ಬ್ರೇಕಿಂಗ್ ನ್ಯೂಸ್
26-01-21 01:29 pm Bangalore Correspondent ಕ್ರೈಂ
ಬೆಂಗಳೂರು, ಜ.26: ಕೆಪಿಎಸ್ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದ ಪ್ರಕರಣದಲ್ಲಿ ರೂವಾರಿಯಾಗಿದ್ದ ಸ್ಟೆನೋಗ್ರಾಫರ್ ಸನಾ ಬೇಡಿ ಎಂಬ ಮಹಿಳೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ, ಪ್ರಕರಣದಲ್ಲಿ ಬಂಧಿತರಾದವರ ಸಂಖ್ಯೆ 16ಕ್ಕೇರಿದೆ.
ಕೆಲ ವರ್ಷಗಳಿಂದ ಕೆಪಿಎಸ್ಸಿ ಪರೀಕ್ಷಾ ವಿಭಾಗದಲ್ಲಿ ಸ್ಟೆನೋಗ್ರಾಫರ್ ಆಗಿದ್ದ ಸನಾ ಬೇಡಿ, ಜ.24ರಂದು ಭಾನುವಾರ ನಡೆಯಬೇಕಿದ್ದ ಪ್ರಶ್ನೆ ಪತ್ರಿಕೆಯನ್ನು ಟೈಪ್ ಮಾಡಿದ್ದಳು. ಅಲ್ಲದೆ, ಅದನ್ನು ಪ್ರಮುಖ ಆರೋಪಿ ರಮೇಶ್ ಅಲಿಯಾಸ್ ರಾಮಪ್ಪ ಹರೇಕಲ್ ಗೆ ಪೆನ್ ಡ್ರೈವ್ ಮೂಲಕ ಕೊಟ್ಟಿದ್ದಳು. ರಮೇಶ್ ಹಣದ ಆಮಿಷಕ್ಕೊಳಗಾಗಿ ತನ್ನ ಪರಿಚಿತ ಚಂದ್ರು ಮೂಲಕ ಪ್ರಶ್ನೆ ಪತ್ರಿಕೆಯನ್ನು ಮಾರಾಟ ಮಾಡಿದ್ದ ಎನ್ನುವ ಅಂಶ ವಿಚಾರಣೆಯಲ್ಲಿ ಬಯಲಾಗಿದೆ.
ಕೆಪಿಎಸ್ಸಿ ವಿಭಾಗದಲ್ಲಿ ದ್ವಿತೀಯ ದರ್ಜೆ ಸಹಾಯಕನಾಗಿದ್ದ ರಮೇಶ್, ಎಫ್ ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ಸನಾ ಬೇಡಿ ಟೈಪ್ ಮಾಡುವ ಬಗ್ಗೆ ತಿಳಿದಿತ್ತು. ಅದಕ್ಕಾಗಿ ಸನಾ ಬೇಡಿಯನ್ನು ಕಾಡತೊಡಗಿದ್ದ ರಮೇಶ್, ಈ ಬಾರಿ ಎಫ್ ಡಿಎ ಪರೀಕ್ಷೆ ಬರೆದು ಪಾಸಾಗಬೇಕು ಎಂದು ನಾಟಕವಾಡಿದ್ದ. ಅಲ್ಲದೆ, ಪ್ರಶ್ನೆ ಪತ್ರಿಕೆಯ ಪ್ರತಿ ನೀಡುವಂತೆ ಪೀಡಿಸಿದ್ದಾನೆ. ಬಳಿಕ ಸನಾ ಬೇಡಿ ತನ್ನಲ್ಲಿ ಕಾಪಿ ಮಾಡಿ ಇಟ್ಟುಕೊಂಡಿದ್ದ ಪ್ರಶ್ನೆ ಪತ್ರಿಕೆಯ ಪ್ರತಿಯನ್ನು ಪೆನ್ ಡ್ರೈವ್ ನಲ್ಲಿ ಹಾಕಿ ಕೊಟ್ಟಿದ್ದಳು. ಅದಕ್ಕಾಗಿ ಎಷ್ಟು ಹಣ ಪಡೆದಿದ್ದಾಳೆ ಎನ್ನೋದ್ರ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ರಮೇಶ್ ನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಎಲ್ಲವನ್ನೂ ಪೊಲೀಸರಲ್ಲಿ ಬಾಯಿ ಬಿಟ್ಟಿದ್ದಾನೆ.
ಇದೇ ವೇಳೆ, ಪ್ರಶ್ನೆಪತ್ರಿಕೆಯನ್ನು ಲಕ್ಷಾಂತರ ರೂಪಾಯಿಗೆ ಮಾರಾಟ ಮಾಡಲು ಅಭ್ಯರ್ಥಿಗಳಿಂದ ಡೀಲ್ ಕುದುರಿಸಿದ್ದ ಚಂದ್ರ ಮತ್ತು ರಾಜಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ಅವರಿಂದ ಈವರೆಗೆ 82 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ. ಅಲ್ಲದೆ, ಹಣ ಕೊಟ್ಟು ಪ್ರಶ್ನೆ ಪತ್ರಿಕೆ ಖರೀದಿಸಿದ್ದ 10ಕ್ಕೂ ಹೆಚ್ಚು ಅಭ್ಯರ್ಥಿಗಳನ್ನೂ ಬಂಧಿಸಿದ್ದಾರೆ.
Continuing its investigations into the FDA question paper leak case, the Central Crime Branch (CCB) today arrested Sana Bedi, stenographer in the Karnataka Public Service Commission (KPSC) controller of exam division, who allegedly played a key role in getting the papers leaked.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm