ಬ್ರೇಕಿಂಗ್ ನ್ಯೂಸ್
25-01-21 05:05 pm Headline Karnataka News Network ಕ್ರೈಂ
ಹೈದರಾಬಾದ್, ಜ.25 : ಮೂಢ ನಂಬಿಕೆಗೆ ಬಲಿ ಬಿದ್ದು ಹೆತ್ತವರೇ ತಮ್ಮ ಕೈಯಾರೆ ಬೆಳೆದು ನಿಂತ ಇಬ್ಬರು ಹೆಣ್ಮಕ್ಕಳನ್ನು ಕೊಂದು ಹಾಕಿದ ಘಟನೆ ಆಂಧ್ರಪ್ರದೇಶದಲ್ಲಿ ಬೆಳಕಿಗೆ ಬಂದಿದೆ.
ಪದ್ಮಜಾ ಮತ್ತು ಪುರುಷೋತ್ತಮ ನಾಯ್ಡು ಎಂಬ ದಂಪತಿ, ತಮ್ಮ ಮಕ್ಕಳಾದ ಅಲೇಖ್ಯಾ (27) ಮತ್ತು ಸಾಯಿ ದಿವ್ಯಾ(22) ಅವರನ್ನು ಕೊಲೆಗೈದಿರುವ ಘಟನೆ ಚಿತ್ತೂರು ಜಿಲ್ಲೆಯ ಮದನಪಲ್ಲಿ ಎಂಬಲ್ಲಿ ನಡೆದಿದೆ. ಭಾನುವಾರ ರಾತ್ರಿ ಘಟನೆ ನಡೆದಿದ್ದು ಕಲಿಯುಗ ಇಲ್ಲಿಗೆ ಮುಗಿದಿದ್ದು ಸೋಮವಾರದಿಂದ ಸತ್ಯಯುಗ ಶುರುವಾಗಲಿದೆ. ಸತ್ಯಯುಗದಲ್ಲಿ ತಮ್ಮ ಇಬ್ಬರು ಮಕ್ಕಳು ಮತ್ತೆ ಬದುಕಿ ಬರಲಿದ್ದಾರೆಂದು ದಂಪತಿ ನಂಬಿದ್ದರು. ರಾತ್ರಿ ವೇಳೆ ಮನೆಯಿಂದ ಚೀರಾಟ ಕೇಳಿದ್ದರಿಂದ ನೆರೆಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದರು. ಪೊಲೀಸರು ಬಂದಾಗ, ದಂಪತಿ ಮನೆಯ ಒಳಗೆ ಬಾರದಂತೆ ತಡೆದಿದ್ದರು. ಬಳಿಕ ಬಲವಂತದಿಂದ ಮನೆಯ ಒಳ ಹೊಕ್ಕು ನೋಡಿದಾಗ ಪೂಜಾ ಕೊಠಡಿ ಮತ್ತೊಂದು ರೂಮಿನಲ್ಲಿ ಯುವತಿಯರ ಶವ ಪತ್ತೆಯಾಗಿದೆ. ಶವಕ್ಕೆ ಕೆಂಪು ಬಟ್ಟೆ ಸುತ್ತಿಟ್ಟಿದ್ದನ್ನು ನೋಡಿ, ಪ್ರಶ್ನಿಸಿದಾಗ ಅವರಿಬ್ಬರು ಮತ್ತೆ ಎದ್ದು ಬರುತ್ತಾರೆ. ನೀವು ಮುಟ್ಟಬೇಡಿ ಎಂದರಂತೆ.
ವಿಶೇಷ ಅಂದ್ರೆ, ಹೆತ್ತವರಿಬ್ಬರೂ ವಿದ್ಯಾವಂತರು. ಪದ್ಮಜಾ ಉಪ ಪ್ರಾಂಶುಪಾಲರಾಗಿದ್ದರೆ, ಪುರುಷೋತ್ತಮ ನಾಯ್ಡು ಬೇರೊಂದು ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅದಲ್ಲದೆ, ಹಿರಿ ಮಗಳು ಅಲೇಖ್ಯಾ ಭೋಪಾಲ್ ನಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದ್ದಾಳೆ. ಇನ್ನೊಬ್ಬ ಮಗಳು ಸಾಯಿ ದಿವ್ಯಾ ಬಿಬಿಎ ಮಾಡಿದ್ದು ಮುಂಬೈನಲ್ಲಿ ಎ.ಆರ್.ರೆಹ್ಮಾನ್ ಮ್ಯೂಸಿಕ್ ಸ್ಕೂಲ್ ನಲ್ಲಿ ವಿದ್ಯಾರ್ಥಿಯಾಗಿದ್ದಳು. ಕಳೆದ ಲಾಕ್ಡೌನ್ ಸಂದರ್ಭದಲ್ಲಿ ದಿವ್ಯಾ ಮನೆಗೆ ಮರಳಿದ್ದಳು.
ಲಾಕ್ಡೌನ್ ವೇಳೆ ಮನೆಯಲ್ಲಿ ದಂಪತಿ ವಿಚಿತ್ರವಾಗಿ ವರ್ತಿಸುತ್ತಿದ್ದರು. ಅದರಲ್ಲೂ ಪ್ರತಿ ಭಾನುವಾರ ರಾತ್ರಿ ವರ್ತನೆ ವಿಚಿತ್ರವಾಗಿರುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ನಿನ್ನೆ ರಾತ್ರಿ ಯುವತಿಯರ ಚೀರಾಟ, ಅಳು ಜೋರಾಗಿ ಕೇಳಿದ್ದರಿಂದ ಪೊಲೀಸರಿಗೆ ತಿಳಿಸಿದ್ದರು. ಹೆತ್ತವರೇ ಈ ಕೃತ್ಯವನ್ನು ನಡೆಸಿದ್ದಾರೆಯೇ ಘಟನೆಯಲ್ಲಿ ಇನ್ನಾರದ್ದಾದ್ರೂ ಕೈವಾಡ ಇದೆಯೇ ಎನ್ನುವ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಮೇಲ್ನೋಟಕ್ಕೆ ಡಂಬಲ್ಸ್ ಮಾದರಿಯ ದೊಣ್ಣೆಯಿಂದ ಮಕ್ಕಳನ್ನು ತಾಯಿಯೇ ಹೊಡೆದು ಕೊಂದಿದ್ದಾಳೆ ಎನ್ನಲಾಗಿದೆ. ಪೊಲೀಸರು ಇಬ್ಬರ ಶವವನ್ನು ಪೋಸ್ಟ್ ಮಾರ್ಟಂ ಕಳಿಸಿದ್ದು ದಂಪತಿಯನ್ನು ಬಂಧಿಸಿದ್ದಾರೆ.
In a shocking case of human sacrifice, a mother clubbed her two daughters to death on Sunday night in Madanapalle town of Chittoor district in Andhra Pradesh.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm