ಬ್ರೇಕಿಂಗ್ ನ್ಯೂಸ್
10-02-21 05:54 pm Mangalore Correspondent ಕ್ರೈಂ
ಉಳ್ಳಾಲ, ಫೆ.10 : ದೇರಳಕಟ್ಟೆಯ ಕಣಚೂರು ಎಜುಕೇಷನ್ ಇನ್ಸ್ ಟಿಟ್ಯೂಟ್ ಸಂಸ್ಥೆಯ ಬಿಪಿಟಿ (ಬ್ಯಾಚುಲರ್ ಆಫ್ ಫಿಸಿಯೋಥೆರಪಿ) ವಿಭಾಗದಲ್ಲಿ ರ್ಯಾಗಿಂಗ್ ಆಗಿರುವ ಬಗ್ಗೆ ಆರೋಪ ಕೇಳಿಬಂದಿದ್ದು ಉಳ್ಳಾಲ ಠಾಣೆಯಲ್ಲಿ 18 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಬಿಪಿಟಿ ವಿಭಾಗದ ಪ್ರಥಮ ವರ್ಷದ ಐದು ವಿದ್ಯಾರ್ಥಿಗಳಿಗೆ ಅದೇ ಕಾಲೇಜಿನ 18 ಮಂದಿ ಹಿರಿಯ ವಿದ್ಯಾರ್ಥಿಗಳು ರ್ಯಾಗಿಂಗ್ ಮಾಡಿ ಕೊಲೆ ಬೆದರಿಕೆ ಒಡ್ಡಿದ್ದಾಗಿ ಪ್ರಕರಣ ದಾಖಲಾಗಿದೆ. ಫೆ.4 ರಂದು ಕಾಲೇಜಿನ ಕ್ಯಾಂಪಸ್ ನಲ್ಲಿ ಘಟನೆ ನಡೆದಿದ್ದು ಈ ಬಗ್ಗೆ ಕಾಲೇಜಿನ ಆಡಳಿತ ಮಂಡಳಿ ಫೆ.8ರಂದು ಠಾಣೆಗೆ ದೂರು ನೀಡಿದೆ.

ಬಿಪಿಟಿ ಪ್ರಥಮ ವರ್ಷದ ವಿದ್ಯಾರ್ಥಿಗಳಾದ ಕೇರಳ ಮೂಲದ ಅಮಲ್ ಮಹಮ್ಮದ್, ಆಸಿಮ್ ಜಾಸಿಮ್ ಕೆ.ಎಂ., ಮಹಮ್ಮದ್ ಜೀಹಾವ್, ಆಕಿಬ್ ಜಿಹಾದ್ , ಅಹಮ್ಮದ್ ಶಿಬಿಲಿ, ಶಿನಾಸ್ ಮೊಯಿದುನ್ನಿ ಎಂಬ ಐವರನ್ನು ಅದೇ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಶೋಷಣೆ ಮಾಡಿದ್ದಾರೆ. ತಮ್ಮ ತರಗತಿ ಕೋಣೆಗೆ ಒತ್ತಾಯಪೂರ್ವಕ ಕರೆಸಿಕೊಂಡು ಕಿರಿಯ ವಿದ್ಯಾರ್ಥಿಗಳು ತಮ್ಮೆದುರು ತಲೆ ತಗ್ಗಿಸಿ ನಿಲ್ಲಬೇಕು, ಮೀಸೆ ಬೋಳಿಸಬೇಕು ಎಂದು ಧಮ್ಕಿ ಹಾಕಿದ್ದಾರೆ. ಐದು ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿಕೊಂಡು ತಳ್ಳಾಟ ನಡೆಸಿದ್ದು ಈ ಬಗ್ಗೆ ಕಾಲೇಜಿನವರಿಗೆ ಹೇಳಿದರೆ ಕೊಲ್ಲುವುದಾಗಿ ಬೆದರಿಕೆ ಒಡ್ಡಿದ್ದಾರೆ. ಇದರಿಂದ ನೊಂದ ಕಿರಿಯ ಐವರು ವಿದ್ಯಾರ್ಥಿಗಳು ಬಿಪಿಟಿ ಕ್ಯಾಂಪಸ್ ಮುಖ್ಯಸ್ಥರಾದ ಮಾರ್ಟಿನ್ ಜಾರ್ಜ್ ಅವರಿಗೆ ದೂರನ್ನು ನೀಡಿದ್ದರು.


ಉಪನ್ಯಾಸಕ ಮಾರ್ಟಿನ್ ಜಾರ್ಜ್ ಕಾಲೇಜಿನ ಆಡಳಿತ ಮಂಡಳಿಯ ಗಮನಕ್ಕೆ ತಂದಿದ್ದು ಉಳ್ಳಾಲ ಠಾಣೆಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿ, 18 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಆರೋಪಿತರನ್ನು ಮಹಮ್ಮದ್ ಶಮ್ಮಾಸ್, ಅಕ್ಷಯ್ ಕೆ.ಎಸ್, ರಾಬಿನ್ ಬಿಜು, ಅಬ್ದುಲ್ ಇನಾಸ್ ಮಹಮ್ಮದ್, ಜಿಪ್ರಿನ್ ರೊಚಾ, ಆಲ್ವಿನ್ ಜಾಯ್ , ಸಾಧನ್ ನವಿಲ್, ಮಹಮ್ಮದ್ ಸೂರಜ್ , ಅಮೀನ್ ಶಮ್ಮಾಸ್ , ಅಬ್ದುಲ್ ವಕೀಬ್ , ಶಾಹೀನ್ ಅಬ್ದುಲ್ಲಾ , ಜೆರೊನ್ ಶೆರಿಲ್, ಬಾಸಿಲ್ ಸಿ.ಪಿ, ಅಶ್ವಿನ್ ಬಾಬು, ಜೌಹಾರ್ ಮೊಯ್ದಿನ್ , ಜಾಬಿನ್ ಮೆಹರೂಫ್, ಅಹಮ್ಮದ್ ಫಯಾಝ್ , ಅಬ್ದುಲ್ ಬಾಸಿತ್ ಎಂದು ಗುರುತಿಸಲಾಗಿದೆ. ಉಳ್ಳಾಲ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದು ಪ್ರಕರಣ ಹೊರಬರದಂತೆ ಮುಚ್ಚಿ ಹಾಕುವ ಪ್ರಯತ್ನ ನಡೆದಿದೆ ಎನ್ನಲಾಗುತ್ತಿದೆ.
18 students booked for ragging 5 First-year students of bachelor of physiotherapy at kanachur college in Ullal, Mangalore.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
27-06-26 10:54 am
HK News Staffer
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm