ಬ್ರೇಕಿಂಗ್ ನ್ಯೂಸ್
24-01-21 08:26 pm Mangaluru Correspondent ಕ್ರೈಂ
ಮಂಗಳೂರು, ಜ.24: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ದಿನೇಶ್ ಕುಮಾರ್ ವಿರುದ್ಧ ಪತ್ನಿ ಮೇಲೆ ಹಲ್ಲೆ ಮತ್ತು ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು ಪೊಲೀಸರಿಂದ ಬಂಧನ ಭೀತಿ ಶುರುವಾಗಿದೆ. ಈ ಬಗ್ಗೆ ಅವರ ಪತ್ನಿಯೇ ಬೆಂಗಳೂರಿನ ರಾಜರಾಜೇಶ್ವರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಕೆಎಎಸ್ ಅಧಿಕಾರಿ ಜಿ.ಟಿ. ದಿನೇಶ್ ಕುಮಾರ್ ಹಾಗೂ ಅತ್ತಿಗೆ ರಮ್ಯಾ ಎಂಬವರ ವಿರುದ್ದ ಪತ್ನಿ ಕೆ.ಪಿ. ದೀಪ್ತಿ ದೂರು ದಾಖಲು ಮಾಡಿದ್ದಾರೆ. ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಮೂಲತಃ ಚಿತ್ರದುರ್ಗದ ಸಂತೆಬೆನ್ನೂರಿನ ದೀಪ್ತಿ ಆರ್.ಆರ್.ನಗರದಲ್ಲಿ ವಾಸವಾಗಿದ್ದು, 2015ರಲ್ಲಿ ಹಿಂದು ಸಂಪ್ರದಾಯದಂತೆ ದಿನೇಶ್ ಕುಮಾರ್ ಜೊತೆಗೆ ಮದುವೆಯಾಗಿದ್ದರು. ದೀಪ್ತಿ ಪೋಷಕರು ವರದಕ್ಷಿಣೆ ರೂಪದಲ್ಲಿ ಒಂದು ಕೆಜಿ ಚಿನ್ನ, ಐದು ಕೆಜಿ ಬೆಳ್ಳಿ ನೀಡಿ ಅದ್ಧೂರಿಯಾಗಿ ಮೈಸೂರಿನಲ್ಲಿ ಮದುವೆ ಮಾಡಿದ್ದರು. ಮದುವೆಯ ಫಲವಾಗಿ ದಂಪತಿಗೆ ಹೆಣ್ಣು ಮಗು ಜನಿಸಿತ್ತು.
ಆರಂಭದಲ್ಲಿ ಇಬ್ಬರೂ ಅನೋನ್ಯವಾಗಿದ್ದರು. ನಂತರ ಇಬ್ಬರ ಮಧ್ಯೆ ಮನಸ್ತಾಪ ಆಗಿದ್ದು ದಿನೇಶ್ ಮಗು ಮತ್ತು ಪತ್ನಿಗೆ ಏನನ್ನೂ ಕೊಡದೆ ನಿರ್ಲಕ್ಷ್ಯ ವಹಿಸುತ್ತಿದ್ದರು. ಇದನ್ನು ಪ್ರಶ್ನಿಸಿದರೆ ಮನೆಯಿಂದ ಚಿನ್ನಾಭರಣ ತಂದುಕೊಡುವಂತೆ ಮಾನಸಿಕ ಹಾಗೂ ದೈಹಿಕವಾಗಿ ನಿಂದಿಸುತ್ತಿದ್ದ. ಇದಕ್ಕೆ ದಿನೇಶ್ ಕುಮಾರ್ನ ಅತ್ತಿಗೆ ರಮ್ಯಾ ಸಾಥ್ ನೀಡಿದ್ದಳು. ಕಿರುಕುಳದ ಬಗ್ಗೆ ಗೊತ್ತಾಗಿ ಪತ್ನಿ ಕಡೆಯವರು ಹಿರಿಯರ ಸಮ್ಮುಖದಲ್ಲಿ ರಾಜಿ ಪಂಚಾಯಿತಿಯನ್ನೂ ನಡೆಸಿದ್ದರು. ಸಂಧಾನದ ಬಳಿಕವೂ ಮತ್ತೆ ವರದಕ್ಷಿಣೆ ತರುವಂತೆ ಗಂಡ ಪೀಡಿಸುತ್ತಿದ್ದ ಎಂದು ಪತ್ನಿ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
A case of Dowry has been filed against Mangalore Urban Development Authority Commissioner Dinesh Kumar by his wife in Bangalore.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 01:49 pm
Mangalore Correspondent
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm