ಬ್ರೇಕಿಂಗ್ ನ್ಯೂಸ್
06-09-26 10:28 pm HK News Staffer ಕ್ರೈಂ
ಬೆಂಗಳೂರು, ಸೆ.6: ಕರ್ನಾಟಕ ಆಹಾರ ಸುರಕ್ಷತೆ ಮತ್ತು ಜಾಗೃತ ದಳದ ಅಧಿಕಾರಿಗಳು ಬೆಂಗಳೂರಿನಲ್ಲಿರುವ ಇ-ಕಾಮರ್ಸ್ ದೈತ್ಯ ಅಮೆಜಾನ್ ಸಂಸ್ಥೆಗೆ ಸೇರಿದ ದಾಸ್ತಾನು ಕೇಂದ್ರಗಳ ಮೇಲೆ ಭಾನುವಾರ ದಿಢೀರ್ ದಾಳಿ ನಡೆಸಿದ್ದಾರೆ. ಮಾನ್ಯತೆ ಪಡೆದ ಔಷಧ ಪರವಾನಗಿ ಇಲ್ಲದೆ ಕಾನೂನುಬಾಹಿರವಾಗಿ ಔಷಧಿಗಳನ್ನು ದಾಸ್ತಾನು ಮಾಡಿ, ವಿತರಣೆ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆದಿದೆ.
ಬೆಂಗಳೂರಿನ ಆನೇಕಲ್ ತಾಲೂಕಿನ ತಟ್ಟನಹಳ್ಳಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಏರೋಸ್ಪೇಸ್ ಪಾರ್ಕ್ನಲ್ಲಿರುವ ಅಮೆಜಾನ್ ದಾಸ್ತಾನು ಕೇಂದ್ರಗಳ ಮೇಲೆ ಅಧಿಕಾರಿಗಳ ತಂಡ ಜಂಟಿ ಕಾರ್ಯಾಚರಣೆ ನಡೆಸಿದೆ. ಈ ಎರಡು ಕೇಂದ್ರಗಳಿಂದ ಒಟ್ಟು ₹4.02 ಲಕ್ಷಕ್ಕೂ ಅಧಿಕ ಮೌಲ್ಯದ ಕಾನೂನುಬಾಹಿರ ಔಷಧಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಆನೇಕಲ್ ಕೇಂದ್ರದಿಂದ ₹2.45 ಲಕ್ಷ ಹಾಗೂ ದೇವನಹಳ್ಳಿ ಕೇಂದ್ರದಿಂದ ₹1.57 ಲಕ್ಷ ಮೌಲ್ಯದ ಔಷಧಿಗಳನ್ನು ವಶಪಡಿಸಿಕೊಳ್ಳಲಾಗಿದೆ.


ನಿಯಮಗಳ ಪ್ರಕಾರ ಫಾರ್ಮಾಸ್ಯುಟಿಕಲ್ ಉತ್ಪನ್ನಗಳನ್ನು ಸಂಗ್ರಹಿಸಲು ಮತ್ತು ವಿತರಿಸಲು ಇರಬೇಕಾದ ಅಧಿಕೃತ ಲೈಸೆನ್ಸ್ ಅನ್ನು ಈ ಕೇಂದ್ರಗಳು ಹೊಂದಿರಲಿಲ್ಲ. ಇಂಟೆಲಿಜೆನ್ಸ್ ವಿಭಾಗಕ್ಕೆ ಸಿಕ್ಕ ಖಚಿತ ಮಾಹಿತಿ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.
ರಾಜ್ಯ ಗುಪ್ತದಳ ವಿಭಾಗದ ಸಹಾಯಕ ಔಷಧ ನಿಯಂತ್ರಕರಾದ ಮನೋಹರ್ ಮತ್ತು ಔಷಧ ಪರಿವೀಕ್ಷಕರ ತಂಡವು, ಬೆಂಗಳೂರಿನ ಆನೇಕಲ್ ತಾಲೂಕಿನ ತಟ್ಟನಹಳ್ಳಿಯಲ್ಲಿರುವ 'ಮೆಸರ್ಸ್ ಅಮೆಜಾನ್ ಸೆಲ್ಲರ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್' ನ ಪರವಾನಗಿ ರಹಿತ ಆವರಣದ ಮೇಲೆ ದಾಳಿ ನಡೆಸಿ, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ರೂ. 2,45,352/- ಮೌಲ್ಯದ ಔಷಧಗಳನ್ನು ವಶಪಡಿಸಿಕೊಂಡಿದೆ.
ಇದೇ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಔಷಧ ಪರಿವೀಕ್ಷಕರಾದ ಶ್ರೀಮತಿ ವಿಭಾ ಮತ್ತು ಅವರ ತಂಡವು, ದೇವನಹಳ್ಳಿಯ ಏರೋಸ್ಪೇಸ್ನಲ್ಲಿರುವ 'ಮೆಸರ್ಸ್ ಅಮೆಜಾನ್' ಸಂಸ್ಥೆಯ ಪರವಾನಗಿ ರಹಿತ ಆವರಣದ ಮೇಲೆ ದಾಳಿ ನಡೆಸಿ, ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ರೂ. 1,57,000/- ಮೌಲ್ಯದ ಔಷಧಗಳನ್ನು ಜಪ್ತಿ ಮಾಡಿದೆ.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm