ಬ್ರೇಕಿಂಗ್ ನ್ಯೂಸ್
16-01-21 02:29 pm Mangalore Correspondent ಕ್ರೈಂ
ಮಂಗಳೂರು, ಜ.16: ಕೊಂಚಾಡಿಯ ಬಾಲಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ಕಂಕನಾಡಿ ನಗರ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾವೂರಿನ ರಕ್ಷಕ್ ಶೆಟ್ಟಿ (22), ಬೊಂದೇಲ್ ನಿವಾಸಿ ಆಲಿಸ್ಟರ್ ತಾವ್ರೋ(21) ಮತ್ತು ಕಾವೂರಿನ ಕೆಐಓಸಿಎಲ್ ಕ್ವಾಟ್ರಸ್ ನಿವಾಸಿ ರಾಹುಲ್ ಸಿನ್ಹಾ(21) ಬಂಧಿತರು.


ಪೊಲೀಸರು ಸಿಸಿಟಿವಿ ಆಧರಿಸಿ, ತನಿಖೆ ನಡೆಸಿದಾಗ ಮೂರು ಮಂದಿ ಒಂದೇ ಸ್ಕೂಟರಿನಲ್ಲಿ ಬಂದಿದ್ದು ಕೊಂಚಾಡಿ ಮಹಾಲಸಾ ನಾರಾಯಣಿ ದೇವಸ್ಥಾನದ ಮುಂಭಾಗದಲ್ಲಿ ಬಾಲಕರನ್ನು ಅಪಹರಣ ನಡೆಸಲು ಯತ್ನಿಸಿದ್ದು ಕಂಡುಬಂದಿತ್ತು. ಮೂವರನ್ನು ಕೂಡ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಆರೋಪಿಗಳು ಬೇರೆಯದ್ದೇ ಕತೆ ಹೇಳಿದ್ದಾರೆ.
ತಾವು ಅಣಕು (ಫ್ರಾಂಕ್) ವಿಡಿಯೋ ಮಾಡುವುದಕ್ಕಾಗಿ ಬಾಲಕರನ್ನು ಗೋಣಿ ಚೀಲದಲ್ಲಿ ಮುಸುಕು ಹಾಕುವ ಪ್ರಯೋಗ ನಡೆಸಿದ್ದೆವು. ಅದನ್ನು ಮೊಬೈಲ್ ನಲ್ಲಿ ವಿಡಿಯೋ ಮಾಡಿ, ಯೂಟ್ಯೂಬ್ ಅಪ್ಲೋಡ್ ಮಾಡಲು ಯೋಜನೆ ಹಾಕಿದ್ದೆವು. ಬೇರಾವುದೇ ದುರುದ್ದೇಶ ಇರಲಿಲ್ಲ ಎಂದು ಆರೋಪಿಗಳು ತಪ್ಪೊಪ್ಪಿಗೆ ನೀಡಿದ್ದಾರೆ. ಆದರೆ, ಪೊಲೀಸರು ಮೂವರ ಪೂರ್ವಾಪರ ವಿಚಾರಿಸಿದಾಗ, ಮೂವರ ವಿರುದ್ಧವೂ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿರುವುದು ಕಂಡುಬಂದಿದೆ.


ರಕ್ಷಕ್ ಶೆಟ್ಟಿ ವಿರುದ್ಧ ಮಂಗಳೂರು ಪೂರ್ವ ಠಾಣೆಯಲ್ಲಿ 2018ರಲ್ಲಿ ಹಲ್ಲೆ, ಜೀವ ಬೆದರಿಕೆ ಪ್ರಕರಣ ದಾಖಲಾಗಿದೆ. ಆಲಿಸ್ಟರ್ ವಿರುದ್ಧ ಕಾವೂರು ಠಾಣೆಯಲ್ಲಿ 2017, 2019 ಮತ್ತು 2020ರಲ್ಲಿ ಎನ್ ಡಿಪಿಎಸ್ ಕಾಯ್ದೆಯಡಿ ಗಾಂಜಾ ಸಂಬಂಧ ಪ್ರಕರಣ ದಾಖಲಾಗಿದೆ. ರಾಹುಲ್ ಸಿನ್ಹ ವಿರುದ್ಧವೂ ಕಾವೂರು ಠಾಣೆಯಲ್ಲಿ ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಹೀಗಾಗಿ ಆರೋಪಿಗಳು ತಪ್ಪೊಪ್ಪಿಗೆ ಹೇಳಿಕೆ ನೀಡಿದರೂ, ಪೊಲೀಸರು ಅವರನ್ನು ಅಷ್ಟಕ್ಕೇ ಬಿಡಲು ತಯಾರಿಲ್ಲ. ಅಪರಾಧ ಪ್ರಕರಣಗಳ ಹಿನ್ನೆಲೆ ಇರುವುದರಿಂದ ಬಾಲಕರನ್ನು ಯಾವುದೋ ಉದ್ದೇಶ ಇಟ್ಟುಕೊಂಡು ಕಿಡ್ನಾಪ್ ನಡೆಸಲು ಸಂಚು ಹೂಡಿದ್ದರೇ ಎನ್ನುವ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಬುಧವಾರ ಸಂಜೆ ಏಳು ಗಂಟೆ ಸುಮಾರಿಗೆ ಮೂವರು ಬಾಲಕರು ದೇವಸ್ಥಾನ ಪರಿಸರದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಮೂವರು ಆಗಂತುಕರು ಗೋಣಿಚೀಲ ಮುಸುಕು ಹಾಕಿ ಅಪಹರಿಸಲು ಯತ್ನಿಸಿದ್ದರು. ಆದರೆ, ಬಾಲಕರು ಬೊಬ್ಬಿಟ್ಟಿದ್ದರಿಂದ ಅಲ್ಲಿಂದ ಓಡಿ ಹೋಗಿದ್ದರು. ವಿಡಿಯೋ ಮಾಡುವುದಕ್ಕಾಗಿಯೇ ಈ ಕೃತ್ಯ ನಡೆಸಿದ್ದರೆ, ಏನೋ ಮಾಡಲು ಹೋಗಿ ಹರೆಯದ ಯುವಕರು ಜೈಲು ಪಾಲಾದಂತಾಗಿದೆ.
Video:
Three youths who were in an attempt of Kidnapping three children at Konchady in Mangalore have been arrested by the city police.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 04:54 pm
HK News Staffer
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm