ಬ್ರೇಕಿಂಗ್ ನ್ಯೂಸ್
19-01-21 11:13 am Mangalore Correspondent ಕ್ರೈಂ
ಬೆಳ್ತಂಗಡಿ, ಜ.19: ಮಗನೇ ತಂದೆಯನ್ನು ಮರದ ಸಲಾಕೆಯಿಂದ ಬಡಿದು ಹತ್ಯೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನಡು ಮುಂಡ್ಯೊಟ್ಟು ಎಂಬಲ್ಲಿ ನಡೆದಿದೆ.
ಶ್ರೀಧರ ಪೂಜಾರಿ(55) ಹತ್ಯೆಯಾದ ವ್ಯಕ್ತಿಯಾಗಿದ್ದು ಆರೋಪಿ ಮಗ ಹರೀಶ್ (27) ನನ್ನು ಪೊಲೀಸರು ಬಂಧಿಸಿದ್ದಾರೆ. ಮಗ ಹರೀಶ್ ಬೆಂಗಳೂರಿನಲ್ಲಿ ಕೆಲಸಕ್ಕಿದ್ದು ಅಲ್ಲಿ ಬೇರೆ ಹುಡುಗಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಇತ್ತೀಚೆಗೆ ತನ್ನ ಮನೆಗೆ ಬಂದಿದ್ದ ಹರೀಶನ ಮದುವೆ ವಿಚಾರದಲ್ಲಿ ತಂದೆಯೊಂದಿಗೆ ಜಗಳ ನಡೆದಿತ್ತು. ಬೇರೆ ಜಾತಿಯ ಹುಡುಗಿಯನ್ನು ಮದುವೆಯಾಗಿದ್ದಕ್ಕೆ ತಂದೆ ಆಕ್ಷೇಪಿಸಿದ್ದಲ್ಲದೆ ತನ್ನ ಮನೆಗೆ ಆಕೆಯನ್ನು ಕರೆತರದಂತೆ ಸೂಚಿಸಿದ್ದರು. ಈ ವಿಚಾರದಲ್ಲಿ ಹಲವು ಸಮಯದಿಂದ ಇಬ್ಬರ ನಡುವೆ ಜಟಾಪಟಿ ನಡೆಯುತ್ತಿತ್ತು.
ಸೋಮವಾರ ಮಧ್ಯಾಹ್ನ ಇದೇ ವಿಚಾರದಲ್ಲಿ ಮನೆಯಲ್ಲಿ ಜಗಳ ನಡೆದಿತ್ತು. ಸಂಜೆ 6.30ರ ವೇಳೆಗೆ ತನ್ನ ಸಹೋದರನ ಮನೆಗೆ ತೆರಳಿದ್ದ ಶ್ರೀಧರ ಪೂಜಾರಿ ಅಲ್ಲಿ ಮಗನನ್ನು ಬೈಯುತ್ತಿದ್ದರು. ಕುಡಿದ ಮತ್ತಿನಲ್ಲಿದ್ದ ಹರೀಶ ಅಲ್ಲಿಗೆ ತೆರಳಿ, ಕೈಗೆ ಸಿಕ್ಕಿದ ಮರದ ಸಲಾಕೆಯಿಂದ ತಂದೆಯ ತಲೆಗೆ ಹೊಡೆದಿದ್ದಾನೆ.
ತೀವ್ರ ರಕ್ತಸ್ರಾವಕ್ಕೊಳಗಾದ ಶ್ರೀಧರ ಪೂಜಾರಿಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಒಯ್ದಿದ್ದು ಅಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ. ಬೆಳ್ತಂಗಡಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿದ್ದು ಆರೋಪಿ ಹರೀಶನನ್ನು ಬಂಧಿಸಿದ್ದಾರೆ.
Son savagely beat his father to death using Hammer in Belthangady. It is learnt that he was angry at his father's refusal to accept his wife as daughter-in-law.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
01-08-26 10:25 pm
HK News Staffer
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm