ಬ್ರೇಕಿಂಗ್ ನ್ಯೂಸ್
30-01-21 12:00 pm Headline Karnataka News Network ಕ್ರೈಂ
ಇಂದೋರ್, ಜ.30: ಇಂದಿನ ಕಾಲದ ಯುವಕ-ಯುವತಿಯರು ಸೋಶಿಯಲ್ ಮೀಡಿಯಾಗೆ ಫುಲ್ ಅಡಿಕ್ಟ್ ಆಗಿ ಹೋಗಿದ್ದಾರೆ. ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರ ತನಕ ಎಲ್ಲರ ಕೈನಲ್ಲೂ ಒಂದಲ್ಲ ಒಂದು ಮೊಬೈಲ್ ಇದ್ದೇ ಇರುತ್ತದೆ. ಅಲ್ಲದೆ ಸೋಶಿಯಲ್ ಮೀಡಿಯಾದಲ್ಲಿ ಪರಿಚಯವಾಗುವ ಅಪರಿಚಿತರೊಂದಿಗೆ ಚಾಟಿಂಗ್, ಡೇಟಿಂಗ್ ಎಂದು ಲೋಕವನ್ನೇ ಮರೆತು ಹೋಗಿರುತ್ತಾರೆ. ಹೀಗೆ ಆನ್ಲೈನ್ ನಲ್ಲಿ ಶುರುವಾದ ಪ್ರೀತಿಯೊಂದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಪ್ರಿಯಾ ಅಗರ್ವಾಲ್(26) ಎಂಬ ಮಹಿಳೆಯೊಬ್ಬಳು ಪತಿ ಮತ್ತು ಮುದ್ದಾದ ಮಗಳೊಂದಿಗೆ ಇಂದೋರ್ ನಲ್ಲಿ ನೆಲೆಸಿದ್ದಳು. ಆದರೆ ಪ್ರಿಯಾ ಅಗರ್ವಾಲ್ಗೆ ಆನ್ಲೈನ್ ಮೂಲಕ ಕಳೆದ ವರ್ಷ ಸೌರಭ್ ಎಂಬ ವ್ಯಕ್ತಿ ಪರಿಚಯವಾಗಿದ್ದಾನೆ. ಬಳಿಕ ಇಬ್ಬರ ನಡುವೆ ಸ್ನೇಹ ಬೆಳೆಯಿತು. ಹೀಗೆ ಚಾಟ್ ಮಾಡುತ್ತಾ, ಮಾಡುತ್ತಾ ಒಬ್ಬರಿಗೊಬ್ಬರು ಬಹಳ ಆತ್ಮೀಯರಾದರು. ಇತ್ತೀಚೆಗೆ ಪ್ರಿಯಾ ಸೌರಭ್ ಜೊತೆ ಮಾತನಾಡುವುದನ್ನು ಕಡಿಮೆ ಮಾಡಿದ್ದಾಳೆ. ಇದರಿಂದ ಕೋಪಗೊಂಡ ಸೌರಭ್, ಆಕೆಯನ್ನು ಭೇಟಿ ಮಾಡುವಂತೆ ಕರೆಸಿಕೊಂಡಿದ್ದಾನೆ.
ಅಂತೆಯೇ ಗುರುವಾರ ಸಂಜೆ 7 ಗಂಟೆ ಸುಮಾರಿಗೆ ಪ್ರಿಯಾ, ಆತನನ್ನು ಭೇಟಿ ಮಾಡಲು ಮಗಳೊಂದಿಗೆ ಗ್ಯಾನಶೀಲ ಸೂಪರ್ ಸಿಟಿ ಬಳಿ ಇರುವ ಖಾಲಿ ಜಾಗಕ್ಕೆ ಬಂದಿದ್ದಾಳೆ. ಈ ವೇಳೆ ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದು ಜಗಳ ಮಾಡುತ್ತಾ ವಿಕೋಪಕ್ಕೆ ತಿರುಗಿ ಸೌರಭ್ ತನ್ನ ಬಳಿ ಇದ್ದ ಕತ್ತರಿಯಿಂದ ಆಕೆಗೆ ಎರಡು ಬಾರಿ ಚುಚ್ಚಿದ್ದಾನೆ. ಮುಖ ಮತ್ತು ಕತ್ತಿಗೆ ಇರಿದ ಪರಿಣಾಮ ತೀವ್ರವಾಗಿ ಗಾಯಗೊಂಡ ಪ್ರಿಯಾಗೆ ರಕ್ತ ಹರಿಯಲು ಆರಂಭಿಸಿದೆ. ಮಗಳ ಮುಂದೆ ಉಸಿರಾಡಲು ಕೂಡ ಆಗದೇ ಪ್ರಿಯಾ ಸಮೀಪದಲ್ಲಿದ್ದ ಅಂಗಡಿ ಮುಂದೆ ಕುಸಿದಿದ್ದಾಳೆ. ಆದರೂ ಸೌರಭ್ ಇದಕ್ಕೂ ತನಗೂ ಸಂಬಂಧವೇ ಇಲ್ಲ ಎಂಬಂತೆ ಸ್ಕೂಟರ್ ಹತ್ತಿ ಆರಾಮವಾಗಿ ಸ್ಥಳದಿಂದ ಹೋಗುತ್ತಾನೆ. ಇನ್ನೂ ಈ ವೀಡಿಯೋ ರಸ್ತೆಯಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
A woman was allegedly stabbed to death by a person and his accomplice with a sharp-edged weapon in Madhya Pradesh's Indore's Lasudia police station area after which the accused has been taken into custody.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm