ಬ್ರೇಕಿಂಗ್ ನ್ಯೂಸ್
16-01-21 06:22 pm Mangalore Correspondent ಕ್ರೈಂ
ಮಂಗಳೂರು, ಜ.16: ದೇವಸ್ಥಾನಗಳಿಗೆ ಬರುವ ಮಹಿಳೆಯರನ್ನು ಟಾರ್ಗೆಟ್ ಮಾಡಿಕೊಂಡು ಹ್ಯಾಂಡ್ ಬ್ಯಾಗ್ ಎಳೆದು ಹಣ ಎಗರಿಸುವ ಪ್ರಕರಣವನ್ನು ಬೆಂಬತ್ತಿದ ಬಜ್ಪೆ ಪೊಲೀಸರು ಗದಗ ಮೂಲದ ಕಳ್ಳರ ಕುಟುಂಬವನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.
ಯಮುನವ್ವ ಮುತ್ತಪ್ಪ ಛಲವಾದಿ (55) , ಪ್ರಕಾಶ್ ಚೆನ್ನಪ್ಪ (27) , ಶೋಭಾ ಮುಟಗಾರ (45), ಕುಮಾರವ್ವ ಮಾರುತಿ ಮೆಟಗಾರ (40), ಶಾಂತಮ್ಮ ಮೆಟಗಾರ(56), ಚಂದ್ರಶೇಖರ್ ಕಮರುಡಿ (49) ಬಂಧಿತರು.


ಜ.12ರಂದು ಯಶೋಧಾ ಗೌಡ ಎಂಬವರು ಕಟೀಲು ದೇವಸ್ಥಾನಕ್ಕೆ ಹೋಗಿದ್ದಾಗ ನಾಲ್ವರು ಮಹಿಳೆಯರು ಮತ್ತು ಒಬ್ಬ ಪುರುಷನಿದ್ದ ತಂಡ, ಅವರ ಬ್ಯಾಗ್ ಎಳೆದು ಅದರಲ್ಲಿದ್ದ ನಾಲ್ಕು ಸಾವಿರ ಹಣವನ್ನು ಕಳವು ಮಾಡಿತ್ತು. ಪ್ರಕರಣ ಸಂಬಂಧಿಸಿ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತಂಡ ತೂಫಾನ್ ವಾಹನದಲ್ಲಿ ಪರಾರಿಯಾಗಿದ್ದರು ಎಂಬ ಸುಳಿವು ಆಧರಿಸಿ, ತನಿಖೆ ಕೈಗೊಂಡಿದ್ದರು. ಬಳಿಕ ಪೊಳಲಿ ದೇವಸ್ಥಾನದ ಬಳಿ ತೂಫಾನ್ ವಾಹನ ಕಂಡುಬಂದಿದ್ದು ಪೊಲೀಸರು ಅಡ್ಡೂರಿನಲ್ಲಿ ಅಡ್ಡಗಟ್ಟಿ ತಪಾಸಣೆ ನಡೆಸಿದಾಗ ಕುಟುಂಬಸ್ಥರ ಕಳವು ಕೃತ್ಯ ಬಯಲಾಗಿದೆ.


ವಿಚಾರಣೆ ವೇಳೆ, ಇದೇ ತಂಡ ಕೊಲ್ಲೂರು, ಮುರುಡೇಶ್ವರ ದೇವಸ್ಥಾನ ಸೇರಿದಂತೆ ವಿವಿಧ ಕಡೆಗಳಲ್ಲಿ ಜನ ಸೇರುವ ಉತ್ಸವ ಸಂದರ್ಭ ಮಹಿಳೆಯರ ಬ್ಯಾಗ್ ಕಳವುಗೈದು ಹಣ ಎಗರಿಸುವ ಜಾಲದಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಆರೋಪಿಗಳಿಂದ ಏಳು ಮೊಬೈಲ್, 71 ಸಾವಿರ ನಗದನ್ನು ವಶಕ್ಕೆ ಪಡೆಯಲಾಗಿದೆ.
Bajpe police arrested six people include four women of Gadag district theft case in the temple premise
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 05:38 pm
HK News Desk
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm