ಬ್ರೇಕಿಂಗ್ ನ್ಯೂಸ್
06-07-26 04:49 pm HK News Staffer ಕ್ರೈಂ
ಮಂಗಳೂರು, ಜುಲೈ 6: ಪಣಂಬೂರು ಬೀಚ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಎಂಟ್ರಿ ಕೊಡುವ ಸಂದರ್ಭದಲ್ಲಿ ಚಾಲಕನ ನಿರ್ಲಕ್ಷ್ಯದಿಂದಾಗಿ ಬೃಹತ್ ಗಾತ್ರದ ಟ್ರೇಲರ್ ವಾಹನ ಹೆದ್ದಾರಿಯಲ್ಲಿ ಸಿಲುಕಿ ಭಾನುವಾರ ಸಂಜೆ ತೀವ್ರ ಟ್ರಾಫಿಕ್ ಜಾಮ್ ಉಂಟಾಗಿತ್ತು. ಘಟನೆಗೆ ಚಾಲಕನ ನಿರ್ಲಕ್ಷ್ಯ ಮತ್ತು ಕಂಪನಿ ಅಧಿಕಾರಿಗಳು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದಿರುವುದೇ ಕಾರಣ ಎಂಬುದನ್ನು ಮನಗಂಡು ಮಂಗಳೂರು ಉತ್ತರ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಶನಿವಾರ ಎನ್ಎಂಪಿಟಿ ಬಂದರಿಗೆ ಆಗಮಿಸಿದ್ದ ವಾಹನ ಸರಕನ್ನು ಇಳಿಸಿ ಭಾನುವಾರ ಸಂಜೆ ಹೊರಬಂದಿತ್ತು. ಆದರೆ ಬೀಚ್ ರಸ್ತೆಯಿಂದ ಹೆದ್ದಾರಿಗೆ ಸೇರುವ ಸಂದರ್ಭದಲ್ಲಿ ಟ್ರೇಲರ್ ಮುಂಭಾಗ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದ್ದು ಹಿಂಭಾಗ ಪೂರ್ತಿಯಾಗಿ ಹೆದ್ದಾರಿಗೆ ಅಡ್ಡಲಾಗಿ ನಿಂತು ವಾಹನ ಸಂಚಾರ ಸ್ಥಗಿತಗೊಂಡಿತ್ತು. ಇದರಿಂದ ಮಂಗಳೂರು–ಸುರತ್ಕಲ್ ನಡುವೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ಎರಡು ಗಂಟೆ ಕಾಲ ಟ್ರಾಫಿಕ್ ಜಾಮ್ ಆಗಿತ್ತು.




ಪ್ರಾಥಮಿಕ ತನಿಖೆಯಲ್ಲಿ, ಸಂಬಂಧಿಸಿದ ಬೃಹತ್ ಟ್ರೇಲರ್ ವಾಹನವು ರಸ್ತೆ ಸಂಚಾರಕ್ಕೆ ಅಗತ್ಯವಿರುವ ಅನುಮತಿ ಪಡೆಯದೇ/ಮಾಹಿತಿ ನೀಡದೇ ಹಾಗೂ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೇ ಬೃಹತ್ ಯಂತ್ರೋಪಕರಣವನ್ನು ಸಾಗಾಟ ಮಾಡಿರುವುದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಟ್ರೇಲರ್ ವಾಹನದ ಚಾಲಕ ವಿನೋದ್ ಕುಮಾರ್ ಸಿಂಗ್, EXG Express Global Logistics ಟ್ರಾನ್ಸ್ ಪೋರ್ಟ್ ಕಂಪನಿಯ ಮಾಲೀಕ ಹಾಗೂ ಯಂತ್ರೋಪಕರಣ ಸಾಗಾಟಕ್ಕೆ ಸಂಬಂಧಿಸಿದ ಕಂಪನಿಯ ಅಧಿಕಾರಿಗಳ ವಿರುದ್ಧ ಮಂಗಳೂರು ಸಂಚಾರ ಉತ್ತರ ಪೊಲೀಸ್ ಠಾಣೆಯಲ್ಲಿ ಠಾಣಾ ಅ.ಕ್ರ 173/2026 ಕಲಂ 281, 285 ಬಿ.ಎನ್.ಎಸ್ ಮತ್ತು 184, 201 ಐ.ಎಂ.ವಿ ಅಕ್ಟ್ ರಂತೆ ಪ್ರಕರಣ ದಾಖಲಿಸಲಾಗಿದೆ.
ಸಾರ್ವಜನಿಕರ ಸುರಕ್ಷತೆ ಹಾಗೂ ವಾಹನ ಸಂಚಾರದ ಸುಗಮ ಸಂಚಾರದ ದೃಷ್ಟಿಯಿಂದ ಬೃಹತ್ ಗಾತ್ರದ ವಾಹನಗಳ ಚಾಲನೆ ಸಂದರ್ಭದಲ್ಲಿ ಮತ್ತು ಸಾಗಾಟ ಸಂಸ್ಥೆಗಳು ನಿಯಮಾನುಸಾರ ಅನುಮತಿ ಪಡೆದು, ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm