ಬ್ರೇಕಿಂಗ್ ನ್ಯೂಸ್
03-09-26 09:36 pm HK News Staffer ಕ್ರೈಂ
ಉಡುಪಿ, ಸೆ. 3: ರಾಜ್ಯ ಸರ್ಕಾರದ ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ವ್ಯಕ್ತಿಯೊಬ್ಬರಿಗೆ ಕೊಲೆ ಹಾಗೂ ಸುಲಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಮುಖಂಡ ಸೇರಿದಂತೆ ಮೂವರನ್ನು ಕೋಟ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಕೋಟತಟ್ಟು ಗ್ರಾಮದ ಗೊಬ್ಬರಬೆಟ್ಟು ನಿವಾಸಿ ನಾಗೇಂದ್ರ ಪುತ್ರನ್ (37), ಪಾರಂಪಳ್ಳಿ ಗ್ರಾಮದ ಪಡುಕೆರೆಯ ಪಿ. ಸುಮಂತ್ ಕುಂದರ್ (40) ಹಾಗೂ ಸಾಸ್ತಾನದ ಸಚಿನ್ ಶ್ರೀಯಾನ್ (32) ಎಂದು ಗುರುತಿಸಲಾಗಿದೆ.
ಅನ್ನಭಾಗ್ಯದ ಅಕ್ಕಿ ಚೀಲ ಇಟ್ಟ ವಿಚಾರಕ್ಕೆ ಕಿರಿಕ್;
ಆ.31ರಂದು ಮನೆಯ ಅಂಗಳದಲ್ಲಿ ಅನ್ನಭಾಗ್ಯದ ಅಕ್ಕಿ ಚೀಲಗಳನ್ನು ಇರಿಸಿರುವ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಹಾಗೂ ಸುಲಿಗೆ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದರು.
ಮೈಸೂರು, ಉಡುಪಿಯಲ್ಲಿ ಬಂಧನ
ಉಡುಪಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು. ಹಾಗೂ ಬ್ರಹ್ಮಾವರ ವೃತ್ತ ನಿರೀಕ್ಷಕ ಗೋಪಿಕೃಷ್ಣ ಅವರ ಮಾರ್ಗದರ್ಶನದಲ್ಲಿ ಕೋಟ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಪ್ರವೀಣ್ ಕುಮಾರ್ ಆರ್. ಹಾಗೂ ಮಹಾಂತೇಶ ಜಾಬಗೌಡ ಮತ್ತು ಸಿಬ್ಬಂದಿ ವಿಜಯೇಂದ್ರ, ಶರತ್ ಹಾಗೂ ಶಿವರಾಜ್ ಅವರನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ.
ಸಚಿನ್ ಶ್ರೀಯಾನ್ನನ್ನು ಸೆ.1ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇನ್ನು ನಾಗೇಂದ್ರ ಪುತ್ರನ್ ಹಾಗೂ ಪಿ. ಸುಮಂತ್ ಕುಂದರ್ ಅವರನ್ನು ಸೆ.2ರಂದು ಮೈಸೂರು ಪ್ಯಾಲೇಸ್ ಎದುರಿನ ವಸ್ತು ಪ್ರದರ್ಶನ ಮೈದಾನದ ಬಳಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
03-09-26 07:27 pm
HK News Staffer
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
03-09-26 10:19 pm
HK News Staffer
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
03-09-26 09:51 pm
HK News Staffer
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm
ಹಿಂಡಲಗಾ ಜೈಲಿನ ಕೈದಿಯೊಂದಿಗೆ ಸರಸ-ಸಲ್ಲಾಪದ ವಿಡಿಯೋ...
03-09-26 05:21 pm
ನೀಟ್ ಪರೀಕ್ಷೆ ಅಕ್ರಮ ; ಸುನಿಲ್ ಕುಮಾರ್ ರಾಜೀನಾಮೆಗೆ...
02-09-26 07:18 pm