ಬ್ರೇಕಿಂಗ್ ನ್ಯೂಸ್
30-01-21 12:00 pm Headline Karnataka News Network ಕ್ರೈಂ
ಇಂದೋರ್, ಜ.30: ಇಂದಿನ ಕಾಲದ ಯುವಕ-ಯುವತಿಯರು ಸೋಶಿಯಲ್ ಮೀಡಿಯಾಗೆ ಫುಲ್ ಅಡಿಕ್ಟ್ ಆಗಿ ಹೋಗಿದ್ದಾರೆ. ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರ ತನಕ ಎಲ್ಲರ ಕೈನಲ್ಲೂ ಒಂದಲ್ಲ ಒಂದು ಮೊಬೈಲ್ ಇದ್ದೇ ಇರುತ್ತದೆ. ಅಲ್ಲದೆ ಸೋಶಿಯಲ್ ಮೀಡಿಯಾದಲ್ಲಿ ಪರಿಚಯವಾಗುವ ಅಪರಿಚಿತರೊಂದಿಗೆ ಚಾಟಿಂಗ್, ಡೇಟಿಂಗ್ ಎಂದು ಲೋಕವನ್ನೇ ಮರೆತು ಹೋಗಿರುತ್ತಾರೆ. ಹೀಗೆ ಆನ್ಲೈನ್ ನಲ್ಲಿ ಶುರುವಾದ ಪ್ರೀತಿಯೊಂದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಪ್ರಿಯಾ ಅಗರ್ವಾಲ್(26) ಎಂಬ ಮಹಿಳೆಯೊಬ್ಬಳು ಪತಿ ಮತ್ತು ಮುದ್ದಾದ ಮಗಳೊಂದಿಗೆ ಇಂದೋರ್ ನಲ್ಲಿ ನೆಲೆಸಿದ್ದಳು. ಆದರೆ ಪ್ರಿಯಾ ಅಗರ್ವಾಲ್ಗೆ ಆನ್ಲೈನ್ ಮೂಲಕ ಕಳೆದ ವರ್ಷ ಸೌರಭ್ ಎಂಬ ವ್ಯಕ್ತಿ ಪರಿಚಯವಾಗಿದ್ದಾನೆ. ಬಳಿಕ ಇಬ್ಬರ ನಡುವೆ ಸ್ನೇಹ ಬೆಳೆಯಿತು. ಹೀಗೆ ಚಾಟ್ ಮಾಡುತ್ತಾ, ಮಾಡುತ್ತಾ ಒಬ್ಬರಿಗೊಬ್ಬರು ಬಹಳ ಆತ್ಮೀಯರಾದರು. ಇತ್ತೀಚೆಗೆ ಪ್ರಿಯಾ ಸೌರಭ್ ಜೊತೆ ಮಾತನಾಡುವುದನ್ನು ಕಡಿಮೆ ಮಾಡಿದ್ದಾಳೆ. ಇದರಿಂದ ಕೋಪಗೊಂಡ ಸೌರಭ್, ಆಕೆಯನ್ನು ಭೇಟಿ ಮಾಡುವಂತೆ ಕರೆಸಿಕೊಂಡಿದ್ದಾನೆ.
ಅಂತೆಯೇ ಗುರುವಾರ ಸಂಜೆ 7 ಗಂಟೆ ಸುಮಾರಿಗೆ ಪ್ರಿಯಾ, ಆತನನ್ನು ಭೇಟಿ ಮಾಡಲು ಮಗಳೊಂದಿಗೆ ಗ್ಯಾನಶೀಲ ಸೂಪರ್ ಸಿಟಿ ಬಳಿ ಇರುವ ಖಾಲಿ ಜಾಗಕ್ಕೆ ಬಂದಿದ್ದಾಳೆ. ಈ ವೇಳೆ ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದು ಜಗಳ ಮಾಡುತ್ತಾ ವಿಕೋಪಕ್ಕೆ ತಿರುಗಿ ಸೌರಭ್ ತನ್ನ ಬಳಿ ಇದ್ದ ಕತ್ತರಿಯಿಂದ ಆಕೆಗೆ ಎರಡು ಬಾರಿ ಚುಚ್ಚಿದ್ದಾನೆ. ಮುಖ ಮತ್ತು ಕತ್ತಿಗೆ ಇರಿದ ಪರಿಣಾಮ ತೀವ್ರವಾಗಿ ಗಾಯಗೊಂಡ ಪ್ರಿಯಾಗೆ ರಕ್ತ ಹರಿಯಲು ಆರಂಭಿಸಿದೆ. ಮಗಳ ಮುಂದೆ ಉಸಿರಾಡಲು ಕೂಡ ಆಗದೇ ಪ್ರಿಯಾ ಸಮೀಪದಲ್ಲಿದ್ದ ಅಂಗಡಿ ಮುಂದೆ ಕುಸಿದಿದ್ದಾಳೆ. ಆದರೂ ಸೌರಭ್ ಇದಕ್ಕೂ ತನಗೂ ಸಂಬಂಧವೇ ಇಲ್ಲ ಎಂಬಂತೆ ಸ್ಕೂಟರ್ ಹತ್ತಿ ಆರಾಮವಾಗಿ ಸ್ಥಳದಿಂದ ಹೋಗುತ್ತಾನೆ. ಇನ್ನೂ ಈ ವೀಡಿಯೋ ರಸ್ತೆಯಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
A woman was allegedly stabbed to death by a person and his accomplice with a sharp-edged weapon in Madhya Pradesh's Indore's Lasudia police station area after which the accused has been taken into custody.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:01 pm
Mangalore Correspondent
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm