ಬ್ರೇಕಿಂಗ್ ನ್ಯೂಸ್
18-08-26 10:06 pm HK News Staffer ಕ್ರೈಂ
ವಿಜಯಪುರ, ಆ 18: ಆಸ್ತಿ ವಿವಾದ ಹಾಗೂ ವಿವಾಹೇತರ ಸಂಬಂಧ ವಿರೋಧ ವ್ಯಕ್ತಪಡಿಸಿದ ತಂದೆಯನ್ನು ಸ್ವಂತ ಪುತ್ರಿಯೇ ತನ್ನ ಪ್ರಿಯಕರ ಹಾಗೂ ಆತನ ಸ್ನೇಹಿತನ ಜೊತೆ ಸೇರಿ ಕೊಲೆ ಮಾಡಿರುವ ಘಟನೆ ಇಂಡಿ ತಾಲೂಕಿನ ಚೌಡಿಹಾಳ್ ರಸ್ತೆಯ ಪೂಜಾರಿ ವಸ್ತಿ ತೋಟದ ಬಳಿ ನಡೆದಿದೆ. ನಿವೃತ್ತ ಶಿಕ್ಷಕರಾಗಿರುವ ಸಿದ್ದಪ್ಪ ಅಂಜುಟಗಿ(62) ಕೊಲೆಯಾದವರು. ಘಟನೆ ಸಂಬಂಧ ಪುತ್ರಿ ಪ್ರಿಯಾಂಕಾ, ಆಕೆಯ ಪ್ರಿಯಕರ ಸಂತೋಷನನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಆರೋಪಿ ಗುರುರಾಜ ಬಿರಾದಾರ್ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಚೌಡಿಹಾಳ ರಸ್ತೆಯಲ್ಲಿ ಸಿದ್ದಪ್ಪ ಮೃತದೇಹ ಪತ್ತೆಯಾಗಿತ್ತು. ಆರಂಭದಲ್ಲಿ ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿರಬಹುದು ಎಂದು ಅಂದಾಜಿಸಲಾಗಿತ್ತು. ಮೃತ ಸಿದ್ದಪ್ಪ ಅವರ ಹಿರಿಯ ಪುತ್ರಿ ನಿಖಿತಾ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸಿದಾಗ ಪುತ್ರಿಯೇ ತನ್ನ ಪ್ರಿಯಕರನ ಜೊತೆ ಹತ್ಯೆ ಮಾಡಿರುವ ವಿಷಯ ಬಯಲಾಗಿದೆ.
ಕಳೆದ ಎರಡು ವರ್ಷಗಳ ಹಿಂದೆ ಸಿದ್ದಪ್ಪ ನಿವೃತ್ತಿಯಾಗಿದ್ದರು. ಈ ವೇಳೆ ಅವರಿಗೆ ನಿವೃತ್ತಿ ಹಣ ಬಂದಿತ್ತು. ಇದರ ಜೊತೆಗೆ ಊರಲ್ಲಿ ಸ್ವಲ್ಪ ಆಸ್ತಿ ಇತ್ತು. ಈ ಆಸ್ತಿ ವಿಚಾರಕ್ಕೆ ತಂದೆ, ಮಗಳ ನಡುವೆ ಗಲಾಟೆ ನಡೆಯುತ್ತಿತ್ತು. ಪ್ರಿಯಾಂಕಾ ಪತಿ ಸುರೇಶ ಮಸಳಿ ಕೊರೊನಾ ಸಾಂಕ್ರಾಮಿಕದ ವೇಳೆ ಮೃತಪಟ್ಟಿದ್ದರು. ಇದರಿಂದ ಕೆಲಕಾಲ ವಿಜಯಪುರದಲ್ಲಿ ವಾಸವಿದ್ದ ಪ್ರಿಯಾಂಕಾಗೆ ಆಟೋ ಚಾಲಕ ಸಂತೋಷ ಸಿಂಧೆ ಜೊತೆಗೆ ಸಂಬಂಧ ಬೆಳೆದಿತ್ತು. ಈ ಅಕ್ರಮ ಸಂಬಂಧಕ್ಕೆ ತಂದೆ ವಿರೋಧ ವ್ಯಕ್ತಪಡಿಸಿ, ಆಸ್ತಿಯಲ್ಲಿ ಪಾಲು ನೀಡೋದಿಲ್ಲ ಎಂದಿದ್ದರು. ಇದು ಪ್ರಿಯಾಂಕಾಳ ಕೋಪಕ್ಕೆ ಕಾರಣವಾಗಿತ್ತು. ಆಸ್ತಿ ವಿಚಾರದಲ್ಲಿ ತಂದೆಯೊಂದಿಗೆ ಆಗಸ್ಟ್ 15 ರಂದು ಪ್ರಿಯಾಂಕಾ ಗಲಾಟೆ ಮಾಡಿದ್ದಾಳೆ. ಗಲಾಟೆ ವಿಕೋಪಕ್ಕೆ ಹೋಗಿದೆ. ಈ ವೇಳೆ ಪ್ರಿಯಾಂಕಾ ತನ್ನ ಪ್ರಿಯಕರ ಸಂತೋಷನಿಗೆ ಮನೆಗೆ ಬರಲು ಹೇಳಿದ್ದಾಳೆ. ರಾತ್ರಿ ಪ್ರಿಯಾಂಕಾ ಮನೆಗೆ ಹೋದ ಸಂತೋಷ ಹಾಗೂ ಆತನ ಸ್ನೇಹಿತ ಮೊದಲು ಸಿದ್ದಪ್ಪನನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ. ಬಳಿಕ ದೊಡ್ಡ ಕಲ್ಲಿನಿಂದ ಜಜ್ಜಿದ್ದಾರೆ. ನಂತರ ಮೃತದೇಹವನ್ನು ರಸ್ತೆ ಪಕ್ಕದಲ್ಲಿ ಎಸೆದು ಪರಾರಿಯಾಗಿದ್ದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾರೆ.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
18-08-26 02:42 pm
HK News Staffer
ನಿತಿನ್ ನಬಿನ್ ಸಾರಥ್ಯದಲ್ಲಿ ಬಿಜೆಪಿಗೆ ಹೊಸ ಟೀಮ್ ;...
17-08-26 09:45 pm
ಪ್ರಧಾನಿ ‘ದಿಮಾಗಿ ನಕ್ಸಲರು’ ಹೇಳಿಕೆಗೆ ರಿಜಿಜು ಅರ್ಥ...
17-08-26 05:38 pm
ನೀಟ್ ಪರೀಕ್ಷೆ ರದ್ದುಗೊಳಿಸಲು ತಮಿಳುನಾಡು ವಿಧಾನಸಭೆಯ...
11-08-26 10:25 pm
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
17-08-26 05:07 pm
HK News Staffer
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
18-08-26 10:06 pm
HK News Staffer
ಮೊಬೈಲ್ ಗೀಳು ಬೇಡ ಎಂದಿದ್ದ ಅಜ್ಜನನ್ನೇ ಕೊಲ್ಲಿಸಿದ 1...
18-08-26 06:02 pm
ಚಿಕ್ಕಬಾಣಾವರ ತಂದೆ, ಮಗು ಸಾವಿಗೆ ರೋಚಕ ಟ್ವಿಸ್ಟ್ ;...
18-08-26 03:00 pm
ಬೆಳಗಾವಿಯಲ್ಲಿ ಬೀದಿ ನಾಯಿಗಳ ಅಟ್ಟಹಾಸ ; ವೃದ್ಧನ ಮೇಲ...
17-08-26 10:04 pm
ದಾಂಡೇಲಿ ವೈಲ್ಡರ್ ನೆಸ್ಟ್ ರೆಸಾರ್ಟ್ಗೆ ನುಗ್ಗಿದ ಬ್...
17-08-26 10:02 pm