ಬ್ರೇಕಿಂಗ್ ನ್ಯೂಸ್
24-01-21 08:26 pm Mangaluru Correspondent ಕ್ರೈಂ
ಮಂಗಳೂರು, ಜ.24: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ದಿನೇಶ್ ಕುಮಾರ್ ವಿರುದ್ಧ ಪತ್ನಿ ಮೇಲೆ ಹಲ್ಲೆ ಮತ್ತು ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು ಪೊಲೀಸರಿಂದ ಬಂಧನ ಭೀತಿ ಶುರುವಾಗಿದೆ. ಈ ಬಗ್ಗೆ ಅವರ ಪತ್ನಿಯೇ ಬೆಂಗಳೂರಿನ ರಾಜರಾಜೇಶ್ವರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಕೆಎಎಸ್ ಅಧಿಕಾರಿ ಜಿ.ಟಿ. ದಿನೇಶ್ ಕುಮಾರ್ ಹಾಗೂ ಅತ್ತಿಗೆ ರಮ್ಯಾ ಎಂಬವರ ವಿರುದ್ದ ಪತ್ನಿ ಕೆ.ಪಿ. ದೀಪ್ತಿ ದೂರು ದಾಖಲು ಮಾಡಿದ್ದಾರೆ. ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮೂಲತಃ ಚಿತ್ರದುರ್ಗದ ಸಂತೆಬೆನ್ನೂರಿನ ದೀಪ್ತಿ ಆರ್.ಆರ್.ನಗರದಲ್ಲಿ ವಾಸವಾಗಿದ್ದು, 2015ರಲ್ಲಿ ಹಿಂದು ಸಂಪ್ರದಾಯದಂತೆ ದಿನೇಶ್ ಕುಮಾರ್ ಜೊತೆಗೆ ಮದುವೆಯಾಗಿದ್ದರು. ದೀಪ್ತಿ ಪೋಷಕರು ವರದಕ್ಷಿಣೆ ರೂಪದಲ್ಲಿ ಒಂದು ಕೆಜಿ ಚಿನ್ನ, ಐದು ಕೆಜಿ ಬೆಳ್ಳಿ ನೀಡಿ ಅದ್ಧೂರಿಯಾಗಿ ಮೈಸೂರಿನಲ್ಲಿ ಮದುವೆ ಮಾಡಿದ್ದರು. ಮದುವೆಯ ಫಲವಾಗಿ ದಂಪತಿಗೆ ಹೆಣ್ಣು ಮಗು ಜನಿಸಿತ್ತು.
ಆರಂಭದಲ್ಲಿ ಇಬ್ಬರೂ ಅನೋನ್ಯವಾಗಿದ್ದರು. ನಂತರ ಇಬ್ಬರ ಮಧ್ಯೆ ಮನಸ್ತಾಪ ಆಗಿದ್ದು ದಿನೇಶ್ ಮಗು ಮತ್ತು ಪತ್ನಿಗೆ ಏನನ್ನೂ ಕೊಡದೆ ನಿರ್ಲಕ್ಷ್ಯ ವಹಿಸುತ್ತಿದ್ದರು. ಇದನ್ನು ಪ್ರಶ್ನಿಸಿದರೆ ಮನೆಯಿಂದ ಚಿನ್ನಾಭರಣ ತಂದುಕೊಡುವಂತೆ ಮಾನಸಿಕ ಹಾಗೂ ದೈಹಿಕವಾಗಿ ನಿಂದಿಸುತ್ತಿದ್ದ. ಇದಕ್ಕೆ ದಿನೇಶ್ ಕುಮಾರ್ನ ಅತ್ತಿಗೆ ರಮ್ಯಾ ಸಾಥ್ ನೀಡಿದ್ದಳು. ಕಿರುಕುಳದ ಬಗ್ಗೆ ಗೊತ್ತಾಗಿ ಪತ್ನಿ ಕಡೆಯವರು ಹಿರಿಯರ ಸಮ್ಮುಖದಲ್ಲಿ ರಾಜಿ ಪಂಚಾಯಿತಿಯನ್ನೂ ನಡೆಸಿದ್ದರು. ಸಂಧಾನದ ಬಳಿಕವೂ ಮತ್ತೆ ವರದಕ್ಷಿಣೆ ತರುವಂತೆ ಗಂಡ ಪೀಡಿಸುತ್ತಿದ್ದ ಎಂದು ಪತ್ನಿ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
A case of Dowry has been filed against Mangalore Urban Development Authority Commissioner Dinesh Kumar by his wife in Bangalore.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 09:21 pm
HK News Staffer
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am