ಬ್ರೇಕಿಂಗ್ ನ್ಯೂಸ್
09-01-21 12:03 pm Headline Karnataka News Network ಕ್ರೈಂ
ಮುಂಬೈ, ಜ.9 : ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಸುಮಾರು 10 ನವಜಾತ ಶಿಶುಗಳು ಮೃತಪಟ್ಟ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಈ ದುರಂತ ಬಾಂದ್ರಾದ ಜಿಲ್ಲಾ ಜನರಲ್ ಆಸ್ಪತ್ರೆಯಲ್ಲಿ ನಸುಕಿನ ಜಾವ ಸುಮಾರು 2 ಗಂಟೆಗೆ ನಡೆದಿದೆ. ಮೃತಪಟ್ಟ 10 ಶಿಶುಗಳು ಕೂಡ ಎಸ್ಎನ್ಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದವು.
ಆಸ್ಪತ್ರೆಯಲ್ಲಿ ಇದ್ದ ಅಗ್ನಿ ಶಾಮಕ ಸಾಧನಗಳನ್ನು ಬಳಸಿಕೊಂಡು ಸಿಬ್ಬಂದಿ ಬೆಂಕಿ ಆರಿಸಲು ಪ್ರಯತ್ನಿಸಿದರು. ಇಡೀ ಆಸ್ಪತ್ರೆ ತುಂಬ ಹೊಗೆ ಆವರಿಸಿತ್ತು. ಈ ದುರಂತದ ಬಗ್ಗೆ ಆಸ್ಪತ್ರೆ ಸಿಬ್ಬಂದಿ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ರಕ್ಷಿಸಲಾದ ಮಕ್ಕಳನ್ನು ಬೇರೆ ವಾರ್ಡ್ಗೆ ಸ್ಥಳಾಂತರಿಸಲಾಗಿದೆ.
ಇದಲ್ಲದೆ ಸಮೀಪದ ಐಸಿಯು ವಾರ್ಡ್, ಡಯಾಲಿಸಿಸ್ ವಾರ್ಡ್ ಮತ್ತು ಹೆರಿಗೆ ವಾರ್ಡ್ಗಳಲ್ಲಿದ್ದ ರೋಗಿಗಳನ್ನು ಕೂಡ ಸುರಕ್ಷತೆಗಾಗಿ ಆಸ್ಪತ್ರೆಯ ಬೇರೆ ವಾರ್ಡ್ಗಳಿಗೆ ಕೂಡಲೇ ಸ್ಥಳಾಂತರಿಸಲಾಯಿತು. ಶಾರ್ಟ್ ಸರ್ಕ್ಯೂಟ್ ಈ ಅವಘಡಕ್ಕೆ ಕಾರಣ ಎನ್ನಲಾಗಿದ್ದರೂ, ಅದರ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಘಟಕದಲ್ಲಿದ್ದ ಎಲ್ಲ ಮಕ್ಕಳೂ ಒಂದು ತಿಂಗಳಿನಿಂದ ಮೂರು ತಿಂಗಳ ವಯಸ್ಸಿನವರಾಗಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಅಲ್ಲಿಗೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ರಾಜಧಾನಿ ಮುಂಬೈನಿಂದ ಭಂಡಾರಾ ಸುಮಾರು 900 ಕಿಮೀ ದೂರದಲ್ಲಿದೆ.
ಈ ಘಟನೆ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಆರೋಗ್ಯ ಸಚಿವ ರಾಜೇಶ್ ತೋಪ್, ಭಂಡಾರಾ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಜತೆಗೆ ಮಾತನಾಡಿದ್ದು, ತನಿಖೆಗೆ ಆದೇಶ ನೀಡಿದ್ದಾರೆ.
Ten newborn babies on Saturday died in a fire at the Sick Newborn Care Unit (SNCU) at Bhandara District General Hospital in Maharashtra.
10-08-25 06:27 pm
Bangalore Correspondent
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm