ಬ್ರೇಕಿಂಗ್ ನ್ಯೂಸ್
25-01-21 11:14 am Mangalore Correspondent - Special Report ಕ್ರೈಂ
ಬೆಳ್ತಂಗಡಿ, ಜ.25 : ಉಜಿರೆಯ ಬಿಜೆಪಿ ಅಲ್ಪಸಂಖ್ಯಾತ ಘಟಕದ ಮುಖಂಡನ ಎಂಪೈರ್ ಹೊಟೇಲಿಗೆ ನುಗ್ಗಿ ಅಲ್ಲಿನ ಕೆಲಸಗಾರರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಉಜಿರೆ ನಿವಾಸಿಗಳಾದ ಅಜಿತ್ ಕುಮಾರ್, ಅರುಣ್ ಕುಮಾರ್, ನಿತೀಶ್, ಆಶಿಶ್ ಕುಮಾರ್, ಪರಮೇಶ್ವರ ಹಾಗೂ ನವೀನ್ ಬಂಧಿತ ಆರೋಪಿಗಳು.
ಶನಿವಾರ ರಾತ್ರಿ ಎಂಟು ಗಂಟೆಯ ಸುಮಾರಿಗೆ ಉಜಿರೆಯ ಎಂಪೈರ್ ಹೊಟೇಲಿನಲ್ಲಿ ಕೆಲಸ ಮಾಡುತ್ತಿರುವ ಮುಹಮ್ಮದ್ ಅಲ್ತಾಫ್ ಎಂಬವರು ಪಾರ್ಸೆಲ್ ನೀಡಿ ವಾಪಸ್ ಬರುತ್ತಿರುವುದನ್ನು ಕಾದು ಕುಳಿತಿದ್ದ ತಂಡವೊಂದು ಹಲ್ಲೆ ನಡೆಸಿದೆ. ಅವರು ಹಲ್ಲೆಕೋರರಿಂದ ತಪ್ಪಿಸಿಕೊಂಡು ಹೊಟೇಲ್ಗೆ ಬಂದಿದ್ದಾರೆ. ಈ ವೇಳೆ ತಂಡ ಅಲ್ತಾಫ್ರನ್ನು ಬೆನ್ನಟ್ಟಿಕೊಂಡು ಬಂದು ಹೊಟೇಲ್ಗೆ ನುಗ್ಗಿ ಅಲ್ತಾಫ್ ಹಾಗೂ ಸ್ಥಳದಲ್ಲಿದ್ದವರ ಮೇಲೆ ಹಲ್ಲೆ ನಡೆಸಿದ್ದಾರೆನ್ನಲಾಗಿದೆ.


ವಾರದ ಹಿಂದೆ ಹೊಟೇಲ್ಗೆ ಬಂದಿದ್ದ ಈ ತಂಡ ಹೋಟೆಲ್ ಕೆಲಸಗಾರರೊಂದಿಗೆ ಗಲಾಟೆ ಮಾಡಿದ್ದರು ಎನ್ನಲಾಗಿದ್ದು ಇದರ ಮುಂದುವರಿದ ಭಾಗವಾಗಿ ಈ ಹಲ್ಲೆ ನಡೆದಿದೆ ಎನ್ನಲಾಗಿದೆ.
ಇದೀಗ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಸುಮಾರು ಹದಿನೈದು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದವರ ಬಗ್ಗೆ ಸಿಸಿಟಿವಿ ಕ್ಯಾಮರಾಗಳ ದಾಖಲೆಗಳನ್ನು ಸಂಗ್ರಹಿಸಲಾಗಿದ್ದು ಆರೋಪಿಗಳ ಬಂಧನಕ್ಕೆ ಮುಂದಾಗಿದ್ದಾರೆ.
Beltangady police on Sunday, January 24 arrested six persons for allegedly barging into a hotel owned by a local BJP leader and assaulting the staff.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
01-08-26 10:25 pm
HK News Staffer
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm