ಬ್ರೇಕಿಂಗ್ ನ್ಯೂಸ್
18-01-21 06:56 pm Mangalore Correspondent ಕ್ರೈಂ
ಉಳ್ಳಾಲ, ಜ.18: ಹದಿನೈದು ವರ್ಷದ ಹಿಂದೆ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡ ಬ್ರಾಹ್ಮಣ ಹೆಣ್ಮಗಳನ್ನು ಗಂಡನಿಂದ ದೂರವಾದ ಬಳಿಕ ಉಳ್ಳಾಲ ಎಸ್ ಡಿಪಿಐ ಮುಖಂಡನೊಬ್ಬ ಆಕೆಯ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಲ್ಲದೆ ಇಬ್ಬರು ಸಣ್ಣ ಮಕ್ಕಳಿಗೂ ಲೈಂಗಿಕ ಕಿರುಕುಳ ಕೊಟ್ಟಿರುವ ಬಗ್ಗೆ ಪ್ರಕರಣ ದಾಖಲಾಗಿದೆ.
ಎಸ್ ಡಿಪಿಐ ಉಳ್ಳಾಲ ಸಮಿತಿ ಕ್ಷೇತ್ರಾಧ್ಯಕ್ಷ ಸಿದ್ದೀಕ್ ಉಳ್ಳಾಲ್ ಕಾಮುಕ ಕೃತ್ಯ ನಡೆಸಿರುವ ಆರೋಪಿಯಾಗಿದ್ದು ಕೇಸು ದಾಖಲಾಗುತ್ತಲೇ ಪರಾರಿಯಾಗಿದ್ದಾನೆ. ಜನವರಿ 16 ರಂದು ಈತನ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದ್ದು ಪೊಲೀಸರು ಗಂಭೀರ ಪ್ರಕರಣವನ್ನು ಹೊರಗೆ ಬಾರದಂತೆ ಮುಚ್ಚಿಟ್ಟಿದ್ದಾರೆಂಬ ಆರೋಪ ಕೇಳಿಬಂದಿದೆ.
ಕೊಣಾಜೆ ನಡುಪದವಿನ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ಬ್ರಾಹ್ಮಣ ಯುವತಿಯನ್ನು ಕೇರಳ ಮೂಲದ ಮುಸ್ಲಿಂ ಯುವಕ 15 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿ ಆಕೆಯನ್ನ ಮುಸ್ಲಿಂ ಆಗು ಮತಾಂತರಗೊಳಿಸಿದ್ದ. ಮತಾಂತರ ನಂತರ ಯುವತಿ ಆಕೆಯ ಹೆಸರನ್ನು ಹಿಬಾ ಫಾತಿಮಾ ಎಂದು ಬದಲಿಸಿಕೊಂಡಿದ್ದಳು. ಯುವತಿಯನ್ನು ಪ್ರೀತಿಸಿ ಮದುವೆಯಾದ ಕೇರಳದ ಯುವಕ ಆಕೆಗೆ ಎರಡು ಹೆಣ್ಮಕ್ಕಳನ್ನು ಕರುಣಿಸಿದ ಬಳಿಕ ಎರಡು ವರ್ಷಗಳ ಹಿಂದೆ ನಾಪತ್ತೆಯಾಗಿದ್ದಾನೆ.

ಫಾತಿಮಾ ತನ್ನ 9 ವರ್ಷ ಮತ್ತು 6 ವರ್ಷದ ಎರಡು ಮಕ್ಕಳೊಂದಿಗೆ ಉಳ್ಳಾಲದ ಒಂಭತ್ತುಕೆರೆಯಲ್ಲಿ ವಾಸವಾಗಿದ್ದಳು. ಈ ಸಮಯದಲ್ಲಿ ಉಳ್ಳಾಲದ SDPI ಅಧ್ಯಕ್ಷ ಸಿದ್ದೀಕ್ ಉಳ್ಳಾಲ, ಆಕೆಗೆ ಸಹಾಯ ಮಾಡುವ ನೆಪದಲ್ಲಿ ಪರಿಚಿತನಾಗಿದ್ದ. ಅಲ್ಲದೆ, ಆಕೆಯೊಂದಿಗೆ ಸಲುಗೆ ಬೆಳೆಸಿಕೊಂಡು ಅಕ್ರಮ ಸಂಬಂಧಕ್ಕೆ ಮುಂದಾಗಿದ್ದ. ಆದರೆ, ಈ ನಡುವೆ ಆತ ಮಹಿಳೆಯ ಇಬ್ಬರು ಮಕ್ಕಳ ಮೇಲೆ ಕಣ್ಣು ಹಾಕಿದ್ದ. ಲೈಂಗಿಕ ಕಿರುಕುಳ ನೀಡಲಾರಂಭಿಸಿದ್ದ. ಇದರಿಂದ ಎಚ್ಚೆತ್ತ ಮಹಿಳೆ ಕಳೆದ ಜನವರಿ 16 ರಂದು ಉಳ್ಳಾಲ ಠಾಣೆಗೆ ದೂರು ನೀಡಿದ್ದಾಳೆ.
ಮಹಿಳೆಯ ಎರಡು ಹೆಣ್ಮಕ್ಕಳ ಮುಂದೆ ಸಿದ್ದೀಕ್ ಬೆತ್ತಲಾಗಿ ನಿಲ್ಲುತ್ತಿದ್ದನಂತೆ. ಎಚ್ಚೆತ್ತ ಮಹಿಳೆ ಪ್ರತಿಭಟಿಸಿ ದೂರು ಕೊಡುವುದಾಗಿ ಹೇಳಿದ್ದಳು. ಕಳೆದ ಡಿಸೆಂಬರ್ ತಿಂಗಳಲ್ಲೇ ಈ ಬೆಳವಣಿಗೆ ನಡೆದಿದ್ದು ಮಹಿಳೆಗೆ SDPI ಮುಖಂಡರು ಸೇರಿ ಕೊಲೆ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿದ್ದಾಳೆ. ಇದರಿಂದ ಪ್ರಕರಣ ದಾಖಲಿಸಲು ಹಿಂದೇಟು ಹಾಕಿದ್ದ ಮಹಿಳೆ, ಇದೀಗ ಮತ್ತೆ ಸಿದ್ದೀಕನ ಕಾಮದಾಟ ಜಾಸ್ತಿ ಯಾಗುತ್ತಿಲೇ ಉಳ್ಳಾಲ ಠಾಣೆಗೆ ದೂರು ನೀಡಿದ್ದು ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿ ಸಿದ್ದೀಕ್ ಪರಾರಿಯಾಗಿದ್ದಾನೆ.
ಕಳೆದ ಶನಿವಾರ ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಇಂತಹ ಗಂಭೀರ ಪ್ರಕರಣದ ಬಗ್ಗೆ ಹಿರಿಯ ಪೊಲೀಸರು ಮಾತ್ರ ಟಿಕ್ ಪಿಟಿಕ್ ಎನ್ನುತ್ತಿಲ್ಲ. ಆರೋಪಿಯ ಬಂಧನಕ್ಕೂ ಮುಂದಾಗಿಲ್ಲ.
Love jihad and sexual assault to girl child Ullal police registered pocso act against SDPI leader
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 05:38 pm
HK News Desk
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm