ಬ್ರೇಕಿಂಗ್ ನ್ಯೂಸ್
02-02-21 05:26 pm Headline Karnataka News Network ಕ್ರೈಂ
ಬೆಂಗಳೂರು, ಫೆ.2: ಖ್ಯಾತ ಟಿವಿ ಜ್ಯೋತಿಷಿ ಆನಂದ ಗುರೂಜಿಯನ್ನು ವಿಡಿಯೋ ತುಣುಕು ಮುಂದಿಟ್ಟು ಪತ್ರಕರ್ತರ ಸೋಗಿನಲ್ಲಿ ಬ್ಲ್ಕಾಕ್ ಮೇಲ್ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಈ ಬಗ್ಗೆ ಆನಂದ ಗುರೂಜಿ ಆಪ್ತ ಬಿ.ಆರ್.ನಾಗರಾಜ್ ನೀಡಿದ್ದ ದೂರಿನಂತೆ, ಕೃಷ್ಣಮೂರ್ತಿ, ವೆಂಕಟೇಶ್ ಮತ್ತು ಜಿ.ಕೆ.ವೇಲು ಅಲಿಯಾಸ್ ಮಾರ್ಕೆಟ್ ವೇಲು ಎಂಬ ಮೂವರ ವಿರುದ್ಧ ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾಸ್ ಸೂರ್ಯ ಎನ್ನುವ ಪತ್ರಿಕೆಯ ಸಂಪಾದಕ ಜಿ.ಕೆ.ವೇಲು ಅಲಿಯಾಸ್ ಮಾರ್ಕೆಟ್ ವೇಲು ಮತ್ತು ಯುವ ಕರ್ನಾಟಕ ಸಂಘಟನೆಯ ಅಧ್ಯಕ್ಷ ಎ.ಸಿ.ವೆಂಕಟೇಶ್ ಎಂಬವರು ಕಾಂಗ್ರೆಸ್ ಮುಖಂಡ ಸುಧೀಂದ್ರ ಹಾಗೂ ಆನಂದ ಗುರೂಜಿ ಕುಟುಂಬದ ವೈಯಕ್ತಿಕ ವಿವರಗಳನ್ನು ಕಲೆಹಾಕಿದ್ದು ಅದನ್ನು ಪತ್ರಿಕೆಯಲ್ಲಿ ಪ್ರಕಟಿಸುವುದಾಗಿ ಹೇಳಿ ಬ್ಲಾಕ್ ಮೇಲ್ ಮಾಡುತ್ತಿದ್ದರು. ಅಲ್ಲದೆ, ಸುದ್ದಿಯನ್ನು ಹಾಕದಿರಲು 50 ಲಕ್ಷ ರೂ. ನೀಡುವಂತೆ ಬೆದರಿಸಿದ್ದರು.

ಬೆದರಿಕೆಯ ಬಗ್ಗೆ ಸುಧೀಂದ್ರ ನಿರ್ಲಕ್ಷ್ಯ ಮಾಡಿದ್ದರು. ಆದರೆ, ಇಷ್ಟಕ್ಕೇ ಸುಮ್ಮನಾಗದ ಆರೋಪಿಗಳು ಸುಧೀಂದ್ರ ಮತ್ತು ಆನಂದ ಗುರೂಜಿ ಬಗ್ಗೆ ಕೆಟ್ಟದ್ದಾಗಿ ಚಿತ್ರಿಸಿ ವಿಡಿಯೋ ಒಂದನ್ನು ರೆಡಿ ಮಾಡಿ, ಕೃಷ್ಣಮೂರ್ತಿ ಎಂಬಾತನ ಮೊಬೈಲ್ ನಂಬರಿನಿಂದ ಸುಧೀಂದ್ರ ಆಪ್ತ ನಾಗರಾಜ್ ಮೊಬೈಲಿಗೆ ಕಳುಹಿಸಿದ್ದ. ಇದನ್ನು ಜಾಲತಾಣದಲ್ಲಿ ಹರಿಯಬಿಟ್ಟು ಮಾನ ಕಳೆಯುತ್ತೇವೆ. ಇಲ್ಲದಿದ್ದರೆ ಹಣ ಕೊಟ್ಟುಬಿಡಿ ಎಂದು ದುಂಬಾಲು ಬಿದ್ದಿದ್ದಾರೆ. ಕಳೆದ ಜ.12ರಿಂದ 21ರ ವರೆಗೂ ಸತತವಾಗಿ ಪೀಡಿಸಿದ್ದಾರೆ. ಕೊನೆಗೆ 26 ಲಕ್ಷ ನೀಡುವಂತೆ ಹೇಳಿ ತಮ್ಮ ಡಿಮಾಂಡನ್ನು ಇಳಿಸಿದ್ದಾರೆ. ಈ ಬಗ್ಗೆ ಸುಧೀಂದ್ರ ಪಿಎ ಆಗಿರುವ ನಾಗರಾಜ್ ಕೊಟ್ಟ ದೂರಿನಂತೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಕೃಷ್ಣಮೂರ್ತಿ ಮತ್ತು ವೆಂಕಟೇಶ್ ನನ್ನು ಬಂಧಿಸಿದ್ದಾರೆ. ಮಾರ್ಕೆಟ್ ವೇಲುಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
Anand Guruji Blackmailed by Media Persons Demands 50 Lakhs. A case has been registered by the registered at the Giri Nagara Police Station
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
01-08-26 10:25 pm
HK News Staffer
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm