ಸಾಗಾಟ ಮಾಡಿರುವುದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಟ್ರೇಲರ್ ವಾಹನದ ಚಾಲಕ ವಿನೋದ್ ಕುಮಾರ್ ಸಿಂಗ್, EXG Express Global Logistics ಟ್ರಾನ್ಸ್ ಪೋರ್ಟ್ ಕಂಪನಿಯ ಮಾಲೀಕ ಹಾಗೂ ಯಂತ್ರೋಪಕರಣ ಸಾಗಾಟಕ್ಕೆ ಸಂಬಂಧಿಸಿದ ಕಂಪನಿಯ ಅಧಿಕಾರಿಗಳ ವಿರುದ್ಧ ಮಂಗಳೂರು ಸಂಚಾರ ಉತ್ತರ ಪೊಲೀಸ್ ಠಾಣೆಯಲ್ಲಿ ಠಾಣಾ ಅ.ಕ್ರ 173/2026 ಕಲಂ 281, 285 ಬಿ.ಎನ್.ಎಸ್ ಮತ್ತು 184, 201 ಐ.ಎಂ.ವಿ ಅಕ್ಟ್ ರಂತೆ ಪ್ರಕರಣ ದಾಖಲಿಸಲಾಗಿದೆ.
ಸಾರ್ವಜನಿಕರ ಸುರಕ್ಷತೆ ಹಾಗೂ ವಾಹನ ಸಂಚಾರದ ಸುಗಮ ಸಂಚಾರದ ದೃಷ್ಟಿಯಿಂದ ಬೃಹತ್ ಗಾತ್ರದ ವಾಹನಗಳ ಚಾಲನೆ ಸಂದರ್ಭದಲ್ಲಿ ಮತ್ತು ಸಾಗಾಟ ಸಂಸ್ಥೆಗಳು ನಿಯಮಾನುಸಾರ ಅನುಮತಿ ಪಡೆದು, ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am