ಬ್ರೇಕಿಂಗ್ ನ್ಯೂಸ್
14-01-21 12:36 pm Mangalore Correspondent ಕ್ರೈಂ
ಮಂಗಳೂರು, ಜ.14: ಮಂಗಳೂರು ನಗರದಲ್ಲಿ ಮಕ್ಕಳ ಕಳ್ಳರಿದ್ದಾರೆಂಬ ವದಂತಿ ಕೇಳಿಬಂದಿದೆ. ಬುಧವಾರ ಬೆಳಗ್ಗೆ ಕುದ್ರೋಳಿಯ ಅಳಕೆಯಲ್ಲಿ ಒಬ್ಬ ಮಹಿಳೆಯ ಬಗ್ಗೆ ಗುಮಾನಿ ವ್ಯಕ್ತಪಡಿಸಿ, ಜನರು ಸೇರಿ ಆಕೆಯನ್ನು ಗದರಿ, ಪೊಲೀಸರಿಗೊಪ್ಪಿಸಿದ್ದರು. ನಿನ್ನೆ ಸಂಜೆ ಹೊತ್ತಿಗೆ ಕೊಂಚಾಡಿಯ ಮಹಾಲಸಾ ದೇವಸ್ಥಾನ ಆವರಣದಲ್ಲಿ ಮಗುವೊಂದನ್ನು ಅಪಹರಿಸುವ ಯತ್ನ ನಡೆದಿದೆ ಎನ್ನಲಾಗಿದೆ.
ಕೊಂಚಾಡಿಯಲ್ಲಿ ಬೈಕಿನಲ್ಲಿ ಬಂದಿದ್ದ ಇಬ್ಬರು ಸೇರಿ ಆಟವಾಡುತ್ತಿದ್ದ ಮಗುವೊಂದನ್ನು ಮುಸುಕು ಹಾಕಿ, ಹಿಡಿಯಲು ಯತ್ನಿಸಿದ್ದಾರೆ. ಮಗುವಿನ ತಲೆಯ ಭಾಗಕ್ಕೆ ಮುಸುಕು ಹಾಕುತ್ತಿದ್ದಂತೆ ಅಲ್ಲಿ ಆಟವಾಡುತ್ತಿದ್ದ ಇತರೇ ಮಕ್ಕಳು ಬೊಬ್ಬೆ ಹಾಕಿದ್ದಾರೆ. ಅಷ್ಟರಲ್ಲಿ ಬೈಕಿನಲ್ಲಿ ಬಂದವರು ಪರಾರಿಯಾಗಿದ್ದಾರೆ.

ಮಕ್ಕಳ ಮಾತು ಕೇಳಿ, ಸ್ಥಳೀಯರು ಭಯಗೊಂಡಿದ್ದು ಅಪಹರಣ ಯತ್ನಕ್ಕೆ ಒಳಗಾದ ಮಗುವಿನ ಪಾಲಕರು ಕಂಕನಾಡಿ ನಗರ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಆಗಂತುಕರ ಪತ್ತೆಗಾಗಿ ಕೊಂಚಾಡಿ ಪರಿಸರದ ಸಿಸಿಟಿವಿಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಮಕ್ಕಳ ಅಪಹರಣಕ್ಕೆ ಯತ್ನಿಸಿದ್ದು ಹೌದೋ, ಅಲ್ಲವೋ ಎನ್ನುವ ಬಗ್ಗೆ ಖಾತ್ರಿಪಡಿಸಲು ದಾಖಲೆ ಹುಡುಕುತ್ತಿದ್ದಾರೆ.

ಇದೇ ವೇಳೆ, ಅಳಕೆಯಲ್ಲಿ ಮಹಿಳೆಯ ಕಿತಾಪತಿ ಬಗ್ಗೆ ಬಂದರು ಪೊಲೀಸರಲ್ಲಿ ವಿಚಾರಿಸಿದರೆ, ಅಲ್ಲಿ ಮಹಿಳೆಯ ಬಗ್ಗೆ ಗುಮಾನಿ ಬಂದಿದ್ದು ಫೋಟೊ ತೆಗೆದು ವಾಟ್ಸಾಪ್ ನಲ್ಲಿ ಹಾಕಿದ್ದು ಗೊತ್ತು. ಅದು ಮಕ್ಕಳ ಅಪಹರಣದ ವಿಷಯ ಅಲ್ಲ. ಆ ಮಹಿಳೆ, ಉತ್ತರ ಭಾರತದ ಮೂಲದವರಾಗಿದ್ದು ಅಳಕೆ ಪರಿಸರದಲ್ಲಿ ಗುಜರಾತಿ ಮೂಲದವರ ಮನೆಗೆ ಬಂದು ಹಣ ಕೇಳುತ್ತಿದ್ದರಂತೆ. ಅದರ ಬಗ್ಗೆ ಯಾರೂ ಕಂಪ್ಲೇಂಟ್ ಕೊಟ್ಟಿಲ್ಲ ಎಂದು ತಿಳಿಸಿದ್ದಾರೆ.
A woman was held by locals at Konchady in Mangalore alleging of Kidnapping Children. The Kankandy Town police have registered the case against her.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm