ಬ್ರೇಕಿಂಗ್ ನ್ಯೂಸ್
31-07-26 08:30 pm HK News Staffer ಕ್ರೈಂ
ಉಡುಪಿ, ಜುಲೈ 31 : ಕುಂದಾಪುರದ ಹೋಲಿ ರೋಸರಿ ಚರ್ಚ್ ರಸ್ತೆಯಲ್ಲಿ ಶುಕ್ರವಾರ ಮುಂಜಾನೆ ನಡೆದ ಬಾರ್ಕೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಹಣಕಾಸು ದ್ವೇಷವೇ ಕಾರಣ ಎನ್ನುವ ಮಾಹಿತಿ ತಿಳಿದುಬಂದಿದೆ. ಅಲ್ಲದೆ, ಕುಂದಾಪುರದ ಡೆರಿಕ್ ಎನ್ನುವ ಸ್ನೇಹಿತನೇ ತೀರಾ ಹತ್ತಿರದಿಂದ ಸೊಂಟದ ಕೆಳಗೆ ಶೂಟ್ ಮಾಡಿ ಕೊಲೆ ಮಾಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣದ ಕುರಿತು ಮಾಹಿತಿ ನೀಡಿದ ಉಡುಪಿ ಎಸ್ಪಿ ಹರಿರಾಮ್ ಶಂಕರ್, ಗುರುವಾರ ರಾತ್ರಿ ಸುಮಾರು 11.45ರಿಂದ ಮುಂಜಾನೆಯ ವರೆಗೆ ಕುಂದಾಪುರ ಮೂಲದ ಡೆರಿಕ್ ಹಾಗೂ ಬಾರ್ಕೂರು ಮೂಲದ ಐವನ್ ನಡುವೆ ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಮೊಬೈಲ್ ಫೋನ್ನಲ್ಲಿ ತೀವ್ರ ಮಾತಿನ ಚಕಮಕಿ ನಡೆದಿದೆ. ಈ ವೇಳೆ ‘ಧೈರ್ಯವಿದ್ದರೆ ಕುಂದಾಪುರಕ್ಕೆ ಬಾ, ಇಲ್ಲೇ ಸೆಟಲ್ ಮಾಡೋಣ’ ಎಂದು ಡೆರಿಕ್, ಐವಾನ್ಗೆ ಸವಾಲು ಹಾಕಿದ್ದ. ಚಾಲೆಂಜ್ ಸ್ವೀಕರಿಸಿದ ಐವಾನ್ ತನ್ನ ಕಾರಿನಲ್ಲಿ ಆಗಮಿಸಿ ಕುಂದಾಪುರದ ಹೋಲಿ ರೋಸರಿ ಚರ್ಚ್ ಎದುರು ನಿಲ್ಲಿಸಿದ್ದರು.

ಐವಾನ್ ಕಾರಿನಿಂದ ಕೆಳಗಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ತನ್ನ ಕಾರಿನಲ್ಲಿ ಬಂದಿಳಿದ ಆರೋಪಿ ಡೆರಿಕ್, ಏಕಾಏಕಿ ಪಿಸ್ತೂಲ್ ತೆಗೆದು ಐವಾನ್ ಅವರ ಸೊಂಟದ ಕೆಳಭಾಗಕ್ಕೆ ಗುಂಡು ಹಾರಿಸಿದ್ದಾನೆ. ಇದರಿಂದ ತೀವ್ರ ರಕ್ತಸ್ರಾವದಿಂದಾಗಿ ಐವಾನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೃತ್ಯ ಎಸಗಿದ ಬಳಿಕ ಆರೋಪಿ ಡೆರಿಕ್ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಎಸ್ಪಿ ತಿಳಿಸಿದ್ದಾರೆ.
ಘಟನೆ ಸಂಬಂಧ ಕುಂದಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮಣಿಪಾಲದ ಫೊರೆನ್ಸಿಕ್ ವಿಭಾಗಕ್ಕೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು ಸ್ಥಳದಲ್ಲಿ ವಿಧಿ ವಿಜ್ಞಾನ ತಜ್ಞರು ಪರಿಶೀಲನೆ ನಡೆಸಿದ್ದಾರೆ. ಪರಾರಿಯಾಗಿರುವ ಆರೋಪಿ ಡೆರಿಕ್ ಬಂಧನಕ್ಕೆ ಮೂರು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದ್ದು, ಶೀಘ್ರದಲ್ಲೇ ಆತನನ್ನು ಬಂಧಿಸಲಾಗುವುದು ಎಂದು ಎಸ್ಪಿ ಹರಿರಾಮ್ ಶಂಕರ್ ಸ್ಪಷ್ಟಪಡಿಸಿದ್ದಾರೆ.
ಮೃತ ಐವಾನ್ ರಿಚರ್ಡ್ ಉಡುಪಿ ನಗರ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದು ಈ ಹಿಂದೆ ಪಿಟ್ಟಿ ನಾಗೇಶ್ ಕೊಲೆಯಲ್ಲಿ ಆರೋಪಿಯಾಗಿದ್ದ. ಇದೀಗ ಹಣಕಾಸು ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಸ್ನೇಹಿತನಿಂದಲೇ ಕೊಲೆಯಾಗಿದ್ದಾನೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 07:03 pm
HK News Staffer
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
31-07-26 08:30 pm
HK News Staffer
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm
ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ ; ಚರ್...
31-07-26 12:00 pm
ಸ್ಟಿಂಗ್ ವಿಡಿಯೋದಲ್ಲಿ ಲಂಚ ಸ್ವೀಕಾರ ದೃಶ್ಯ ಸೆರೆ ;...
30-07-26 09:24 pm