ಬ್ರೇಕಿಂಗ್ ನ್ಯೂಸ್
24-08-26 01:03 pm HK News Staffer ಕ್ರೈಂ
ಮಂಗಳೂರು, ಆ.24: ಮಕ್ಕಳು ಆಟವಾಡುತ್ತಿದ್ದಾಗ ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ 25 ವರ್ಷದ ಯುವಕನೊಬ್ಬ ನೀರಿನಲ್ಲಿ ಮುಳುಗಿ ದಾರುಣ ಸಾವಿಗೀಡಾದ ಘಟನೆ ನಗರದ ಕಸಬಾ ಬೆಂಗ್ರೆಯ ಫೆರಿ ಪಾಯಿಂಟ್ ಬಳಿ ನಡೆದಿದೆ.
ಕಸಬಾ ಬೆಂಗ್ರೆ ನಿವಾಸಿಗಳಾದ ಮುಹಮ್ಮದ್ ಸಾಲಿ ಹಾಗೂ ಜೊಹರಾ ದಂಪತಿಯ ಪುತ್ರ ಮಹಮ್ಮದ್ ಸನಾವುಲ್ಲ (25) ಮೃತ ದುರ್ದೈವಿ. ಇಂಟೀರಿಯರ್ ಡಿಸೈನಿಂಗ್ ಹಾಗೂ ವೆಲ್ಡಿಂಗ್ ವೃತ್ತಿ ಮಾಡುತ್ತಿದ್ದ ಸನಾವುಲ್ಲಾ, ತಂದೆ, ತಾಯಿ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.

ಭಾನುವಾರ ಸಂಜೆ ಫೆರಿ ಪಾಯಿಂಟ್ ಬಳಿ ಮಕ್ಕಳು ಫುಟ್ಬಾಲ್ ಆಡುತ್ತಿದ್ದಾಗ ಚೆಂಡು ಆಕಸ್ಮಿಕವಾಗಿ ನದಿಗೆ ಬಿದ್ದಿದೆ. ಅದನ್ನು ತೆಗೆದುಕೊಡಲು ಸನಾವುಲ್ಲಾ ನದಿಗೆ ಇಳಿದಿದ್ದಾರೆ. ಸನಾವುಲ್ಲಾಗೆ ಈಜು ಬರುತ್ತಿತ್ತಾದರೂ ನದಿಯ ಸೆಳೆತ ಅಥವಾ ಕೆಸರಿನಿಂದಾಗಿ ಅವರು ನೀರಿನಲ್ಲಿ ಸಿಲುಕಿದ್ದು ಮೇಲೆ ಬರಲಾಗದೆ ಮುಳುಗಿದ್ದಾರೆ. ಸ್ಥಳೀಯರು ತಕ್ಷಣ ಹುಡುಕಾಟ ನಡೆಸಿ ಸನಾವುಲ್ಲಾನನ್ನು ಮೇಲೆತ್ತಿ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಕರೆದೊಯ್ದರೂ, ಅಷ್ಟರಲ್ಲಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈದ್ ಹಬ್ಬದ ನಡುವಲ್ಲೇ ಯುವಕ ಪ್ರಾಣ ಚೆಲ್ಲಿದ್ದು ಆಸುಪಾಸಿನಲ್ಲಿ ಮುಸ್ಲಿಂ ಗೆಳೆಯರಲ್ಲಿ ಶೋಕಸಾಗರ ಸೃಷ್ಟಿಸಿದೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:25 pm
HK News Staffer
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm