ಬ್ರೇಕಿಂಗ್ ನ್ಯೂಸ್
13-08-20 01:44 pm Headline Karnataka News Network ಕ್ರೈಂ
ಕೋಲಾರ, ಆಗಸ್ಟ್ 13: ಹಾಡಹಗಲೇ ಯುವತಿ ಹಾಗು ಅವರ ತಂಗಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೇಳೆ, ದುಷ್ಕರ್ಮಿಗಳು ಇನ್ನೋವಾ ಕಾರಲ್ಲಿ ಬಂದು ಅಪಹರಣ ಮಾಡಿರುವ ಸಿನಿಮೀಯ ಘಟನೆ ಕೋಲಾರ ನಗರದ ಎಂಬಿ ರಸ್ತೆಯಲ್ಲಿ ಗುರುವಾರ ಬೆಳಗ್ಗೆ ಸುಮಾರು 11.45 ರ ವೇಳೆಗೆ ನಡೆದಿದೆ. ನಗರದ ಕಿಲ್ಲಾರಿಪೇಟೆ ಬಡಾವಣೆಯ 23 ವರ್ಷದ ಯುವತಿಯನ್ನ ನಗರದ ನಿವಾಸಿ ಶಿವು ಹಾಗು ಅವರ ಸ್ನೇಹಿತರು ಇನ್ನೋವಾ ಕಾರಲ್ಲಿ ಕಿಡ್ನಾಪ್ ಮಾಡಿರುವುದಾಗಿ ಪೋಷಕರು ಕೋಲಾರದ ಗಲ್ ಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಯುವತಿ ಹಾಗು ತಂಗಿ ರಸ್ತೆಯಲ್ಲಿ ನಡೆದು ಮನೆಗೆ ವಾಪಾಸ್ ಆಗುತ್ತಿದ್ದ ವೇಳೆ, ಇನ್ನೋವಾ ಕಾರಲ್ಲಿ ಎದುರಿಗೆ ಬಂದ ದುಷ್ಕರ್ಮಿಗಳು ಸ್ವಲ್ಪ ದೂರಕ್ಕೆ ಕಾರು ನಿಲ್ಲಿಸಿ ಯುವತಿಯನ್ನ ಎಳೆದೊಯ್ದಿರುವ ದೃಶ್ಯಗಳು ಪಕ್ಕದ ಎಲೆಕ್ಟ್ರಾನಿಕ್ ಮಳಿಗೆಯೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಯುವತಿಯ ತಂಗಿ ಬಿಡಿಸಲು ಹೋದಾಗ ಬಲವಾಗಿ ತಳ್ಳಿ, ಕ್ಷಣ ಮಾತ್ರದಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ. ಅಪಹರಣ ಮಾಡಿದಾಗ ಕಾರಲ್ಲಿ ನಾಲ್ವರು ಇದ್ದರು ಎನ್ನಲಾಗಿದ್ದು, ಶಿವು ಹಾಗು ಅವರ ಸ್ನೇಹಿತರು ಕೃತ್ಯದಲ್ಲಿ ಭಾಗಯಾಗಿರುವ ಆರೋಪವಿದೆ.
ಯುವತಿಯು ಬಿಎಸ್ಸಿ ಓದುತ್ತಿದ್ದು ಪರಸ್ಪರ ಒಬ್ಬರಿಗೊಬ್ಬರು ಪರಿಚಯವೂ ಇದೆ. ಪರಿಚಯ ಪ್ರೀತಿಗೆ ತಿರುಗಿದ್ದು, ಮದುವೆ ಮಾಡಿಕೊಳ್ಳುವ ಪ್ರಸ್ತಾಪ ಬಂದಾಗ ಯುವತಿ ತನ್ನ ಪೋಷಕರ ಒಪ್ಪಿಗೆ ಬೇಕಿದೆ ಎಂದಿದ್ದಾರೆ. ಇಬ್ಬರ ಪ್ರೀತಿಗೆ ಪೋಷಕರು ವಿರೋಧ ಮಾಡಿದ್ದಾರೆ. ಇದರಿಂದ ಕೆರಳಿರುವ ಭಗ್ನ ಪ್ರೇಮಿ ಶಿವು, ಕಿಡ್ನಾಪ್ನಂತಹ ದುಷ್ಕೃತ್ಯಕ್ಕೆ ಕೈ ಹಾಕಿದ್ದಿರಬಹುದು ಎಂದು ಶಂಕಿಸಲಾಗಿದೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 09:46 pm
HK News Staffer
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
14-06-26 10:30 pm
HK News Staffer
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm