ಬ್ರೇಕಿಂಗ್ ನ್ಯೂಸ್
21-01-21 04:28 pm Mangaluru Correspondent ಕ್ರೈಂ
ಮಂಗಳೂರು, ಜ.21: ದುಬೈನಿಂದ ಮಂಗಳೂರಿಗೆ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಮತ್ತೊಬ್ಬ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಮಡಿಕೇರಿ ಮೂಲದ ಉಬೈದ್ ಬೆಲ್ಲಿಯತ್ ಅಝೀಝ್ ಎಂಬಾತ ಆರೋಪಿಯಾಗಿದ್ದು 800 ಗ್ರಾಮ್ ಚಿನ್ನವನ್ನು ಗುದ ದ್ವಾರದಲ್ಲಿಟ್ಟು ತರುತ್ತಿದ್ದ.
ಚಿನ್ನವನ್ನು ಪೇಸ್ಟ್ ರೂಪಕ್ಕಿಳಿಸಿ, ಉಂಡೆಯಾಗಿಸಿ ಗುದ ದ್ವಾರದಲ್ಲಿ ತುರುಕಿಸಿಟ್ಟುಕೊಂಡು ತರುತ್ತಿದ್ದಾಗ ಕಸ್ಟಮ್ಸ್ ಅಧಿಕಾರಿಗಳ ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದಾನೆ.
ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಏರ್ ಇಂಡಿಯಾ ವಿಮಾನದಲ್ಲಿ ಉಬೈದ್ ಆಗಮಿಸಿದ್ದು ಪರಿಶೀಲನೆ ವೇಳೆ ಸಂಶಯ ಬಂದು ತಪಾಸಣೆ ನಡೆಸಿದ್ದಾರೆ. 24 ಕ್ಯಾರೆಟ್ ಗುಣಮಟ್ಟದ ಚಿನ್ನವಾಗಿದ್ದು 800 ಗ್ರಾಮ್ ಚಿನ್ನದ ಬೆಲೆ 44.2 ಲಕ್ಷ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪತ್ತೆಯಾಗದ್ದು ಹತ್ತು ಪಟ್ಟು ?!
ನಾಲ್ಕು ದಿನಗಳಿಗೊಮ್ಮೆ ಗುದದಲ್ಲಿ ಚಿನ್ನದ ಪೇಸ್ಟ್ ಇಟ್ಟುಕೊಂಡು ಅಕ್ರಮ ಸಾಗಣೆಯ ಪ್ರಕರಣ ಬೆಳಕಿಗೆ ಬರುತ್ತಿದ್ದು ಚಿನ್ನ ಕಳ್ಳಸಾಗಣೆಗೆ ಗುದ ದ್ವಾರವೇ ಹೆಚ್ಚು ಸುರಕ್ಷಿತ ಎನ್ನುವಂತಾಗಿದೆ. ದುಬೈನಿಂದ ನೂರಾರು ಮಂದಿ ಇಂಥ ಕಳ್ಳಸಾಗಣೆಯಲ್ಲಿ ತೊಡಗಿದ್ದಾರೆ ಎನ್ನಲಾಗುತ್ತಿದ್ದು ಒಂದೆರಡು ಪ್ರಕರಣಗಳಷ್ಟೇ ಹೊರಬರುತ್ತಿವೆ. ಈ ರೀತಿಯ ಕಳ್ಳಸಾಗಣೆಯಲ್ಲಿ ಕಸ್ಟಮ್ಸ್ ಅಧಿಕಾರಿಗಳ ಪಾತ್ರವೂ ಇಲ್ಲದಿಲ್ಲ. ಪದೇ ಪದೇ ಒಂದೇ ಪ್ರಕಾರದ ಪ್ರಕರಣ ಹೊರ ಬರುತ್ತಿರುವುದರಿಂದ ಇದೇ ಮಾದರಿಯ ಕಳ್ಳಸಾಗಣೆ ಇದರ ನೂರು ಪಟ್ಟು ಆಗುತ್ತಿರುವುದರ ಮುನ್ಸೂಚನೆ ಅನ್ನುವ ಮಾತೂ ಕೇಳಿಬರುತ್ತಿದೆ.
Based on intelligence Customs sleuths of Mangaluru International Airport, one passenger from Dubai was intercepted and gold worth Rs 44.2 lac was recovered and seized on Thursday, January 21.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am