ಬ್ರೇಕಿಂಗ್ ನ್ಯೂಸ್
08-02-21 04:58 pm Headline Karnataka News Network ಕ್ರೈಂ
ಪಾಲಕ್ಕಾಡ್, ಫೆ.8: ಅಲ್ಲಾನನ್ನು ಮೆಚ್ಚಿಸಲು ಗರ್ಭಿಣಿ ಮಹಿಳೆಯೊಬ್ಬರು ತನ್ನ ಆರು ವರ್ಷದ ಮಗುವನ್ನು ಕತ್ತು ಸೀಳಿ ಹತ್ಯೆಗೈದ ಘಟನೆ ಕೇರಳದ ಪಾಲಕ್ಕಾಡ್ ನಲ್ಲಿ ನಡೆದಿದೆ.
30 ವರ್ಷದ ಮದರಸಾ ಶಿಕ್ಷಕಿ ಶಾಹಿದಾ ಈ ಕೃತ್ಯ ಎಸಗಿದ್ದಾರೆ. ತನ್ನ ಮಗನನ್ನು ಅಲ್ಲಾನಿಗೆ ಅರ್ಪಿಸಿದ್ದಾಗಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾಳೆ.
ಗಲ್ಫ್ ನಿಂದ ಹಿಂತಿರುಗಿದ್ದ ಪತಿ ಮತ್ತೊಂದು ಕೋಣೆಯಲ್ಲಿ ಇಬ್ಬರು ಮಕ್ಕಳೊಂದಿಗೆ ಮಲಗಿದ್ದರು. ಮುಂಜಾನೆ ನಾಲ್ಕು ಗಂಟೆ ವೇಳೆಗೆ ಸಣ್ಣ ಮಗುವನ್ನು ಟಾಯ್ಲೆಟ್ ಗೆ ಕರೆದೊಯ್ದು ಕತ್ತು ಸೀಳಿ ಕೊಲೆ ಮಾಡಿದ್ದಾಳೆ. ಮಹಿಳೆಗೆ ಮೂರು ಗಂಡು ಮಕ್ಕಳಿದ್ದು, ಸಣ್ಣ ಮಗು ಆರು ವರ್ಷದವನಿದ್ದ. ಕೊಲೆಗೈದ ಬಳಿಕ ಜ್ಞಾನೋದಯ ಆಯ್ತೋ ಏನೋ. ಕೂಡಲೇ ಪಾಲಕ್ಕಾಡ್ ಕಂಟ್ರೋಲ್ ರೂಮ್ ನಂಬರಿಗೆ ಫೋನ್ ಮಾಡಿ, ಕೃತ್ಯದ ವಿಚಾರವನ್ನು ಹೇಳಿಕೊಂಡಿದ್ದಾಳೆ.

ನಸುಕಿನ 3ರಿಂದ ನಾಲ್ಕು ಗಂಟೆ ಸುಮಾರಿಗೆ ಘಟನೆ ನಡೆದಿತ್ತು. ಇಷ್ಟಾದರೂ, ಪಕ್ಕದ ಕೋಣೆಯಲ್ಲಿ ಮಲಗಿದ್ದ ಪತಿ ಮತ್ತು ಮತ್ತಿಬ್ಬರು ಮಕ್ಕಳಿಗೆ ಈ ವಿಷಯ ತಿಳಿಯಲಿಲ್ಲ. ಪೊಲೀಸರು ಸ್ಥಳಕ್ಕೆ ಬಂದು ನೋಡಿದಾಗ, ಬಾತ್ ರೂಮಿನಲ್ಲಿ ಮಗುವಿನ ಮೃತದೇಹ ಕತ್ತು ಸೀಳಿದ ಸ್ಥಿತಿಯಲ್ಲಿತ್ತು. ಕೈಕಾಲು ಕಟ್ಟಿ ಕತ್ತು ಸೀಳಿದ ಸ್ಥಿತಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿತ್ತು.
ಮಹಿಳೆಯನ್ನು ಬಂಧಿಸಿದ್ದು, ಅಲ್ಲಾಹನಿಗೆ ತ್ಯಾಗ ಮಾಡಲು ಈ ಕೃತ್ಯ ಎಸಗಿದ್ದಾಳೋ ಬೇರಾವುದೋ ಕಾರಣ ಇದೆಯೋ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
13-06-26 03:01 pm
HK News Staffer
4,399 ದಿನಗಳ ಸುದೀರ್ಘ ಆಡಳಿತ, ಭಾರತದ ಇತಿಹಾಸದಲ್ಲೇ...
10-06-26 06:42 pm
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm