ಬ್ರೇಕಿಂಗ್ ನ್ಯೂಸ್
22-07-26 09:03 pm HK News Desk ಕ್ರೈಂ
ಮಂಗಳೂರು, ಜುಲೈ 22 ಮತದಾರರ ಪಟ್ಟಿಯ ದಾಖಲೆ ಪರಿಷ್ಕರಣೆ (SIR) ‘ಮಿಸ್ಮ್ಯಾಚ್’ ನೆಪ ಒಡ್ಡಿ, ನಕಲಿ APK ಫೈಲ್ ಕಳುಹಿಸಿ ಆ್ಯಪ್ ಡೌನ್ಲೋಡ್ ಮಾಡಿಸುವ ಮೂಲಕ 71 ವರ್ಷದ ಹಿರಿಯ ನಾಗರಿಕರೊಬ್ಬರ ಬ್ಯಾಂಕ್ ಖಾತೆಯಿಂದ ಬರೋಬ್ಬರಿ ₹6,82,082 ರೂ. ಹಣವನ್ನು ಸೈಬರ್ ಕಳ್ಳರು ಎಗರಿಸಿರುವ ಆಘಾತಕಾರಿ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಜುಲೈ 17ರಂದು ಸಂತ್ರಸ್ತ 71 ವರ್ಷದ ವೃದ್ಧ ವ್ಯಕ್ತಿಯ ಮೊಬೈಲ್ಗೆ “ನಿಮ್ಮ SIR ಪರಿಶೀಲನೆ ಮಿಸ್ ಮ್ಯಾಚ್ ಆಗಿದೆ, ತಕ್ಷಣ 8638932992 ಸಂಖ್ಯೆಯನ್ನು ಸಂಪರ್ಕಿಸಿ” ಎಂದು ಮೆಸೇಜ್ ಬಂದಿತ್ತು. ಇದನ್ನು ನಂಬಿ ಜುಲೈ 18 ರಂದು ಸದ್ರಿ ಸಂಖ್ಯೆಗೆ ವಾಟ್ಸ್ಆ್ಯಪ್ ಮೆಸೇಜ್ ಮಾಡಿದ್ದು, 48 ಗಂಟೆಗಳಲ್ಲಿ ಸಂಪರ್ಕಿಸುವುದಾಗಿ ಸೈಬರ್ ವಂಚಕರಿಂದ ಮರುಪರಿಶೀಲನೆ ಸಂದೇಶ ಬಂದಿತ್ತು.
ಜುಲೈ 20ರಂದು ಸಂಜೆ +91 9101633409 ಸಂಖ್ಯೆಯಿಂದ ವಾಟ್ಸ್ಆ್ಯಪ್ ಕರೆ ಮಾಡಿದ ಅಪರಿಚಿತ ವ್ಯಕ್ತಿ ಮತದಾರರ ಪರಿಶೀಲನೆ ಲಿಂಕ್ ಕಳುಹಿಸಿ, SIR ಅಪ್ಡೇಟ್ ಮಾಡಲು ದಾಖಲೆಗಳ ವಿವರ ಪಡೆದಿದ್ದೇನೆ. ಪರಿಶೀಲನೆಯ 5 ರೂ. ಶುಲ್ಕ ಪಾವತಿಸುವಂತೆ ತಿಳಿಸಿದ್ದು, ಲಿಂಕ್ ಮೂಲಕ ಹಣ ಪಾವತಿಯಾಗದಿದ್ದಾಗ ಹೊಸ APK ಫೈಲ್ ಒಂದನ್ನು ಕಳುಹಿಸಿ ಡೌನ್ಲೋಡ್ ಮಾಡಲು ಹೇಳಿದ್ದ.
ಸಂತ್ರಸ್ತ ವ್ಯಕ್ತಿ APK ಫೈಲ್ ಡೌನ್ಲೋಡ್ ಮಾಡುತ್ತಿದ್ದಂತೆ ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ. ಜುಲೈ 21ರ ಬೆಳಗ್ಗೆ ಫೋನ್ ಆನ್ ಆಗದೇ ಇದ್ದಾಗ ಅನುಮಾನಗೊಂಡು ಬ್ಯಾಂಕ್ ಖಾತೆ ಪರಿಶೀಲಿಸಿದಾಗ, ಎಚ್ಡಿಎಫ್ಸಿ ಬ್ಯಾಂಕ್ ಕದ್ರಿ ಶಾಖೆಯಲ್ಲಿದ್ದ ಖಾತೆಯಿಂದ ಹಂತ ಹಂತವಾಗಿ ಒಟ್ಟು 6,82,082 ರೂ. ಕಡಿತಗೊಂಡಿರುವುದು ಬೆಳಕಿಗೆ ಬಂದಿತ್ತು. ಈ ಕುರಿತು ಸೈಬರ್ ಕ್ರೈಂ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am