ಬ್ರೇಕಿಂಗ್ ನ್ಯೂಸ್
28-08-26 09:03 pm HK News Staffer ಕ್ರೈಂ
ಬೆಂಗಳೂರು, ಆ.28: ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯನ್ನು ನೀಲಾದ್ರಿ ರಸ್ತೆಯ ಪಬ್ನಲ್ಲಿ ಭೇಟಿಯಾಗಲು ಹೋಗಿದ್ದ ಕೇರಳದ 33 ವರ್ಷದ ವ್ಯಕ್ತಿಯನ್ನು ಅಪಹರಿಸಿದ ತಂಡವೊಂದು ಸುಮಾರು 3.75 ಲಕ್ಷ ರೂ.ಗಳನ್ನು ದೋಚಿರುವ ಘಟನೆ ಬೆಳಕಿಗೆ ಬಂದಿದೆ.
ಹೊಸೂರು ಮುಖ್ಯ ರಸ್ತೆಯ ಟೆರಾಕಾನ್ ಲೇಔಟ್ ನಿವಾಸಿಯನ್ನು ಆಗಸ್ಟ್ 19ರಂದು ಭೇಟಿಯಾಗಿದ್ದ ಹುಡುಗಿ ರಾತ್ರಿ 10 ಗಂಟೆ ಸುಮಾರಿಗೆ ತನ್ನ ಕಾರಿನಲ್ಲಿ ನಿರ್ಜನ ಸ್ಥಳಕ್ಕೆ ಕರೆದೊಯ್ದಿದ್ದು ಅಲ್ಲಿ ವಿಶ್ರಾಂತಿ ಪಡೆಯೋಣ ಎಂದು ಕಾರು ನಿಲ್ಲಿಸಿದ್ದಳು. ಈ ಮಧ್ಯೆ, ಅಲ್ಲಿಗೆ ಬಂದ ಅವಳ ನಾಲ್ವರು ಸ್ನೇಹಿತರು ಖಾಸಗಿ ಕಂಪನಿ ಉದ್ಯೋಗಿಯಾಗಿದ್ದ ಯುವಕನನ್ನು ತಮ್ಮ ಕಾರಿನಲ್ಲಿ ಎಳೆದೊಯ್ದಿದ್ದರು. ಅಲ್ಲಿಂದ ಬೇರೊಂದು ಸ್ಥಳಕ್ಕೆ ಕರೆದೊಯ್ದು ಅವನ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ಗಳನ್ನು ಬಳಸಿ ಎಟಿಎಂ ಕೇಂದ್ರಗಳಿಂದ ಹಣವನ್ನು ವಸೂಲಿ ಮಾಡಿದ್ದಾರೆ.
ಮರುದಿನ ಬೆಳಗ್ಗೆ 10 ಗಂಟೆ ಸುಮಾರಿಗೆ ಎಲೆಕ್ಟ್ರಾನಿಕ್ಸ್ ಸಿಟಿ ಮೆಟ್ರೋ ನಿಲ್ದಾಣದ ಬಳಿ ಯುವಕನನ್ನು ಇಳಿಸಿದ ನಂತರ ಆರೋಪಿಗಳು ಪರಾರಿಯಾಗಿದ್ದಾರೆ. ಈ ಬಗ್ಗೆ ಯುವಕ, ಪೂನಮ್ ಎಂದು ಪರಿಚಯಿಸಿಕೊಂಡಿದ್ದ ಹುಡುಗಿ ಮತ್ತು ಅವಳ ನಾಲ್ವರು ಅಪರಿಚಿತ ಸಹಚರರ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ.
ಎಲೆಕ್ಟ್ರಾನಿಕ್ಸ್ ಸಿಟಿ ನಿವಾಸಿ ಎಂದು ಹೇಳಿಕೊಂಡಿದ್ದ ಹುಡುಗಿ, ಯುವಕನಿಗೆ ಕರೆ ಮಾಡಿ ನೀಲಾದ್ರಿ ರಸ್ತೆಯಲ್ಲಿರುವ ಪಬ್ನಲ್ಲಿ ಭೇಟಿಯಾಗಲು ಕೇಳಿಕೊಂಡಿದ್ದಳು. ಆಕೆಯ ನಿಗೂಢ ಜಾಲದ ಅರಿವಿಲ್ಲದೇ ರಾತ್ರಿ 9.45 ರ ಸುಮಾರಿಗೆ ಆತ ಪಬ್ಗೆ ಹೋಗಿದ್ದ. ಬಿಳಿ ಕಾರಿನಲ್ಲಿ ಬಂದಿದ್ದ ಹುಡುಗಿ, ತಾನು ಪೆಟ್ರೋಲ್ ಬಂಕ್ಗೆ ಹೋಗಬೇಕೆಂದು ಹೇಳಿ ಯುವಕನನ್ನು ಕರೆದುಕೊಂಡು ಹೋಗಿದ್ದಳು. ಆದರೆ ಆಕೆಯೊಂದಿಗೆ ತೆರಳಿದ ಯುವಕನನ್ನು ಸಹಚರರು ಸೇರಿ ಅಪಹರಿಸಿ ಹಣ ವಸೂಲಿ ಮಾಡಿದ್ದಾರೆ. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಅಪಹರಣ, ಸುಲಿಗೆ ಮತ್ತು ಕ್ರಿಮಿನಲ್ ಪಿತೂರಿ ಪ್ರಕರಣ ದಾಖಲಾಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm