ಬ್ರೇಕಿಂಗ್ ನ್ಯೂಸ್
02-09-26 10:37 am HK News Staffer ಕ್ರೈಂ
ಮಂಗಳೂರು, ಸೆ 02: ಕೇರಳಂ ಲಾಟರಿ ಚೀಟಿಯಲ್ಲಿ 8 ಲಕ್ಷ ರೂಪಾಯಿ ಬಹುಮಾನ ಬಂದಿದೆ ಎಂದು ನಂಬಿಸಿ, ತೆರಿಗೆ ಶುಲ್ಕದ ನೆಪದಲ್ಲಿ ವ್ಯಕ್ತಿಯೊಬ್ಬರಿಂದ ಹಂತ-ಹಂತವಾಗಿ 3.81 ಲಕ್ಷ ರೂಪಾಯಿ ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ಮಂಗಳೂರಿನ ಸಿಇಎನ್ (CEN) ಅಪರಾಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಮಂಗಳೂರು ನಗರ ಪೊಲೀಸ್ ಪ್ರಕಟಣೆ ತಿಳಿಸಿದೆ.
ದಿನಾಂಕ 14-08-2026 ರಂದು 42 ವರ್ಷದ ದೂರುದಾರರ ಮೊಬೈಲ್ ಸಂಖ್ಯೆಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ, ನಿಮ್ಮ ಹೆಸರಿಗೆ 8,00,000 ರೂ. ಮೌಲ್ಯದ ಕೇರಳ ಲಾಟರಿ ಬಹುಮಾನ ಬಂದಿದೆ ಎಂದು ನಂಬಿಸಿದ್ದಾನೆ. ಆ ಬಹುಮಾನದ ಹಣವನ್ನು ಪಡೆಯಲು ತೆರಿಗೆ ಪಾವತಿಸಬೇಕೆಂದು ತಿಳಿಸಿದ್ದಾನೆ.
ಇದನ್ನು ಸತ್ಯವೆಂದು ನಂಬಿದ ದೂರುದಾರರು, ಅಪರಿಚಿತ ವ್ಯಕ್ತಿಗಳು ವಾಟ್ಸಾಪ್ ಮೂಲಕ ಕಳುಹಿಸಿದ ಗೂಗಲ್ ಪೇ ಹಾಗೂ ಫೋನ್ ಪೇ ಕ್ಯೂಆರ್ ಕೋಡ್ ಸ್ಕ್ಯಾನರ್ಗಳಿಗೆ ದಿನಾಂಕ 15-08-2026 ರಿಂದ 26-08-2026 ರ ಅವಧಿಯಲ್ಲಿ ಹಂತ-ಹಂತವಾಗಿ ಒಟ್ಟು 3,81,300 ರೂಪಾಯಿ ಹಣವನ್ನು ವರ್ಗಾಯಿಸಿದ್ದಾರೆ.
ಬಳಿಕ ಮತ್ತೊಂದು ಮೊಬೈಲ್ ಸಂಖ್ಯೆಯಿಂದ ಕರೆ ಮಾಡಿದ ವಂಚಕರು, ಲಾಟರಿ ಹಣ ಡಬಲ್ ಆಗಿದೆ ಎಂದು ನಂಬಿಸಿ ಮತ್ತೆ ತೆರಿಗೆ ಹಣ ಕಟ್ಟುವಂತೆ ಒತ್ತಾಯಿಸಿದ್ದಾರೆ. ಇದರಿಂದ ಅನುಮಾನಗೊಂಡ ದೂರುದಾರರು ಇದೊಂದು ಸೈಬರ್ ವಂಚನೆ ಜಾಲವೆಂದು ಅರಿತು, ತಕ್ಷಣವೇ ಸೈಬರ್ ಹೆಲ್ಪ್ಲೈನ್ 1930ಗೆ ಕರೆ ಮಾಡಿ ದೂರು ದಾಖಲಿಸಿದ್ದಾರೆ.
ಕಳೆದುಹೋದ ಹಣ ಮರಳಿ ಬರಬಹುದೆಂದು ಕಾದಿದ್ದ ದೂರುದಾರರಿಗೆ ಯಾವುದೇ ಹಣ ವಾಪಸ್ ಬಾರದ ಕಾರಣ, ಸಿಇಎನ್ ಅಪರಾಧ ಪೊಲೀಸ್ ಠಾಣೆಗೆ ತೆರಳಿ ವಂಚಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಲಿಖಿತ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಸಿಇಎನ್ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm