ಬ್ರೇಕಿಂಗ್ ನ್ಯೂಸ್

Forensic Expert Dr Mahabala Shetty, Dharmasthala case: ಧರ್ಮಸ್ಥಳ ಸ್ನಾನಘಟ್ಟ ಬಳಿ 20ಕ್ಕೂ ಹೆಚ್ಚು ಕೊಳೆತ ಶವಗಳನ್ನು ಪೋಸ್ಟ್ ಮಾರ್ಟಂ ಮಾಡಿದ್ದೆ, ಅವನ್ನು ಅಲ್ಲಿಯೇ ಹೂಳಲಾಗಿತ್ತು ; ಪ್ರಕರಣಕ್ಕೆ ಸ್ಫೋಟಕ ತಿರುವು ಕೊಟ್ಟ ಫಾರೆನ್ಸಿಕ್ ತಜ್ಞ ಡಾ.ಮಹಾಬಲ ಶೆಟ್ಟಿ    |    ಕನಸು ಕಮರಿಸಿದ ಅಪಘಾತ ; ವೈದ್ಯರ ಎಡವಟ್ಟು, ಸಕಾಲದಲ್ಲಿ ಚಿಕಿತ್ಸೆ ಸಿಗದೆ ಕೈಕಾಲಿನ ಶಕ್ತಿಯೇ ಊನ, ಕಂಗೆಟ್ಟ ವಿಶ್ವಕರ್ಮ ಕುಟುಂಬಕ್ಕೆ ಕ್ರಿಶ್ಚಿಯನ್ ಗೆಳೆಯರ ಆಸರೆ ! ಅರ್ಧಕ್ಕೆ ಉಳಿದುಬಿಟ್ಟ ಮನೆಗೆ ದಿಕ್ಕಿಲ್ಲದ ಸ್ಥಿತಿ, ಬೆಳಕು ಹರಿಸೀತೆ ಸಹೃದಯರ ಹಾರೈಕೆ ?!    |    Kannada Producer Ganesh, Film Dharmasthala File, Movie: 'ಧರ್ಮಸ್ಥಳ ಫೈಲ್ಸ್' ಸಿನಿಮಾ ಘೋಷಿಸಿದ ಕನ್ನಡದ ನಿರ್ಮಾಪಕ ಎ. ಗಣೇಶ್ ; ಸಮಸ್ಯೆ ಆದ್ರೆ ಚಿತ್ರತಂಡವೇ ಹೊಣೆ ಎಂಬ ಕಂಡೀಷನ್! ಕತೆ ಇನ್ನಷ್ಟೇ ಬರೆಸಬೇಕೆಂದ ಚಿತ್ರತಂಡ     |   

ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ತಹಶೀಲ್ದಾರ್ – 1.10 ಕೋಟಿ ಹಣ ವಶ

15-08-20 10:58 am       Headline Karnataka News Network   ಕ್ರೈಂ

ತಹಶೀಲ್ದಾರ್ ಲಂಚ ಪಡೆದುಕೊಳ್ಳುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳದವರಿಗೆ (ಎಸಿಬಿ) ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಹೈದರಾಬಾದ್, ಆಗಸ್ಟ್ 15: ತಹಶೀಲ್ದಾರ್ ಲಂಚ ಪಡೆದುಕೊಳ್ಳುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳದವರಿಗೆ (ಎಸಿಬಿ) ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಎಎಸ್ ರಾವ್ ನಗರದ ತಹಶೀಲ್ದಾರ್ ನಿವಾಸದಲ್ಲಿ ದಾಳಿ ಮಾಡಲಾಗಿದೆ. ಆಗ ಬರೋಬ್ಬರಿ 1.10 ಕೋಟಿ ನಗದು ಹಣ ಪತ್ತೆಯಾಗಿದೆ. ಆದರೆ ತಹಶೀಲ್ದಾರ್ ಹೆಚ್ಚಾಗಿ 500 ರೂ. ಮುಖಬೆಲೆಯ ನೋಟುಗಳನ್ನು ಲಂಚವಾಗಿ ಸ್ವೀಕರಿಸಿದ್ದನು. ಹೀಗಾಗಿ ಶುಕ್ರವಾರ ರಾತ್ರಿ ನೋಟುಗಳ ಎಣಿಕೆ ಶುರುವಾಗಿದ್ದು, ಇಂದು ಬೆಳಗ್ಗೆ ತನಕ ಮುಂದುವರಿದಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.ರಾಂಪಲ್ಲಿ ದಯಾರದಲ್ಲಿ 28 ಎಕರೆ ಜಮೀನಿನ ವಿವಾದ ಇತ್ತು. ಇದನ್ನು ಅಧಿಕೃತ ಶ್ರೀ ಸತ್ಯ ಡೆವಲಪರ್ ಚೌಲಾ ಶ್ರೀನಾಥ್ ಪರವಾಗಿ ಕೆಲಸ ಮಾಡಿದ್ದಕ್ಕಾಗಿ ಈ ಹಣವನ್ನು ತಹಶೀಲ್ದಾರ್ ಲಂಚವಾಗಿ ಪಡೆದುಕೊಂಡಿದ್ದಾನೆ ಎಂದು ಹೇಳಲಾಗಿದೆ. ಹೀಗಾಗಿ ಚೌಲಾ ಶ್ರೀನಾಥ್, ತಹಶೀಲ್ದಾರ್ ನಾಗರಾಜು ಮತ್ತು ಲ್ಯಾಂಡ್ ಬ್ರೋಕರ್ ಕೆ.ಅಂಜಿ ರೆಡ್ಡಿಯನ್ನು ಎಸಿಬಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ನಾಗರಾಜು ನಿವಾಸದ ಹೊರತಾಗಿ ಆತನ ಕಚೇರಿ ಆವರಣದಲ್ಲಿಯೂ ಎಸಿಬಿ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮ ಕಂದಾಯ ಅಧಿಕಾರಿ ಬಿ.ಸೈರಾಜ್‍ರನ್ನು ಸಹ ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.