ಬ್ರೇಕಿಂಗ್ ನ್ಯೂಸ್
19-01-21 11:13 am Mangalore Correspondent ಕ್ರೈಂ
ಬೆಳ್ತಂಗಡಿ, ಜ.19: ಮಗನೇ ತಂದೆಯನ್ನು ಮರದ ಸಲಾಕೆಯಿಂದ ಬಡಿದು ಹತ್ಯೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನಡು ಮುಂಡ್ಯೊಟ್ಟು ಎಂಬಲ್ಲಿ ನಡೆದಿದೆ.
ಶ್ರೀಧರ ಪೂಜಾರಿ(55) ಹತ್ಯೆಯಾದ ವ್ಯಕ್ತಿಯಾಗಿದ್ದು ಆರೋಪಿ ಮಗ ಹರೀಶ್ (27) ನನ್ನು ಪೊಲೀಸರು ಬಂಧಿಸಿದ್ದಾರೆ. ಮಗ ಹರೀಶ್ ಬೆಂಗಳೂರಿನಲ್ಲಿ ಕೆಲಸಕ್ಕಿದ್ದು ಅಲ್ಲಿ ಬೇರೆ ಹುಡುಗಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಇತ್ತೀಚೆಗೆ ತನ್ನ ಮನೆಗೆ ಬಂದಿದ್ದ ಹರೀಶನ ಮದುವೆ ವಿಚಾರದಲ್ಲಿ ತಂದೆಯೊಂದಿಗೆ ಜಗಳ ನಡೆದಿತ್ತು. ಬೇರೆ ಜಾತಿಯ ಹುಡುಗಿಯನ್ನು ಮದುವೆಯಾಗಿದ್ದಕ್ಕೆ ತಂದೆ ಆಕ್ಷೇಪಿಸಿದ್ದಲ್ಲದೆ ತನ್ನ ಮನೆಗೆ ಆಕೆಯನ್ನು ಕರೆತರದಂತೆ ಸೂಚಿಸಿದ್ದರು. ಈ ವಿಚಾರದಲ್ಲಿ ಹಲವು ಸಮಯದಿಂದ ಇಬ್ಬರ ನಡುವೆ ಜಟಾಪಟಿ ನಡೆಯುತ್ತಿತ್ತು.
ಸೋಮವಾರ ಮಧ್ಯಾಹ್ನ ಇದೇ ವಿಚಾರದಲ್ಲಿ ಮನೆಯಲ್ಲಿ ಜಗಳ ನಡೆದಿತ್ತು. ಸಂಜೆ 6.30ರ ವೇಳೆಗೆ ತನ್ನ ಸಹೋದರನ ಮನೆಗೆ ತೆರಳಿದ್ದ ಶ್ರೀಧರ ಪೂಜಾರಿ ಅಲ್ಲಿ ಮಗನನ್ನು ಬೈಯುತ್ತಿದ್ದರು. ಕುಡಿದ ಮತ್ತಿನಲ್ಲಿದ್ದ ಹರೀಶ ಅಲ್ಲಿಗೆ ತೆರಳಿ, ಕೈಗೆ ಸಿಕ್ಕಿದ ಮರದ ಸಲಾಕೆಯಿಂದ ತಂದೆಯ ತಲೆಗೆ ಹೊಡೆದಿದ್ದಾನೆ.
ತೀವ್ರ ರಕ್ತಸ್ರಾವಕ್ಕೊಳಗಾದ ಶ್ರೀಧರ ಪೂಜಾರಿಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಒಯ್ದಿದ್ದು ಅಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ. ಬೆಳ್ತಂಗಡಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿದ್ದು ಆರೋಪಿ ಹರೀಶನನ್ನು ಬಂಧಿಸಿದ್ದಾರೆ.
Son savagely beat his father to death using Hammer in Belthangady. It is learnt that he was angry at his father's refusal to accept his wife as daughter-in-law.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm