ಬ್ರೇಕಿಂಗ್ ನ್ಯೂಸ್
02-02-21 05:26 pm Headline Karnataka News Network ಕ್ರೈಂ
ಬೆಂಗಳೂರು, ಫೆ.2: ಖ್ಯಾತ ಟಿವಿ ಜ್ಯೋತಿಷಿ ಆನಂದ ಗುರೂಜಿಯನ್ನು ವಿಡಿಯೋ ತುಣುಕು ಮುಂದಿಟ್ಟು ಪತ್ರಕರ್ತರ ಸೋಗಿನಲ್ಲಿ ಬ್ಲ್ಕಾಕ್ ಮೇಲ್ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಈ ಬಗ್ಗೆ ಆನಂದ ಗುರೂಜಿ ಆಪ್ತ ಬಿ.ಆರ್.ನಾಗರಾಜ್ ನೀಡಿದ್ದ ದೂರಿನಂತೆ, ಕೃಷ್ಣಮೂರ್ತಿ, ವೆಂಕಟೇಶ್ ಮತ್ತು ಜಿ.ಕೆ.ವೇಲು ಅಲಿಯಾಸ್ ಮಾರ್ಕೆಟ್ ವೇಲು ಎಂಬ ಮೂವರ ವಿರುದ್ಧ ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾಸ್ ಸೂರ್ಯ ಎನ್ನುವ ಪತ್ರಿಕೆಯ ಸಂಪಾದಕ ಜಿ.ಕೆ.ವೇಲು ಅಲಿಯಾಸ್ ಮಾರ್ಕೆಟ್ ವೇಲು ಮತ್ತು ಯುವ ಕರ್ನಾಟಕ ಸಂಘಟನೆಯ ಅಧ್ಯಕ್ಷ ಎ.ಸಿ.ವೆಂಕಟೇಶ್ ಎಂಬವರು ಕಾಂಗ್ರೆಸ್ ಮುಖಂಡ ಸುಧೀಂದ್ರ ಹಾಗೂ ಆನಂದ ಗುರೂಜಿ ಕುಟುಂಬದ ವೈಯಕ್ತಿಕ ವಿವರಗಳನ್ನು ಕಲೆಹಾಕಿದ್ದು ಅದನ್ನು ಪತ್ರಿಕೆಯಲ್ಲಿ ಪ್ರಕಟಿಸುವುದಾಗಿ ಹೇಳಿ ಬ್ಲಾಕ್ ಮೇಲ್ ಮಾಡುತ್ತಿದ್ದರು. ಅಲ್ಲದೆ, ಸುದ್ದಿಯನ್ನು ಹಾಕದಿರಲು 50 ಲಕ್ಷ ರೂ. ನೀಡುವಂತೆ ಬೆದರಿಸಿದ್ದರು.
ಬೆದರಿಕೆಯ ಬಗ್ಗೆ ಸುಧೀಂದ್ರ ನಿರ್ಲಕ್ಷ್ಯ ಮಾಡಿದ್ದರು. ಆದರೆ, ಇಷ್ಟಕ್ಕೇ ಸುಮ್ಮನಾಗದ ಆರೋಪಿಗಳು ಸುಧೀಂದ್ರ ಮತ್ತು ಆನಂದ ಗುರೂಜಿ ಬಗ್ಗೆ ಕೆಟ್ಟದ್ದಾಗಿ ಚಿತ್ರಿಸಿ ವಿಡಿಯೋ ಒಂದನ್ನು ರೆಡಿ ಮಾಡಿ, ಕೃಷ್ಣಮೂರ್ತಿ ಎಂಬಾತನ ಮೊಬೈಲ್ ನಂಬರಿನಿಂದ ಸುಧೀಂದ್ರ ಆಪ್ತ ನಾಗರಾಜ್ ಮೊಬೈಲಿಗೆ ಕಳುಹಿಸಿದ್ದ. ಇದನ್ನು ಜಾಲತಾಣದಲ್ಲಿ ಹರಿಯಬಿಟ್ಟು ಮಾನ ಕಳೆಯುತ್ತೇವೆ. ಇಲ್ಲದಿದ್ದರೆ ಹಣ ಕೊಟ್ಟುಬಿಡಿ ಎಂದು ದುಂಬಾಲು ಬಿದ್ದಿದ್ದಾರೆ. ಕಳೆದ ಜ.12ರಿಂದ 21ರ ವರೆಗೂ ಸತತವಾಗಿ ಪೀಡಿಸಿದ್ದಾರೆ. ಕೊನೆಗೆ 26 ಲಕ್ಷ ನೀಡುವಂತೆ ಹೇಳಿ ತಮ್ಮ ಡಿಮಾಂಡನ್ನು ಇಳಿಸಿದ್ದಾರೆ. ಈ ಬಗ್ಗೆ ಸುಧೀಂದ್ರ ಪಿಎ ಆಗಿರುವ ನಾಗರಾಜ್ ಕೊಟ್ಟ ದೂರಿನಂತೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಕೃಷ್ಣಮೂರ್ತಿ ಮತ್ತು ವೆಂಕಟೇಶ್ ನನ್ನು ಬಂಧಿಸಿದ್ದಾರೆ. ಮಾರ್ಕೆಟ್ ವೇಲುಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
Anand Guruji Blackmailed by Media Persons Demands 50 Lakhs. A case has been registered by the registered at the Giri Nagara Police Station
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm