ಬ್ರೇಕಿಂಗ್ ನ್ಯೂಸ್
25-07-26 07:36 pm HK News Staffer ಕ್ರೈಂ
ಮಂಗಳೂರು, ಜುಲೈ 25: ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬರಿಮಾರ್ ಎಂಬಲ್ಲಿ ಶಾಲಾ ವಾಹನದ ಮೇಲೆ ಮರಬಿದ್ದು ವಾಹನದಲ್ಲಿದ್ದ ಮಗು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಸದ್ರಿ ವಾಹನಕ್ಕೆ ವಿಮೆ ಮತ್ತು ಅರ್ಹತಾ ಪತ್ರ ಇಲ್ಲದೇ ಇದ್ದುದರಿಂದ ಪೊಲೀಸರು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಮರ ಬಿದ್ದು ಆರು ವರ್ಷದ ಮಗು ಮೃತಪಟ್ಟ ಘಟನೆ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಯು.ಡಿ.ಆರ್ ಸಂಖ್ಯೆ 35/20026 ಕಲಂ 194 BNS ಕಾಯ್ದೆಯಂತೆ ಪ್ರಕರಣ ದಾಖಲಾಗಿತ್ತು. ತನಿಖೆ ಮುಂದುವರೆದು ಪ್ರಾದೇಶಿಕ ಸಾರಿಗೆ ಅಧಿಕಾರಿಯವರಿಂದ ಸದ್ರಿ ಶಾಲಾ ವಾಹನದ ದಾಖಲೆ ಪತ್ರಗಳ ಮಾನ್ಯತೆಯ ಬಗ್ಗೆ ವರದಿ ಪಡೆಯಲಾಗಿದ್ದು, ಘಟನಾ ಸಮಯದಲ್ಲಿ ವಾಹನದ ವಿಮಾ ಪತ್ರ ಹಾಗೂ ಅರ್ಹತಾ ಪತ್ರ ಚಾಲ್ತಿಯಲ್ಲಿರದಿರುವುದು ಕಂಡುಬಂದಿರುತ್ತದೆ.
ಸದ್ರಿ ವಾಹನವನ್ನು ಶ್ರೀರಾಮ ವಿದ್ಯಾ ಕೇಂದ್ರದ ಹೆಸರಿನಲ್ಲಿ ನೊಂದಾಯಿಸದೇ, ಬೇರೆ ಟ್ರಸ್ಟ್ ಒಂದರ ಮಾಲಕತ್ವದಲ್ಲಿ ಇರುವುದಾಗಿದೆ. ಅಗತ್ಯ ದಾಖಲೆ ಪತ್ರಗಳನ್ನು ಹೊಂದದೇ ವಿದ್ಯಾರ್ಥಿಗಳ ಸುರಕ್ಷತೆಗೆ ಅಪಾಯವನ್ನುಂಟು ಮಾಡುವಂತಹ ವಾಹನವನ್ನು ಸಾರ್ವಜನಿಕ ಸ್ಥಳದಲ್ಲಿ ಬೇಜವಾಬ್ದಾರಿಯಿಂದ ಚಲಾಯಿಸಲು ಕಾರಣರಾದ ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದ ಆಡಳಿತ ಮಂಡಳಿ ಮುಖ್ಯಸ್ಥರು ಹಾಗೂ ಇತರರ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ:109/2026, ಕಲಂ 125 BNS, ಕಲಂ 196,192(1) IMV Act ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಎಸ್ಪಿ ಕಚೇರಿಯ ಪ್ರಕಟಣೆ ತಿಳಿಸಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am