ಬ್ರೇಕಿಂಗ್ ನ್ಯೂಸ್
14-08-26 10:22 am HK News Staffer ಕ್ರೈಂ
ಉಡುಪಿ, ಆ.14: ಅಧಿಕ ಬಡ್ಡಿ ವಿಧಿಸಿ ಸಾಲ ನೀಡಿ, ಕಂತು ಪಾವತಿಸದೇ ಇದ್ದುದಕ್ಕೆ ಕಿರುಕುಳ ನೀಡಿದ್ದಲ್ಲದೆ, ಬಲವಂತವಾಗಿ ದ್ವಿಚಕ್ರ ವಾಹನ ಕಸಿದು ಹಲ್ಲೆ ನಡೆಸಿದ ಆರೋಪದಲ್ಲಿ ಮಂಗಳೂರಿನ ಫೈನಾನ್ಸ್ ಸಂಸ್ಥೆಯ ಮೂವರು ಸಿಬ್ಬಂದಿಯನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಕುಳಾಯಿ ನಿವಾಸಿ ಸಂದೀಪ್ ಶೆಟ್ಟಿ, ಕಾವೂರಿನ ವಿಜೀತ್ ಶೆಟ್ಟಿ ಹಾಗೂ ಮಳವೂರಿನ ಸಂಪತ್ ಬಂಧಿತ ಆರೋಪಿಗಳು.
ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಜಾಲು ಪರಿಸರದಲ್ಲಿ ಈ ಫೈನಾನ್ಸ್ ಸಂಸ್ಥೆಯು ಅಧಿಕ ಬಡ್ಡಿ ದರದಲ್ಲಿ ಸಾಲ ನೀಡುತ್ತಿತ್ತು. ಸಾಲದ ಕಂತು ಬಾಕಿ ಉಳಿದಾಗ ಸಾರ್ವಜನಿಕರನ್ನು ಪೀಡಿಸುತ್ತಿದ್ದರೆಂದು ಆರೋಪಿಸಲಾಗಿದೆ. ಇತ್ತೀಚೆಗೆ ಸಾಲದ ಕಂತು ಬಾಕಿ ಇಟ್ಟ ಕಾರಣಕ್ಕೆ ಕುಂಜಾಲಿನ ಗಣೇಶ್ ಗಾಣಿಗ ಎಂಬವರ ಮೋಟಾರು ಸೈಕಲನ್ನು ಬಲವಂತವಾಗಿ ಕಸಿದುಕೊಂಡು ಹೋಗಿದ್ದರು. ಇದನ್ನು ಪ್ರಶ್ನಿಸಿದ ಜಾಮೀನುದಾರ ರಾಜೇಶ್ ನಾಯ್ಕ್ ಅವರ ಮೇಲೆ ಆರೋಪಿಗಳು ಹಲ್ಲೆ ನಡೆಸಿದ್ದರು.
ರಾಜೇಶ್ ನಾಯ್ಕ್ ನೀಡಿದ ದೂರಿನನ್ವಯ ‘ಸಾಲಕ್ಕೆ ಅಧಿಕ ಬಡ್ಡಿ ವಿಧಿಸುವುದನ್ನು ನಿಷೇಧಿಸುವ ಕಾಯ್ದೆ-2004’ ರ ಕಲಂ 3 ಮತ್ತು 4ರ ಅಡಿಯಲ್ಲಿ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಬೆನ್ನತ್ತಿದ ಪೊಲೀಸರು ಆರೋಪಿಗಳಾದ ಸಂದೀಪ್ ಶೆಟ್ಟಿ ಹಾಗೂ ವಿಜೀತ್ ಶೆಟ್ಟಿಯನ್ನು ಆಗಸ್ಟ್ 6ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿ ಸಂಪತ್ನನ್ನು ಆಗಸ್ಟ್ 13ರಂದು ಬಂಧಿಸಲಾಗಿದೆ. ಆರೋಪಿಗಳು ಬಲವಂತವಾಗಿ ಕಸಿದುಕೊಂಡಿದ್ದ ಮೋಟಾರು ಸೈಕಲ್ ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ಪೊಲೀಸರು ವಶಪಡಿಸಿದ್ದಾರೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm