ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು ನಿಲ್ಲಿಸಿದ ಅರಣ್ಯ ಸಿಬಂದಿ ಮೇಲೆ ಜೀಪು ಹಾಯಿಸಲು ಯತ್ನ, ಇಬ್ಬರ ಮೇಲೆ ಫೈರಿಂಗ್

18-07-26 12:34 pm       HK News Staffer   ಕ್ರೈಂ

ಮಡಿಕೇರಿ ತಾಲ್ಲೂಕಿನ ಸಂಪಾಜೆ ವಲಯದ ಬೆಟ್ಟತ್ತೂರು ಸಮೀಪ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ಗುಂಡು ಹಾರಿಸಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಆರೋಪಿಗಳಾದ ಜುಬೇರ್ ಮತ್ತು ಯಾಸಿರ್ ಎಂಬವರನ್ನು ಆಸ್ಪತ್ರೆಗೆ ದಾಖಲಿಸಿದ್ದು ಜೀಪಿನಲ್ಲಿದ್ದ ಇತರ ಆರೋಪಿಗಳು ಪರಾರಿಯಾಗಿದ್ದಾರೆ.

ಮಡಿಕೇರಿ, ಜುಲೈ 18: ಮಡಿಕೇರಿ ತಾಲ್ಲೂಕಿನ ಸಂಪಾಜೆ ವಲಯದ ಬೆಟ್ಟತ್ತೂರು ಸಮೀಪ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ಗುಂಡು ಹಾರಿಸಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಆರೋಪಿಗಳಾದ ಜುಬೇರ್ ಮತ್ತು ಯಾಸಿರ್ ಎಂಬವರನ್ನು ಆಸ್ಪತ್ರೆಗೆ ದಾಖಲಿಸಿದ್ದು ಜೀಪಿನಲ್ಲಿದ್ದ ಇತರ ಆರೋಪಿಗಳು ಪರಾರಿಯಾಗಿದ್ದಾರೆ. 

ಗುರುವಾರ ರಾತ್ರಿ ಗಸ್ತಿನಲ್ಲಿದ್ದಾಗ ಜೀಪ್ ಒಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ತಡೆಯಲು ಯತ್ನಿಸಿದ್ದಾರೆ. ಈ ವೇಳೆ ಆರೋಪಿಗಳು ಅರಣ್ಯ ಸಿಬ್ಬಂದಿ ಮೇಲೆ ಜೀಪು ಹತ್ತಿಸಲು ಪ್ರಯತ್ನಿಸಿದ್ದಾರೆ. ಸ್ವಯಂ ರಕ್ಷಣೆಗಾಗಿ ಸಿಬ್ಬಂದಿ ಗುಂಡು ಹಾರಿಸಿದ್ದು ಇಬ್ಬರಿಗೆ ಗಾಯಗಳಾಗಿವೆ. ಉಳಿದವರು ಪರಾರಿಯಾಗಿದ್ದಾರೆ. 

ಜೀಪಿನಲ್ಲಿ 266 ಕೆ.ಜಿ ಕಾಡುಕೋಣದ ಮಾಂಸ, ಚಾಕು ಪತ್ತೆಯಾಗಿವೆ. ಗಾಯಗೊಂಡ ಆರೋಪಿಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಉಳಿದ ಆರೋಪಿಗಳ ಪತ್ತೆ ಕಾರ್ಯಾಚರಣೆ ನಡೆದಿದೆ. ಕೊಡಗಿನ ಅರಣ್ಯ ಪ್ರದೇಶದಲ್ಲಿ ಕಾಡು ಕೋಣವನ್ನು ಬೇಟೆಯಾಡಿ ಕಾಡಿನಲ್ಲೇ ಮಾಂಸ ಮಾಡಿ ಅಕ್ರಮವಾಗಿ ಸಾಗಿಸುತ್ತಿರುವ ಜಾಲ ಸಕ್ರಿಯವಾಗಿದ್ದು ಅರಣ್ಯ ಅಧಿಕಾರಿಗಳು ಅಪರೂಪಕ್ಕೆ ಕಾರ್ಯಾಚರಣೆ ನಡೆಸಿದ್ದಾರೆ.‌