ಬ್ರೇಕಿಂಗ್ ನ್ಯೂಸ್
07-02-21 09:37 am Headline Karnataka News Network ಕ್ರೈಂ
ಚಿಕ್ಕಮಗಳೂರು, ಫೆಬ್ರವರಿ 7: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲೆ 17 ಜನರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿ ಸಿದ್ದರಾಮಯ್ಯ ಬಿ.ಎಂ ಅವರನ್ನು ಅಮಾನತು ಮಾಡಲಾಗಿದೆ.
ಶೃಂಗೇರಿ ಸರ್ಕಲ್ ಇನ್ಸ್ಪೆಕ್ಟರ್ ಸಿದ್ದರಾಮಯ್ಯ ಬಿ.ಎಂ ಅವರನ್ನು ಅಮಾನತು ಮಾಡಿ ಪಶ್ಚಿಮ ವಲಯ ಐಜಿಪಿ ದೇವ್ ಜ್ಯೋತಿ ರೇ ಆದೇಶ ಹೊರಡಿಸಿದ್ದಾರೆ. ಎಎಸ್ಪಿ ಶೃತಿ ನೇತೃತ್ವದಲ್ಲಿ ತನಿಖೆ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.
ಅತ್ಯಾಚಾರ ಪ್ರಕರಣದ ತನಿಖಾಧಿಕಾರಿ ಸಿದ್ದರಾಮಯ್ಯ ಬಿ.ಎಂ ಅವರು ಶೃಂಗೇರಿ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಘಟನೆ ನಡೆದು ಎರಡು ದಿನದ ಬಳಿಕ ದೂರು ದಾಖಲಿಸಿದ್ದರಿಂದ ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಅಪ್ರಾಪ್ತ ಮೇಲೆ ಅವಳ ಚಿಕ್ಕಮ್ಮನ ಸಹಕಾರದಿಂದ 17 ಜನರು 5 ತಿಂಗಳುಗಳ ಕಾಲ ಅತ್ಯಾಚಾರ ಮಾಡಿದ್ದರು. ಪ್ರಕರಣದ ಕುರಿತು ಈಗಾಗಲೇ 8 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಅತ್ಯಾಚಾರ ಪ್ರಕರಣದಲ್ಲಿ ತನಿಖಾಧಿಕಾರಿ ಸಿದ್ದರಾಮಯ್ಯ ಬಿ.ಎಂ ಅವರ ಮೇಲೆ ಒತ್ತಡಗಳು ಬಂದಿದ್ದವು ಎನ್ನಲಾಗಿದೆ. ಆ ಕಾರಣಕ್ಕೆ ಪಶ್ಚಿಮ ವಲಯ ಐಜಿಪಿ ದೇವ್ ಜ್ಯೋತಿ ರೇ ಅವರು ಶೃಂಗೇರಿಯ ಸರ್ಕಲ್ ಇನ್ಸ್ಪೆಕ್ಟರ್ ಸಿದ್ದರಾಮಯ್ಯ ಬಿ.ಎಂ ಅವರನ್ನು ಅಮಾನತುಗೊಳಿಸಿದ್ದಾರೆ.
ಪಿಎಸ್ಐ ಕೀರ್ತಿ ಕುಮಾರ್ ಎತ್ತಂಗಡಿ:
ಶೃಂಗೇರಿ ಠಾಣೆ ಪಿಎಸ್ಐ ಕೀರ್ತಿ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಶೃಂಗೇರಿಯಿಂದ ಉತ್ತರ ಕನ್ನಡದ ಕುಮಟಾ ಠಾಣೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಶುಕ್ರವಾರ ಸಿಪಿಐ ಸಿದ್ದರಾಮಯ್ಯರನ್ನು ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿತ್ತು.
ಸದ್ಯ ಪ್ರಕರಣದ ತನಿಖೆಯನ್ನು ಎಎಸ್ಪಿ ಶೃತಿ ವಹಿಸಿಕೊಂಡಿದ್ದಾರೆ. ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಜನರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ, 8 ಆರೋಪಿಗಳ ಬಂಧನವಾಗಿದೆ.
ಉಳಿದ ಆರೋಪಿಗಳನ್ನು ಬಂಧಿಸಲು ಪೋಲಿಸರು ಹಿಂದೇಟು ಹಾಕಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ಪಿಎಸ್ಐ ವರ್ಗಾವಣೆ ಮಾಡಲಾಗಿದೆ. ಹೊಸ ತಂಡದ ಜೊತೆ ಎಎಸ್ಪಿ ಶೃತಿ ತನಿಖೆಯನ್ನು ಮುಂದುವರೆಸಿದ್ದಾರೆ.
Read: ಶೃಂಗೇರಿಯಲ್ಲಿ ಪೈಶಾಚಿಕ ಕೃತ್ಯ ; 15ರ ಬಾಲಕಿಗೆ 17ಕ್ಕೂ ಹೆಚ್ಚು ಮಂದಿ ಗ್ಯಾಂಗ್ ರೇಪ್, ಬ್ಲಾಕ್ ಮೇಲ್ !
Rape of a 15-year-old girl in Sringeri Police Inspector Siddaramaiah suspended and station PSI has been transferred. Six people have been arrested for the rape, sexual abuse and trafficking of a 15-year-old girl in Karnakta’s Chikkamagaluru district.
14-08-25 01:48 pm
Bangalore Correspondent
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 11:51 am
HK Staff
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm