ಬ್ರೇಕಿಂಗ್ ನ್ಯೂಸ್
16-01-21 06:22 pm Mangalore Correspondent ಕ್ರೈಂ
ಮಂಗಳೂರು, ಜ.16: ದೇವಸ್ಥಾನಗಳಿಗೆ ಬರುವ ಮಹಿಳೆಯರನ್ನು ಟಾರ್ಗೆಟ್ ಮಾಡಿಕೊಂಡು ಹ್ಯಾಂಡ್ ಬ್ಯಾಗ್ ಎಳೆದು ಹಣ ಎಗರಿಸುವ ಪ್ರಕರಣವನ್ನು ಬೆಂಬತ್ತಿದ ಬಜ್ಪೆ ಪೊಲೀಸರು ಗದಗ ಮೂಲದ ಕಳ್ಳರ ಕುಟುಂಬವನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.
ಯಮುನವ್ವ ಮುತ್ತಪ್ಪ ಛಲವಾದಿ (55) , ಪ್ರಕಾಶ್ ಚೆನ್ನಪ್ಪ (27) , ಶೋಭಾ ಮುಟಗಾರ (45), ಕುಮಾರವ್ವ ಮಾರುತಿ ಮೆಟಗಾರ (40), ಶಾಂತಮ್ಮ ಮೆಟಗಾರ(56), ಚಂದ್ರಶೇಖರ್ ಕಮರುಡಿ (49) ಬಂಧಿತರು.


ಜ.12ರಂದು ಯಶೋಧಾ ಗೌಡ ಎಂಬವರು ಕಟೀಲು ದೇವಸ್ಥಾನಕ್ಕೆ ಹೋಗಿದ್ದಾಗ ನಾಲ್ವರು ಮಹಿಳೆಯರು ಮತ್ತು ಒಬ್ಬ ಪುರುಷನಿದ್ದ ತಂಡ, ಅವರ ಬ್ಯಾಗ್ ಎಳೆದು ಅದರಲ್ಲಿದ್ದ ನಾಲ್ಕು ಸಾವಿರ ಹಣವನ್ನು ಕಳವು ಮಾಡಿತ್ತು. ಪ್ರಕರಣ ಸಂಬಂಧಿಸಿ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತಂಡ ತೂಫಾನ್ ವಾಹನದಲ್ಲಿ ಪರಾರಿಯಾಗಿದ್ದರು ಎಂಬ ಸುಳಿವು ಆಧರಿಸಿ, ತನಿಖೆ ಕೈಗೊಂಡಿದ್ದರು. ಬಳಿಕ ಪೊಳಲಿ ದೇವಸ್ಥಾನದ ಬಳಿ ತೂಫಾನ್ ವಾಹನ ಕಂಡುಬಂದಿದ್ದು ಪೊಲೀಸರು ಅಡ್ಡೂರಿನಲ್ಲಿ ಅಡ್ಡಗಟ್ಟಿ ತಪಾಸಣೆ ನಡೆಸಿದಾಗ ಕುಟುಂಬಸ್ಥರ ಕಳವು ಕೃತ್ಯ ಬಯಲಾಗಿದೆ.


ವಿಚಾರಣೆ ವೇಳೆ, ಇದೇ ತಂಡ ಕೊಲ್ಲೂರು, ಮುರುಡೇಶ್ವರ ದೇವಸ್ಥಾನ ಸೇರಿದಂತೆ ವಿವಿಧ ಕಡೆಗಳಲ್ಲಿ ಜನ ಸೇರುವ ಉತ್ಸವ ಸಂದರ್ಭ ಮಹಿಳೆಯರ ಬ್ಯಾಗ್ ಕಳವುಗೈದು ಹಣ ಎಗರಿಸುವ ಜಾಲದಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಆರೋಪಿಗಳಿಂದ ಏಳು ಮೊಬೈಲ್, 71 ಸಾವಿರ ನಗದನ್ನು ವಶಕ್ಕೆ ಪಡೆಯಲಾಗಿದೆ.
Bajpe police arrested six people include four women of Gadag district theft case in the temple premise
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am