ಬ್ರೇಕಿಂಗ್ ನ್ಯೂಸ್
14-01-21 12:36 pm Mangalore Correspondent ಕ್ರೈಂ
ಮಂಗಳೂರು, ಜ.14: ಮಂಗಳೂರು ನಗರದಲ್ಲಿ ಮಕ್ಕಳ ಕಳ್ಳರಿದ್ದಾರೆಂಬ ವದಂತಿ ಕೇಳಿಬಂದಿದೆ. ಬುಧವಾರ ಬೆಳಗ್ಗೆ ಕುದ್ರೋಳಿಯ ಅಳಕೆಯಲ್ಲಿ ಒಬ್ಬ ಮಹಿಳೆಯ ಬಗ್ಗೆ ಗುಮಾನಿ ವ್ಯಕ್ತಪಡಿಸಿ, ಜನರು ಸೇರಿ ಆಕೆಯನ್ನು ಗದರಿ, ಪೊಲೀಸರಿಗೊಪ್ಪಿಸಿದ್ದರು. ನಿನ್ನೆ ಸಂಜೆ ಹೊತ್ತಿಗೆ ಕೊಂಚಾಡಿಯ ಮಹಾಲಸಾ ದೇವಸ್ಥಾನ ಆವರಣದಲ್ಲಿ ಮಗುವೊಂದನ್ನು ಅಪಹರಿಸುವ ಯತ್ನ ನಡೆದಿದೆ ಎನ್ನಲಾಗಿದೆ.
ಕೊಂಚಾಡಿಯಲ್ಲಿ ಬೈಕಿನಲ್ಲಿ ಬಂದಿದ್ದ ಇಬ್ಬರು ಸೇರಿ ಆಟವಾಡುತ್ತಿದ್ದ ಮಗುವೊಂದನ್ನು ಮುಸುಕು ಹಾಕಿ, ಹಿಡಿಯಲು ಯತ್ನಿಸಿದ್ದಾರೆ. ಮಗುವಿನ ತಲೆಯ ಭಾಗಕ್ಕೆ ಮುಸುಕು ಹಾಕುತ್ತಿದ್ದಂತೆ ಅಲ್ಲಿ ಆಟವಾಡುತ್ತಿದ್ದ ಇತರೇ ಮಕ್ಕಳು ಬೊಬ್ಬೆ ಹಾಕಿದ್ದಾರೆ. ಅಷ್ಟರಲ್ಲಿ ಬೈಕಿನಲ್ಲಿ ಬಂದವರು ಪರಾರಿಯಾಗಿದ್ದಾರೆ.

ಮಕ್ಕಳ ಮಾತು ಕೇಳಿ, ಸ್ಥಳೀಯರು ಭಯಗೊಂಡಿದ್ದು ಅಪಹರಣ ಯತ್ನಕ್ಕೆ ಒಳಗಾದ ಮಗುವಿನ ಪಾಲಕರು ಕಂಕನಾಡಿ ನಗರ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಆಗಂತುಕರ ಪತ್ತೆಗಾಗಿ ಕೊಂಚಾಡಿ ಪರಿಸರದ ಸಿಸಿಟಿವಿಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಮಕ್ಕಳ ಅಪಹರಣಕ್ಕೆ ಯತ್ನಿಸಿದ್ದು ಹೌದೋ, ಅಲ್ಲವೋ ಎನ್ನುವ ಬಗ್ಗೆ ಖಾತ್ರಿಪಡಿಸಲು ದಾಖಲೆ ಹುಡುಕುತ್ತಿದ್ದಾರೆ.

ಇದೇ ವೇಳೆ, ಅಳಕೆಯಲ್ಲಿ ಮಹಿಳೆಯ ಕಿತಾಪತಿ ಬಗ್ಗೆ ಬಂದರು ಪೊಲೀಸರಲ್ಲಿ ವಿಚಾರಿಸಿದರೆ, ಅಲ್ಲಿ ಮಹಿಳೆಯ ಬಗ್ಗೆ ಗುಮಾನಿ ಬಂದಿದ್ದು ಫೋಟೊ ತೆಗೆದು ವಾಟ್ಸಾಪ್ ನಲ್ಲಿ ಹಾಕಿದ್ದು ಗೊತ್ತು. ಅದು ಮಕ್ಕಳ ಅಪಹರಣದ ವಿಷಯ ಅಲ್ಲ. ಆ ಮಹಿಳೆ, ಉತ್ತರ ಭಾರತದ ಮೂಲದವರಾಗಿದ್ದು ಅಳಕೆ ಪರಿಸರದಲ್ಲಿ ಗುಜರಾತಿ ಮೂಲದವರ ಮನೆಗೆ ಬಂದು ಹಣ ಕೇಳುತ್ತಿದ್ದರಂತೆ. ಅದರ ಬಗ್ಗೆ ಯಾರೂ ಕಂಪ್ಲೇಂಟ್ ಕೊಟ್ಟಿಲ್ಲ ಎಂದು ತಿಳಿಸಿದ್ದಾರೆ.
A woman was held by locals at Konchady in Mangalore alleging of Kidnapping Children. The Kankandy Town police have registered the case against her.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 04:54 pm
HK News Staffer
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm