ಬ್ರೇಕಿಂಗ್ ನ್ಯೂಸ್
27-01-21 12:01 pm Udupi Correspondent ಕ್ರೈಂ
ಉಡುಪಿ, ಜ.27 : ಬೈಕಿನಲ್ಲಿ ತೆರಳುತ್ತಿದ್ದ ತಾಯಿ - ಮಗನನ್ನು ಕೋಟ ಠಾಣೆ ಪೊಲೀಸರು ತಪಾಸಣೆ ನೆಪದಲ್ಲಿ ಥಳಿಸಿ ಅಮಾನವೀಯ ನಡೆ ತೋರಿದ ಘಟನೆ ಕೋಟದಲ್ಲಿ ನಡೆದಿದೆ.
ಪ್ರಶಾಂತ್ ಎಂಬವರು, ಕೋಟ ಮೂರುಕೈ ರಸ್ತೆಯಲ್ಲಿ ಸಾಯ್ಬರ ಕಟ್ಟೆಗೆಂದು ತಾಯಿ ಶಾರದಾ ಅವರನ್ನು ಬೈಕ್ ನಲ್ಲಿ ಕುಳ್ಳಿರಿಸಿಕೊಂಡು ತೆರಳುತ್ತಿದ್ದರು. ಈ ಸಂದರ್ಭ ಚೆಕ್ಕಿಂಗ್ ನೆಪದಲ್ಲಿ ಕರ್ತವ್ಯದಲ್ಲಿದ್ದ ಕೋಟ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸಂತೋಷ್ ಬಿ.ಪಿ. ಮತ್ತು ಸ್ಟೇಶನ್ ಎಸ್ ಬಿ ರಾಜು ಅವರು ಪ್ರಶಾಂತ್ ಬೈಕ್ ತಡೆದು ದಾಖಲೆ ಕೇಳಿದ್ದಾರೆ. ಒರಿಜಿನಲ್ ದಾಖಲೆ ಮನೆಯಲ್ಲಿದ್ದ ಕಾರಣ ವಾಹನದ ದಾಖಲೆಯ ಝೆರಾಕ್ಸ್ ಅನ್ನು ಪ್ರಶಾಂತ್ ಪೊಲೀಸರಿಗೆ ನೀಡಿದ್ದಾರೆ. ಇದರಿಂದ ಅಸಮಾಧಾನಗೊಂಡ ಪೊಲೀಸರು ಪ್ರಶಾಂತ್ ಗೆ ಅವಾಚ್ಯ ಮಾತುಗಳಿಂದ ನಿಂದಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನೆಪಕ್ಕೆ ಪ್ರಶಾಂತ್ ಮೇಲೆ ಕೋಟ ಎಸ್ಸೈ ಕೈ ಮಾಡಿದ್ದು ಇಬ್ಬರು ಪೊಲೀಸರು ಸೇರಿ ಹಲ್ಲೆಗೈದು ಥಳಿಸಿದ್ದಾರೆ. ಇದನ್ನು ತಡೆಯಲು ಬಂದ ಪ್ರಶಾಂತ್ ತಾಯಿ ಶಾರದಾ ಅವರಿಗೂ ಬೆತ್ತದಿಂದ ಪೆಟ್ಟು ನೀಡಿದ್ದು ಮಗನನ್ನು ಅರೆಸ್ಟ್ ಮಾಡಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ ದಾಖಲಿಸಿದ್ದಾರೆ. ಇತ್ತ ಪೊಲೀಸ್ ರಿಂದ ಥಳಿಸಿಕೊಂಡ ಶಾರದಾ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸದ್ಯ , ಇದೇ ವಿಚಾರವಾಗಿ ತಾಯಿ ಶಾರದಾ ಮಾನವ ಹಕ್ಕುಗಳ ಆಯೋಗಕ್ಕೆ ಮೊರೆ ಹೋಗಿದ್ದಾರೆ. ಥಳಿಸುವ, ಹಲ್ಲೆ ಮಾಡುವ ಅಗತ್ಯ ಇಲ್ಲದಿದ್ದರೂ ನನ್ನ ಮತ್ತು ಮಗನ ಮೇಲೆ ಹಲ್ಲೆ ಮಾಡಿದ ಪೊಲೀಸರ ವಿರುದ್ಧ ಕೇಸು ದಾಖಲಿಸಬೇಕು, ಕರ್ತವ್ಯದಿಂದ ಅಮಾನತು ಮಾಡಬೇಕೆಂದು ಒತ್ತಾಯಿಸಿದ್ದಾರೆ. ಪೊಲೀಸರ ಕೃತ್ಯ ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
Son and Mother have been brutally assaulted by Kota Police overheated arguments in the matter of Vehicle Inspection in Udupi.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm