ಬ್ರೇಕಿಂಗ್ ನ್ಯೂಸ್
10-07-26 02:22 pm HK News Staffer ಕ್ರೈಂ
ಮಂಗಳೂರು, ಜುಲೈ 10: ದೇಶಾದ್ಯಂತ ಮತಪಟ್ಟಿ ಪರಿಷ್ಕರಣೆ (ಎಸ್ಐಆರ್) ಮೂಲಕ ಬಾಂಗ್ಲಾದೇಶಿಗರ ಪತ್ತೆಗೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಇದೇ ವೇಳೆ, ಮತದಾರ ಪಟ್ಟಿ ಸೇರದೆ ಕಾರ್ಮಿಕರ ಸೋಗಿನಲ್ಲಿ ಬಂದು ಆಧಾರ್ ಮಾಡಿಸಿ ನೆಲೆ ಕಂಡುಕೊಳ್ಳುತ್ತಿರುವ ಬಾಂಗ್ಲಾ ಮೂಲದ ನಿವಾಸಿಗಳ ಪತ್ತೆಗಾಗಿ ಮಂಗಳೂರಿನಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಮುಕ್ಕದಲ್ಲಿ ಕಟ್ಟಡ ಕಾಮಗಾರಿಗೆಂದು ಬಂದು ನೆಲೆ ಕಂಡುಕೊಂಡಿದ್ದ ಎಂಟು ಮಂದಿ ಬಾಂಗ್ಲಾದೇಶಿಗರನ್ನು ಸೆರೆ ಹಿಡಿಯಲಾಗಿದೆ. ಖಚಿತ ಮಾಹಿತಿ ಮೇರೆಗೆ ಸುರತ್ಕಲ್ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಮುಕ್ಕದಲ್ಲಿರುವ ಖಾಸಗಿ ಮೆಡಿಕಲ್ ಕಾಲೇಜಿನ ಕಟ್ಟಡ ಕಾಮಗಾರಿಗೆ ಬಂದಿದ್ದ ಕಾರ್ಮಿಕರನ್ನು ಪರಿಶೀಲನೆಗೆ ಒಳಪಡಿಸಿದಾಗ ಬಾಂಗ್ಲಾ ಮೂಲದವರು ಅನ್ನುವುದು ಪತ್ತೆಯಾಗಿದೆ.
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿಕೊಂಡಿದ್ದಲ್ಲದೆ, ಸ್ಥಳೀಯ ಏಜಂಟರ ಮೂಲಕ ಅಕ್ರಮವಾಗಿ ಆಧಾರ್ ಕಾರ್ಡ್ ಮಾಡಿಸಿಕೊಂಡಿರುವುದು ತನಿಖೆಯಲ್ಲಿ ಕಂಡುಬಂದಿದೆ. ಇವರನ್ನು ಅಜರುಲ್ ಇಸ್ಲಾಂ, ಮುಹಮ್ಮದ್ ರಕೀಬ್, ಜಾಹಿದ್ ಹುಸೇನ್, ಮಹಮ್ಮದ್ ಬಿಲಾಲ್ ಹುಸೇನ್, ಸೋಯೆಬ್ ಉಲ್ಲಾ, ಮಹಮ್ಮದ್ ಸಂಟುಲ್, ಮೌಕರ್ ಆಲಿ, ಅಜರುಲ್ ಇಸ್ಲಾಂ ಎಂದು ಗುರುತಿಸಲಾಗಿದ್ದು ಭಾರತದ ಗಡಿಭಾಗ ಬಾಂಗ್ಲಾದ ರಾಜಶಾಹಿ ಎಂಬಲ್ಲಿನ ನಿವಾಸಿಗಳು ಎಂದು ತಿಳಿದುಬಂದಿದೆ.
ಬಾಂಗ್ಲಾದಿಂದ ಅಕ್ರಮವಾಗಿ ಭಾರತದ ಗಡಿಯಿಂದ ನುಸುಳಿಕೊಂಡು ಪಶ್ವಿಮ ಬಂಗಾಳದ ಮೂಲಕ ಕರ್ನಾಟಕಕ್ಕೆ ಕೂಲಿ ಕಾರ್ಮಿಕರಾಗಿ ಬಂದಿದ್ದು ಇಲ್ಲಿ ಸ್ಥಳೀಯ ಏಜಂಟರ ಮೂಲಕ ಆಧಾರ್ ಮಾಡಿಸಿಕೊಂಡಿರುವುದು ಪತ್ತೆಯಾಗಿದೆ. ಇವರ ಬಗ್ಗೆ ವಿದೇಶಿಗರ ನೋಂದಣಿ ಕಚೇರಿಗೆ ಮಾಹಿತಿ ನೀಡಲಾಗಿದ್ದು ಗಡೀಪಾರು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm