ಬ್ರೇಕಿಂಗ್ ನ್ಯೂಸ್
05-08-26 04:42 pm HK News Staffer ಕ್ರೈಂ
ಉಳ್ಳಾಲ, ಆಗಸ್ಟ್ 05: ಬಾಡಿಗೆ ಮನೆ ಬೇಕೆಂದು ನಂಬಿಸಿ ಮನೆಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು, ವೃದ್ಧೆಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಸುಮಾರು 3 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದರೋಡೆ ಮಾಡಿ ಪರಾರಿಯಾದ ಘಟನೆ ಉಳ್ಳಾಲ ತಾಲೂಕಿನ ಕುರ್ನಾಡು ಗ್ರಾಮದ ಕಾಯರಗೋಳಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಪೊಲೀಸರು ಸಿಸಿಟಿವಿ ಪರಿಶೀಲಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಕಾಯರಗೋಳಿ ನಿವಾಸಿ ಭವಾನಿ ಅವರ ಮನೆಯಲ್ಲಿ ಆಗಸ್ಟ್ 3ರಂದು ಮಧ್ಯಾಹ್ನ ಸುಮಾರು 1.15ರ ವೇಳೆಗೆ ಈ ಕೃತ್ಯ ನಡೆದಿದೆ. ಮಗ ಕೆಲಸಕ್ಕೆ ತೆರಳಿದ್ದ ವೇಳೆ ಮನೆಗೆ ಬಂದ ಇಬ್ಬರು ಅಪರಿಚಿತ ಯುವಕರು, "ನಾವು ಇನ್ಫೋಸಿಸ್ನಲ್ಲಿ ಕೆಲಸ ಮಾಡುತ್ತೇವೆ. ನಮಗೆ ಬಾಡಿಗೆ ಮನೆ ಬೇಕು. ಬ್ರಾಹ್ಮಣರಿಗೆ ಮನೆ ಇದೆಯೇ?" ಎಂದು ಕೇಳಿದ್ದಾರೆ.
ಭವಾನಿ ಅವರು "ಮಗ ಬಂದ ನಂತರ ಕೇಳಿ ಹೇಳುತ್ತೇನೆ" ಎಂದಾಗ, ಆರೋಪಿಗಳು ಮಗನ ಮೊಬೈಲ್ ಸಂಖ್ಯೆಯನ್ನು ಕೇಳಿದ್ದಾರೆ. ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ತಿಳಿಸಿದ ಬಳಿಕ ವೃದ್ಧೆ ಬಾಗಿಲು ಮುಚ್ಚಲು ಮುಂದಾದಾಗ, ಆರೋಪಿಗಳು ಬಾಗಿಲನ್ನು ಬಲವಾಗಿ ತಳ್ಳಿ ಮನೆಯೊಳಗೆ ನುಗ್ಗಿದ್ದಾರೆ.
ಬಾಯಿ ಮುಚ್ಚಿ ಹಲ್ಲೆ... ಚಿನ್ನ ಕಸಿದು ಪರಾರಿ;
ಬಾಗಿಲು ತಳ್ಳಿದ ರಭಸಕ್ಕೆ ವೃದ್ಧೆ ಕೆಳಗೆ ಬಿದ್ದಿದ್ದು, ಅವರು ಬೊಬ್ಬೆ ಹಾಕುತ್ತಿದ್ದಂತೆ ಒಬ್ಬ ಆರೋಪಿ ಅವರ ಬಾಯಿಯನ್ನು ಬಿಗಿಯಾಗಿ ಒತ್ತಿಹಿಡಿದಿದ್ದಾನೆ. ಮತ್ತೊಬ್ಬ ಆರೋಪಿ ಕುತ್ತಿಗೆಯಲ್ಲಿದ್ದ 16 ಗ್ರಾಂ ತೂಕದ ಚಿನ್ನದ ಸರ ಹಾಗೂ ಬಲಗೈಯಲ್ಲಿದ್ದ 8 ಗ್ರಾಂ ತೂಕದ ಚಿನ್ನದ ಬಳೆಯನ್ನು ಬಲವಂತವಾಗಿ ಕಸಿದುಕೊಂಡಿದ್ದಾನೆ.
ಇನ್ನೂ ಎಡಗೈಯಲ್ಲಿದ್ದ ಬಳೆಯನ್ನೂ ಕಸಿದುಕೊಳ್ಳಲು ಯತ್ನಿಸಿದ್ದು, ಸಾಧ್ಯವಾಗದಾಗ ವೃದ್ಧೆಯ ಕೈಗೆ ಗಾಯಗೊಳಿಸಿ, ಮನೆಯ ಬಾಗಿಲನ್ನು ಹೊರಗಿನಿಂದ ಚಿಲಕ ಹಾಕಿ ಪರಾರಿಯಾಗಿದ್ದಾರೆ.
ದರೋಡೆಕೋರರ ಹಲ್ಲೆಯಿಂದ ವೃದ್ಧೆಯ ಕೈ ಹಾಗೂ ಮಣಿಗಂಟಿಗೆ ತೀವ್ರ ಗಾಯಗಳಾಗಿದ್ದು, ದೋಚಲ್ಪಟ್ಟ ಚಿನ್ನಾಭರಣಗಳ ಒಟ್ಟು ಮೌಲ್ಯ ಸುಮಾರು ₹3 ಲಕ್ಷ ಎಂದು ಅಂದಾಜಿಸಲಾಗಿದೆ. ಘಟನೆಯ ಸುಮಾರು ಅರ್ಧ ಗಂಟೆಯ ಬಳಿಕ ಮಗಳು ಪ್ರತಿಭಾ ಮನೆಗೆ ಬಂದಾಗ ವೃದ್ಧೆ ಗಾಯಗೊಂಡಿರುವುದು ಮತ್ತು ದರೋಡೆ ನಡೆದಿರುವುದು ಬೆಳಕಿಗೆ ಬಂದಿದೆ.
ಸಿಸಿಟಿವಿ ಆಧರಿಸಿ ಆರೋಪಿಗಳಿಗೆ ಶೋಧ;
ಪ್ರಕರಣ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
05-08-26 10:56 pm
mangalore
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
ರಾಜಕೀಯ ಡಬಲ್ ಗೇಮ್, ಮೋಸದಿಂದ ಕೂಡಿದೆ; ತಲೆ ಹೊಡೆದವ...
04-08-26 08:11 pm
ಸಂಪುಟ ಸಂಕಟ; ಸಚಿವ ಸ್ಥಾನ ಸಿಗದ್ದಕ್ಕೆ ರಾಜ್ಯಾದ್ಯಂತ...
04-08-26 03:53 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
05-08-26 08:08 pm
HK News Staffer
ಉಳ್ಳಾಲ ಚೀರುಂಭ ಭಗವತಿ ಕ್ಷೇತ್ರ ; ಸಂಘ ನೋಂದಣಿ ಆಗಿಲ...
03-08-26 10:50 pm
Sweethin Harman, Latent Show, Mangalore: ಜನಪ್...
03-08-26 11:42 am
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
05-08-26 09:08 pm
HK News Staffer
ಯಾದಗಿರಿ ಔಷಧ ಕಂಪನಿಯಲ್ಲಿ ಭೀಕರ ದುರಂತ ; ರಾಸಾಯನಿಕ...
05-08-26 06:20 pm
ಬ್ರಾಹ್ಮಣರಿಗೆ ಮನೆ ಇದೆಯೇ? ನಾವು ಇನ್ಫೋಸಿಸ್ ಉದ್ಯೋಗ...
05-08-26 04:42 pm
ಕಾಡಾನೆ ಜೊತೆ ಸೆಲ್ಫಿ ತೆಗೆಯಲು ಹೋಗಿ ಜೀವ ಕಳೆದುಕೊಂಡ...
05-08-26 04:29 pm
Srinivas College Ragging, Mangalore: ಶ್ರೀನಿವಾ...
05-08-26 11:44 am