ಬ್ರೇಕಿಂಗ್ ನ್ಯೂಸ್
18-07-26 10:06 pm HK News Staffer ಕ್ರೈಂ
ಮಂಗಳೂರು, ಜುಲೈ 18: ಕುಡಿದ ಮತ್ತಿನಲ್ಲಿ ಯುವಕನೊಬ್ಬ ಕೈಯಲ್ಲಿ ಮಚ್ಚು ಹಿಡಿದುಕೊಂಡು ಮೂಡುಬಿದ್ರೆ ಬಸ್ ನಿಲ್ದಾಣದಲ್ಲಿ ಅಡ್ಡಾಡುತ್ತಾ ಜನರಲ್ಲಿ ಭೀತಿ ಮೂಡಿಸಿದ ಘಟನೆ ನಡೆದಿದ್ದು ಬಳಿಕ ಸ್ಥಳೀಯರೇ ಸೇರಿ ಆತನನ್ನು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ.
ಬಂಟ್ವಾಳ ತಾಲೂಕಿನ ವಾಮನಪದವು ಬಳಿಯ ಅಜ್ಜಿಬೆಟ್ಟು ನಿವಾಸಿ ರಾಜೇಶ್ (22) ಎಂದು ಯುವಕನನ್ನು ಗುರುತಿಸಲಾಗಿದ್ದು ಮೂಡುಬಿದ್ರೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ವಿಪರೀತ ಕುಡಿತದ ಚಟ ಹೊಂದಿದ್ದು ಕಂಠಪೂರ್ತಿ ಕುಡಿದು ಈ ಕೃತ್ಯ ಎಸಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಯುವಕ ಕೈಯಲ್ಲಿ ಮಚ್ಚು ಹಿಡಿದು ಅತ್ತಿತ್ತ ಹೋಗಿದ್ದು ಬಳಿಕ ಬಸ್ ನಿಲ್ದಾಣದಲ್ಲಿರುವ ಮೊಬೈಲ್ ಶಾಪ್ ಗೆ ಬಂದು ಅಲ್ಲಿದ್ದವರಿಗೆ ಬೆದರಿಕೆ ಹಾಕಿದ್ದಾನೆ.

ಶಾಪ್ ನಲ್ಲಿದ್ದವರಲ್ಲಿ ತನಗೆ ಮೊಬೈಲ್ ನೀಡುವಂತೆ ಹೇಳಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಕೆಲ ಹೊತ್ತು ಬೈದಾಡಿದ್ದು ಬಳಿಕ ಅಲ್ಲಿದ್ದ ಸ್ಥಳೀಯರು ಸೇರಿ ಕೈಯಲ್ಲಿದ್ದ ಮಚ್ಚನ್ನು ಎಳೆದು ಪೊಲೀಸರನ್ನು ಸ್ಥಳಕ್ಕೆ ಕರೆಸಿದ್ದಾರೆ. ಇದರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶನಿವಾರ ಸಂಜೆ ವೇಳೆಗೆ ಘಟನೆ ನಡೆದಿದ್ದು ಬಿಸಿ ರೋಡಿನಲ್ಲಿ ಯುವತಿಯನ್ನು ಹತ್ಯೆಗೈದ ಘಟನೆ ಹಸಿಯಾಗಿರುವಾಗಲೇ ಇಂತಹ ಘಟನೆ ನಡೆದಿದ್ದರಿಂದ ಭಯದ ವಾತಾವರಣ ಸೃಷ್ಟಿಯಾಗಿತ್ತು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am