ಮೃತ ಗಂಡನ ಪಿಂಚಣಿ ನೀಡದೆ ನಿರ್ಲಕ್ಷ್ಯ ; ಮಂಗಳೂರಿನ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರ ವಿರುದ್ದ ಲೋಕಾಯುಕ್ತಕ್ಕೆ ದೂರು

31-08-26 07:10 pm       HK News Staffer   ಕ್ರೈಂ

ತನ್ನ ಗಂಡನ ಮರಣಾನಂತರದ ಪಿಂಚಣಿ ಮಂಜೂರಾತಿ ಮಾಡದೆ ನಿರ್ಲಕ್ಷ ತೋರಿದ್ದಾರೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರ ವಿರುದ್ದ ಸಂತ್ರಸ್ತ ಮಹಿಳೆಯೊಬ್ಬರು ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದಾರೆ. ‌

ಮಂಗಳೂರು, ಆ‌.31: ತನ್ನ ಗಂಡನ ಮರಣಾನಂತರದ ಪಿಂಚಣಿ ಮಂಜೂರಾತಿ ಮಾಡದೆ ನಿರ್ಲಕ್ಷ ತೋರಿದ್ದಾರೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರ ವಿರುದ್ದ ಸಂತ್ರಸ್ತ ಮಹಿಳೆಯೊಬ್ಬರು ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದಾರೆ. ‌

ಬಂಟ್ವಾಳದ ಎಸ್.ವಿ.ಎಸ್. ಅನುದಾನಿತ ಕಾಲೇಜಿನಲ್ಲಿ ಪರಿಚಾರಕರಾಗಿ ಕೆಲಸ ಮಾಡುತ್ತಿದ್ದ ಕಾಂತಪ್ಪ ಅವರು  5-2-2023ರಲ್ಲಿ ಕರ್ತವ್ಯ ಸಂದರ್ಭದಲ್ಲಿ ಮರಣ ಹೊಂದಿದ್ದು ಸದ್ರಿ ಕುಟುಂಬಕ್ಕೆ ಪಿಂಚಣಿ ಮತ್ತು ಇತರ ಆರ್ಥಿಕ ಸೌಲಭ್ಯಗಳನ್ನು ಅವರ ಪತ್ನಿಗೆ ನೀಡಬೇಕಾಗಿತ್ತು. ಈ ಬಗ್ಗೆ ಮೃತ ಕಾಂತಪ್ಪ ಅವರ ಪತ್ನಿ ಗಿರಿಜಾ ಕಾಲೇಜು ಶಿಕ್ಷಣ ಇಲಾಖೆಯ ಉನ್ನತಾಧಿಕಾರಿಗಳಿಗೆ ದೂರು ನೀಡಿದ್ದರು. ಕಾಲೇಜು ಶಿಕ್ಷಣ ಆಯುಕ್ತರ ಕಚೇರಿಯು 2025ರ ನವೆಂಬರ್ 14ರಂದು  ಪ್ರಕರಣವನ್ನು ನಿಯಮಾನುಸಾರ ಪರಿಶೀಲಿಸಿ ಪಿಂಚಣಿ ಪ್ರಸ್ತಾವನೆ ಹಾಗೂ ಸೇವಾ ಪುಸ್ತಕವನ್ನು ಮರು ಟಪ್ಪಾಲಿನಲ್ಲಿ ಸಲ್ಲಿಸುವಂತೆ ಜಂಟಿ ನಿರ್ದೇಶಕರಾದ ಡಾ.ಕವಿತಾ ಅವರಿಗೆ ನಿರ್ದೇಶನ ನೀಡಿತ್ತು.

ಆದರೆ  ಮಂಗಳೂರಿನ ಜಂಟಿ ನಿರ್ದೇಶಕರಾದ ಕವಿತಾ ಅವರು ಈ ಬಗ್ಗೆ ಕ್ರಮ ವಹಿಸದೆ ನಿರ್ಲಕ್ಷ್ಯ ತೋರಿದ್ದರು. ಇದರಿಂದ ನೊಂದ ಗಿರಿಜಾ ಅವರು ಲೋಕಾಯುಕ್ತದಲ್ಲಿ ದೂರು ಸಲ್ಲಿಸಿದ್ದಾರೆ.