ಬ್ರೇಕಿಂಗ್ ನ್ಯೂಸ್
09-01-21 01:31 pm Headline Karnataka News Network ಕ್ರೈಂ
ರಾಂಚಿ, ಜ.9: ಉತ್ತರ ಪ್ರದೇಶದಲ್ಲಿ 50 ವರ್ಷದ ಅಂಗನವಾಡಿ ಕಾರ್ಯಕರ್ತೆಯನ್ನು ಸಾಮೂಹಿಕ ಅತ್ಯಾಚಾರಗೈದು ಬರ್ಬರ ಹತ್ಯೆ ನಡೆಸಿದ ಪ್ರಕರಣದ ಬೆನ್ನಲ್ಲೇ ಜಾರ್ಖಂಡ್ ನಲ್ಲೂ ಅಂಥದ್ದೇ ರೀತಿಯ ಘಟನೆ ಬೆಳಕಿಗೆ ಬಂದಿದೆ.
50 ವರ್ಷದ ವಿಧವೆ ಮಹಿಳೆಯ ಮನೆಗೆ ನುಗ್ಗಿ ಮೂವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಆಕೆಯ ಗುಪ್ತಾಂಗಕ್ಕೆ ಸ್ಟೀಲ್ ಲೋಟ ತುರುಕಿ ಭೀಕರವಾಗಿ ಹಲ್ಲೆ ನಡೆಸಿದ್ದಾರೆ. ಜಾರ್ಖಂಡ್ ರಾಜ್ಯದ ಛಾತ್ರ ಜಿಲ್ಲೆಯ ಕೋಬ್ನಾ ಗ್ರಾಮದಲ್ಲಿ ಘಟನೆ ನಡೆದಿದೆ. ಘಟನೆ ಸಂಬಂಧ ಹಂಟರ್ ಗಂಜ್ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಹಳೆ ಜಗಳವನ್ನೇ ಮುಂದಿಟ್ಟು ಮಹಿಳೆಯ ಜೊತೆ ಗುರುವಾರ ರಾತ್ರಿ ಜಗಳ ತೆಗೆದಿದ್ದ ಮೂವರು, ಮಾತಿಗೆ ಮಾತು ಬೆಳೆದು ಆಕೆ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಡಿಐಜಿ ಅಮೋಲ್ ಹೋಂಕಾರ್ ತಿಳಿಸಿದ್ದಾರೆ.
ಈ ಹಿಂದೆ ಮೇಕೆ ವಿಷಯಕ್ಕೆ ಜಗಳವಾಗಿತ್ತು. ನನ್ನ ಮನೆ ಸಮೀಪ ಗುರುವಾರ ರಾತ್ರಿ ಜಮೀನಿಗೆ ತೆರಳಿದ್ದ ಸಂದರ್ಭ ಮತ್ತೆ ಜಗಳಕ್ಕೆ ಬಂದಿದ್ದಾರೆ. ಮೂವರು ಸೇರಿ ಅತ್ಯಾಚಾರ ನಡೆಸಿದ್ದು ಗುಪ್ತಾಂಗಕ್ಕೆ ಲೋಟ ತುರುಕಿ ಹಿಂಸೆ ನೀಡಿದ್ದಾರೆ ಎಂದು ಮಹಿಳೆ ಆಸ್ಪತ್ರೆಯಲ್ಲಿ ಹೇಳಿಕೆ ನೀಡಿದ್ದಾರೆ.
ವಿಧವೆ ಮಹಿಳೆ ಒಬ್ಬಂಟಿಯಾಗಿ ವಾಸವಿದ್ದು ಆಕೆಯ ಮನೆಯಲ್ಲೇ ಕೃತ್ಯ ನಡೆಸಿದ್ದಾರೆ. ಆಕೆಯನ್ನು ಬಳಿಕ ನೆರೆಹೊರೆಯವರು ಸೇರಿ ಆಸ್ಪತ್ರೆಗೆ ದಾಖಲಿಸಿದ್ದು, ಮಹಿಳೆಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.
ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ಇದೇ ರೀತಿಯ ಘಟನೆ ವಾರದ ಹಿಂದೆ ನಡೆದಿದ್ದು 50 ವರ್ಷದ ಅಂಗನವಾಡಿ ಕಾರ್ಯಕರ್ತೆ ದೇವಸ್ಥಾನಕ್ಕೆ ತೆರಳಿದ್ದ ವೇಳೆ ಅರ್ಚಕ ಸೇರಿ ನಾಲ್ವರು ಅತ್ಯಾಚಾರಗೈದು ಗುಪ್ತಾಂಗಕ್ಕೆ ರಾಡ್ ಹಾಕಿ ಕೊಲೆಗೈದಿದ್ದರು.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm