ಬ್ರೇಕಿಂಗ್ ನ್ಯೂಸ್
19-01-21 11:13 am Mangalore Correspondent ಕ್ರೈಂ
ಬೆಳ್ತಂಗಡಿ, ಜ.19: ಮಗನೇ ತಂದೆಯನ್ನು ಮರದ ಸಲಾಕೆಯಿಂದ ಬಡಿದು ಹತ್ಯೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನಡು ಮುಂಡ್ಯೊಟ್ಟು ಎಂಬಲ್ಲಿ ನಡೆದಿದೆ.
ಶ್ರೀಧರ ಪೂಜಾರಿ(55) ಹತ್ಯೆಯಾದ ವ್ಯಕ್ತಿಯಾಗಿದ್ದು ಆರೋಪಿ ಮಗ ಹರೀಶ್ (27) ನನ್ನು ಪೊಲೀಸರು ಬಂಧಿಸಿದ್ದಾರೆ. ಮಗ ಹರೀಶ್ ಬೆಂಗಳೂರಿನಲ್ಲಿ ಕೆಲಸಕ್ಕಿದ್ದು ಅಲ್ಲಿ ಬೇರೆ ಹುಡುಗಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಇತ್ತೀಚೆಗೆ ತನ್ನ ಮನೆಗೆ ಬಂದಿದ್ದ ಹರೀಶನ ಮದುವೆ ವಿಚಾರದಲ್ಲಿ ತಂದೆಯೊಂದಿಗೆ ಜಗಳ ನಡೆದಿತ್ತು. ಬೇರೆ ಜಾತಿಯ ಹುಡುಗಿಯನ್ನು ಮದುವೆಯಾಗಿದ್ದಕ್ಕೆ ತಂದೆ ಆಕ್ಷೇಪಿಸಿದ್ದಲ್ಲದೆ ತನ್ನ ಮನೆಗೆ ಆಕೆಯನ್ನು ಕರೆತರದಂತೆ ಸೂಚಿಸಿದ್ದರು. ಈ ವಿಚಾರದಲ್ಲಿ ಹಲವು ಸಮಯದಿಂದ ಇಬ್ಬರ ನಡುವೆ ಜಟಾಪಟಿ ನಡೆಯುತ್ತಿತ್ತು.
ಸೋಮವಾರ ಮಧ್ಯಾಹ್ನ ಇದೇ ವಿಚಾರದಲ್ಲಿ ಮನೆಯಲ್ಲಿ ಜಗಳ ನಡೆದಿತ್ತು. ಸಂಜೆ 6.30ರ ವೇಳೆಗೆ ತನ್ನ ಸಹೋದರನ ಮನೆಗೆ ತೆರಳಿದ್ದ ಶ್ರೀಧರ ಪೂಜಾರಿ ಅಲ್ಲಿ ಮಗನನ್ನು ಬೈಯುತ್ತಿದ್ದರು. ಕುಡಿದ ಮತ್ತಿನಲ್ಲಿದ್ದ ಹರೀಶ ಅಲ್ಲಿಗೆ ತೆರಳಿ, ಕೈಗೆ ಸಿಕ್ಕಿದ ಮರದ ಸಲಾಕೆಯಿಂದ ತಂದೆಯ ತಲೆಗೆ ಹೊಡೆದಿದ್ದಾನೆ.
ತೀವ್ರ ರಕ್ತಸ್ರಾವಕ್ಕೊಳಗಾದ ಶ್ರೀಧರ ಪೂಜಾರಿಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಒಯ್ದಿದ್ದು ಅಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ. ಬೆಳ್ತಂಗಡಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿದ್ದು ಆರೋಪಿ ಹರೀಶನನ್ನು ಬಂಧಿಸಿದ್ದಾರೆ.
Son savagely beat his father to death using Hammer in Belthangady. It is learnt that he was angry at his father's refusal to accept his wife as daughter-in-law.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
12-08-25 02:49 pm
HK News Desk
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
ಮದುವೆಯಾಗುತ್ತೇನೆಂದು ನಂಬಿಸಿ ಮೋಸ, ಇಸ್ಲಾಮಿಗೆ ಮತಾಂ...
11-08-25 08:55 pm
Rabies Death, Supreme Court: ರಾಜಧಾನಿಯಲ್ಲಿ ರೇಬ...
11-08-25 02:48 pm
12-08-25 11:06 pm
Mangalore Correspondent
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
Pilikula Zoo Director, Mangalore Police: ಪಿಲಿ...
12-08-25 01:49 pm
Mangalore, Manipal Health Card, Silver Jubile...
12-08-25 01:09 pm
Dharmasthala Case, SIT, Radar: ಧರ್ಮಸ್ಥಳ 13ನೇ...
11-08-25 07:39 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm