ಬ್ರೇಕಿಂಗ್ ನ್ಯೂಸ್
09-01-21 01:31 pm Headline Karnataka News Network ಕ್ರೈಂ
ರಾಂಚಿ, ಜ.9: ಉತ್ತರ ಪ್ರದೇಶದಲ್ಲಿ 50 ವರ್ಷದ ಅಂಗನವಾಡಿ ಕಾರ್ಯಕರ್ತೆಯನ್ನು ಸಾಮೂಹಿಕ ಅತ್ಯಾಚಾರಗೈದು ಬರ್ಬರ ಹತ್ಯೆ ನಡೆಸಿದ ಪ್ರಕರಣದ ಬೆನ್ನಲ್ಲೇ ಜಾರ್ಖಂಡ್ ನಲ್ಲೂ ಅಂಥದ್ದೇ ರೀತಿಯ ಘಟನೆ ಬೆಳಕಿಗೆ ಬಂದಿದೆ.
50 ವರ್ಷದ ವಿಧವೆ ಮಹಿಳೆಯ ಮನೆಗೆ ನುಗ್ಗಿ ಮೂವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಆಕೆಯ ಗುಪ್ತಾಂಗಕ್ಕೆ ಸ್ಟೀಲ್ ಲೋಟ ತುರುಕಿ ಭೀಕರವಾಗಿ ಹಲ್ಲೆ ನಡೆಸಿದ್ದಾರೆ. ಜಾರ್ಖಂಡ್ ರಾಜ್ಯದ ಛಾತ್ರ ಜಿಲ್ಲೆಯ ಕೋಬ್ನಾ ಗ್ರಾಮದಲ್ಲಿ ಘಟನೆ ನಡೆದಿದೆ. ಘಟನೆ ಸಂಬಂಧ ಹಂಟರ್ ಗಂಜ್ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಹಳೆ ಜಗಳವನ್ನೇ ಮುಂದಿಟ್ಟು ಮಹಿಳೆಯ ಜೊತೆ ಗುರುವಾರ ರಾತ್ರಿ ಜಗಳ ತೆಗೆದಿದ್ದ ಮೂವರು, ಮಾತಿಗೆ ಮಾತು ಬೆಳೆದು ಆಕೆ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಡಿಐಜಿ ಅಮೋಲ್ ಹೋಂಕಾರ್ ತಿಳಿಸಿದ್ದಾರೆ.
ಈ ಹಿಂದೆ ಮೇಕೆ ವಿಷಯಕ್ಕೆ ಜಗಳವಾಗಿತ್ತು. ನನ್ನ ಮನೆ ಸಮೀಪ ಗುರುವಾರ ರಾತ್ರಿ ಜಮೀನಿಗೆ ತೆರಳಿದ್ದ ಸಂದರ್ಭ ಮತ್ತೆ ಜಗಳಕ್ಕೆ ಬಂದಿದ್ದಾರೆ. ಮೂವರು ಸೇರಿ ಅತ್ಯಾಚಾರ ನಡೆಸಿದ್ದು ಗುಪ್ತಾಂಗಕ್ಕೆ ಲೋಟ ತುರುಕಿ ಹಿಂಸೆ ನೀಡಿದ್ದಾರೆ ಎಂದು ಮಹಿಳೆ ಆಸ್ಪತ್ರೆಯಲ್ಲಿ ಹೇಳಿಕೆ ನೀಡಿದ್ದಾರೆ.
ವಿಧವೆ ಮಹಿಳೆ ಒಬ್ಬಂಟಿಯಾಗಿ ವಾಸವಿದ್ದು ಆಕೆಯ ಮನೆಯಲ್ಲೇ ಕೃತ್ಯ ನಡೆಸಿದ್ದಾರೆ. ಆಕೆಯನ್ನು ಬಳಿಕ ನೆರೆಹೊರೆಯವರು ಸೇರಿ ಆಸ್ಪತ್ರೆಗೆ ದಾಖಲಿಸಿದ್ದು, ಮಹಿಳೆಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.
ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ಇದೇ ರೀತಿಯ ಘಟನೆ ವಾರದ ಹಿಂದೆ ನಡೆದಿದ್ದು 50 ವರ್ಷದ ಅಂಗನವಾಡಿ ಕಾರ್ಯಕರ್ತೆ ದೇವಸ್ಥಾನಕ್ಕೆ ತೆರಳಿದ್ದ ವೇಳೆ ಅರ್ಚಕ ಸೇರಿ ನಾಲ್ವರು ಅತ್ಯಾಚಾರಗೈದು ಗುಪ್ತಾಂಗಕ್ಕೆ ರಾಡ್ ಹಾಕಿ ಕೊಲೆಗೈದಿದ್ದರು.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm