ಬ್ರೇಕಿಂಗ್ ನ್ಯೂಸ್
06-08-26 10:05 am HK News Staffer ಕ್ರೈಂ
ಮಂಗಳೂರು, ಆಗಸ್ಟ್ 6: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು ಎನ್ಐಎ ಅಧಿಕಾರಿಗಳು ಕೇರಳದ ಕೊಚ್ಚಿಯಲ್ಲಿ ಬಲೆಗೆ ಕೆಡವಿದ್ದಾರೆ.
ತಲೆಮರೆಸಿಕೊಂಡ ಆರೋಪಿಗಳೆಂದು ಘೋಷಿಸಲ್ಟಟ್ಟಿದ್ದ ಸುಳ್ಯ ತಾಲೂಕಿನ ಕಲ್ಲುಮುಟ್ಲು ನಿವಾಸಿ ಉಮರ್ ಫಾರೂಕ್ ನನ್ನು ಕೊಚ್ಚಿಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ. 2022ರ ಜುಲೈ 26ರಂದು ರಾತ್ರಿ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆಯಾಗಿತ್ತು. ಪಿಎಫ್ಐ ಸಂಘಟನೆ ಕಾರ್ಯಕರ್ತರು ಹಿಂದು ನಾಯಕರ ಹತ್ಯೆ ಸಂಚಿನ ಭಾಗವಾಗಿ ಪ್ರವೀಣ್ ಕೊಲೆ ಮಾಡಿದ್ದರು ಎಂದು ಎನ್ಐಎ ತನಿಖೆಯಲ್ಲಿ ತಿಳಿಸಿತ್ತು. ಪ್ರಕರಣದಲ್ಲಿ 20ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದು ಆರು ಮಂದಿ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದರು. ಅವರ ಪತ್ತೆಗಾಗಿ ಮಾಹಿತಿ ಕೊಟ್ಟವರಿಗೆ ತಲಾ ಎರಡು ಲಕ್ಷದ ಬಹುಮಾನ ಘೋಷಿಸಲಾಗಿತ್ತು.
ಒಬ್ಬೊಬ್ಬರನ್ನೇ ಎನ್ಐಎ ಬಲೆಗೆ ಕೆಡವಿದ್ದು ಇತ್ತೀಚೆಗೆ ಜುಲೈ 11ರಂದು ಇಬ್ಬರು ಆರೋಪಿಗಳಾದ ನೌಷದ್ ಹಾಗು ನಾಸೀರ್ ನನ್ನು ಎನ್ಐಎ ಬಂಧಿಸಿತ್ತು. ವಿಚಾರಣೆ ಸಂದರ್ಭದಲ್ಲಿ ಉಮ್ಮರ್ ಫಾರೂಕ್ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳ ತಂಡ ಕೇರಳದ ಕೊಚ್ಚಿಯಲ್ಲಿ ಅಡಗಿ ಕುಳಿತಿದ್ದ ಉಮ್ಮರ್ ಫಾರೂಕ್ ನನ್ನು ಸೆರೆಹಿಡಿದಿದೆ. ಕೃತ್ಯ ಎಸಗಿದ ಪ್ರಮುಖ ಆರೋಪಿಗಳಿಗೆ ತಲೆಮರೆಸಿಕೊಳ್ಳಲು ಉಮ್ಮರ್ ಫಾರೂಕ್ ಸಹಕರಿಸಿದ್ದ ಎನ್ನಲಾಗಿದ್ದು ಈ ಹಿನ್ನೆಲೆಯಲ್ಲಿ ಪ್ರಕರಣದ 13ನೇ ಆರೋಪಿಯೆಂದು ಗುರುತಿಸಲಾಗಿತ್ತು. ಎರಡು ವರ್ಷ ತಲೆಮರೆಸಿಕೊಂಡ ಬಳಿಕ ಕೊಚ್ಚಿಯಲ್ಲಿ ವಾಸ್ತವ್ಯ ಹೂಡಿ ಅಲ್ಲಿಯೇ ಕೆಲಸಕ್ಕೂ ಸೇರಿಕೊಂಡಿದ್ದ ಎನ್ನುವ ಮಾಹಿತಿ ಲಭಿಸಿದೆ.
06-08-26 03:49 pm
HK News Staffer
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 09:33 pm
HK News Staffer
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
ಉಳ್ಳಾಲ ಚೀರುಂಭ ಭಗವತಿ ಕ್ಷೇತ್ರ ; ಸಂಘ ನೋಂದಣಿ ಆಗಿಲ...
03-08-26 10:50 pm
Sweethin Harman, Latent Show, Mangalore: ಜನಪ್...
03-08-26 11:42 am
06-08-26 09:31 pm
HK News Staffer
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm
ಬೆಂಗಳೂರು ; ಒಂದು ತಿಂಗಳ ಹಿಂದೆ ನೇಪಾಳದಿಂದ ಕೆಲಸಕ್ಕ...
06-08-26 06:13 pm
7 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ...
06-08-26 11:48 am
Surathkal Student Death: ಸುರತ್ಕಲ್ ; ವಾಲಿಬಾಲ್...
06-08-26 11:47 am