ಬ್ರೇಕಿಂಗ್ ನ್ಯೂಸ್
29-08-26 11:40 am HK News Staffer ಕ್ರೈಂ
ತುಮಕೂರು, ಆಗಸ್ಟ್ 29: ಓವರ್ಟೇಕ್ ಮಾಡುವ ವೇಳೆ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ನಾಲ್ವರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಗೇಟ್ ಬಳಿ ನಡೆದಿದೆ.
ಚಿಕ್ಕನಾಯಕನಹಳ್ಳಿ ಕಡೆಯಿಂದ ಬರುತ್ತಿದ್ದ ವೋಕ್ಸ್ವ್ಯಾಗನ್ ಕಾರು ಹಾಗೂ ತುರುವೇಕೆರೆ ಕಡೆಯಿಂದ ಬರುತ್ತಿದ್ದ ಕಿಯಾ ಸಾನೆಟ್ ಕಾರು ನಡುವೆ ಅಪಘಾತ ಸಂಭವಿಸಿದೆ. ವೋಕ್ಸ್ವ್ಯಾಗನ್ ಕಾರು ಓವರ್ಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಕಿಯಾ ಸಾನೆಟ್ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಅಪಘಾತದ ರಭಸಕ್ಕೆ ಎರಡೂ ಕಾರುಗಳು ಜಖಂಗೊಂಡಿದ್ದು, ಎರಡೂ ವಾಹನಗಳಲ್ಲಿದ್ದ ತಲಾ ಇಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ದಾವುದ್ ಪಾಷ (38), ಆನಂ (3), ಅನಿಲ್ (32) ಹಾಗೂ ವಿವೇಕ್ (31) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಯಾಸ್ಮಿನತಾಬ್ (21), ಸೀಮಾ (64), ಆಸ್ಮ (38) ಸೇರಿದಂತೆ ನಾಲ್ವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣ ಚಿಕ್ಕನಾಯಕನಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತಕ್ಕೂ ಮುನ್ನ ಚಿಕ್ಕನಾಯಕನಹಳ್ಳಿ ಕಡೆಯಿಂದ ಬರುತ್ತಿದ್ದ ವೋಕ್ಸ್ವ್ಯಾಗನ್ ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಮತ್ತೊಂದೆಡೆ ತುರುವೇಕೆರೆ ಕಡೆಯಿಂದ ಬರುತ್ತಿದ್ದ ಕಿಯಾ ಸಾನೆಟ್ ಕಾರಿನಲ್ಲಿ ಐವರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಓವರ್ಟೇಕ್ ಮಾಡುವ ಸಂದರ್ಭದಲ್ಲಿ ಸಂಭವಿಸಿದ ಈ ಅಪಘಾತದಲ್ಲಿ ನಾಲ್ವರು ಜೀವ ಕಳೆದುಕೊಂಡಿದ್ದು, ಕುಟುಂಬಸ್ಥರಲ್ಲಿ ತೀವ್ರ ಆಕ್ರಂದನ ಮನೆ ಮಾಡಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm