ಬ್ರೇಕಿಂಗ್ ನ್ಯೂಸ್
09-01-21 12:03 pm Headline Karnataka News Network ಕ್ರೈಂ
ಮುಂಬೈ, ಜ.9 : ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಸುಮಾರು 10 ನವಜಾತ ಶಿಶುಗಳು ಮೃತಪಟ್ಟ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಈ ದುರಂತ ಬಾಂದ್ರಾದ ಜಿಲ್ಲಾ ಜನರಲ್ ಆಸ್ಪತ್ರೆಯಲ್ಲಿ ನಸುಕಿನ ಜಾವ ಸುಮಾರು 2 ಗಂಟೆಗೆ ನಡೆದಿದೆ. ಮೃತಪಟ್ಟ 10 ಶಿಶುಗಳು ಕೂಡ ಎಸ್ಎನ್ಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದವು.

ಆಸ್ಪತ್ರೆಯಲ್ಲಿ ಇದ್ದ ಅಗ್ನಿ ಶಾಮಕ ಸಾಧನಗಳನ್ನು ಬಳಸಿಕೊಂಡು ಸಿಬ್ಬಂದಿ ಬೆಂಕಿ ಆರಿಸಲು ಪ್ರಯತ್ನಿಸಿದರು. ಇಡೀ ಆಸ್ಪತ್ರೆ ತುಂಬ ಹೊಗೆ ಆವರಿಸಿತ್ತು. ಈ ದುರಂತದ ಬಗ್ಗೆ ಆಸ್ಪತ್ರೆ ಸಿಬ್ಬಂದಿ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ರಕ್ಷಿಸಲಾದ ಮಕ್ಕಳನ್ನು ಬೇರೆ ವಾರ್ಡ್ಗೆ ಸ್ಥಳಾಂತರಿಸಲಾಗಿದೆ.
ಇದಲ್ಲದೆ ಸಮೀಪದ ಐಸಿಯು ವಾರ್ಡ್, ಡಯಾಲಿಸಿಸ್ ವಾರ್ಡ್ ಮತ್ತು ಹೆರಿಗೆ ವಾರ್ಡ್ಗಳಲ್ಲಿದ್ದ ರೋಗಿಗಳನ್ನು ಕೂಡ ಸುರಕ್ಷತೆಗಾಗಿ ಆಸ್ಪತ್ರೆಯ ಬೇರೆ ವಾರ್ಡ್ಗಳಿಗೆ ಕೂಡಲೇ ಸ್ಥಳಾಂತರಿಸಲಾಯಿತು. ಶಾರ್ಟ್ ಸರ್ಕ್ಯೂಟ್ ಈ ಅವಘಡಕ್ಕೆ ಕಾರಣ ಎನ್ನಲಾಗಿದ್ದರೂ, ಅದರ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಘಟಕದಲ್ಲಿದ್ದ ಎಲ್ಲ ಮಕ್ಕಳೂ ಒಂದು ತಿಂಗಳಿನಿಂದ ಮೂರು ತಿಂಗಳ ವಯಸ್ಸಿನವರಾಗಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಅಲ್ಲಿಗೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ರಾಜಧಾನಿ ಮುಂಬೈನಿಂದ ಭಂಡಾರಾ ಸುಮಾರು 900 ಕಿಮೀ ದೂರದಲ್ಲಿದೆ.
ಈ ಘಟನೆ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಆರೋಗ್ಯ ಸಚಿವ ರಾಜೇಶ್ ತೋಪ್, ಭಂಡಾರಾ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಜತೆಗೆ ಮಾತನಾಡಿದ್ದು, ತನಿಖೆಗೆ ಆದೇಶ ನೀಡಿದ್ದಾರೆ.
Ten newborn babies on Saturday died in a fire at the Sick Newborn Care Unit (SNCU) at Bhandara District General Hospital in Maharashtra.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 05:38 pm
HK News Desk
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm