ಬ್ರೇಕಿಂಗ್ ನ್ಯೂಸ್
11-02-21 04:35 pm Mangalore Correspondent ಕ್ರೈಂ
ಮಂಗಳೂರು, ಫೆ.11: ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜಿನಲ್ಲಿ ನಡೆದ ರ್ಯಾಗಿಂಗ್ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸರು 11 ಮಂದಿಯನ್ನು ಬಂಧಿಸಿದ್ದಾರೆ.
ಕಣಚೂರು ಮೆಡಿಕಲ್ ಕಾಲೇಜಿನ ಬಿಪಿಟಿ ವಿಭಾಗದಲ್ಲಿ ಐದು ಮಂದಿ ಕಿರಿಯ ವಿದ್ಯಾರ್ಥಿಗಳಿಗೆ ಅದೇ ವಿಭಾಗದ ಹಿರಿಯ ವಿದ್ಯಾರ್ಥಿಗಳು ರ್ಯಾಗಿಂಗ್ ನಡೆಸಿದ್ದರು. ಈ ಬಗ್ಗೆ ಕಾಲೇಜಿನ ಆಡಳಿತ ಮಂಡಳಿ 18 ಮಂದಿ ವಿದ್ಯಾರ್ಥಿಗಳ ವಿರುದ್ಧ ಉಳ್ಳಾಲ ಠಾಣೆಗೆ ಫೆ.8ರಂದು ದೂರು ನೀಡಿತ್ತು.
ಪ್ರಕರಣ ಸಂಬಂಧಿಸಿ ತನಿಖೆ ನಡೆಸಿದ ಪೊಲೀಸರು ಇಂದು 11 ಮಂದಿಯನ್ನು ಬಂಧಿಸಿದ್ದಾರೆ. ಮೊಹಮ್ಮದ್ ಶಮ್ಮಾಸ್, ರೋಬಿನ್ ಬಿಜು, ಆಲ್ವಿನ್ ಜಾಯ್, ಜಾಬಿನ್ ಮಹ್ರೂಫ್, ಜೆರೋನ್ ಸಿರಿಲ್, ಜಾಫಿನ್ ರಾಯ್ಚನ್, ಮಹ್ಮದ್ ಸೂರಜ್, ಆಶಿನ್ ಬಾಬು, ಅಬ್ದುಲ್ ಬಸಿತ್, ಅಬ್ದುಲ್ ಅನಾಸ್ ಮಹಮ್ಮದ್, ಅಕ್ಷಯ್ ಕೆ.ಎಸ್ ಬಂಧಿತರಾಗಿದ್ದು, ಎಲ್ಲರೂ ಕೇರಳ ಮೂಲದ ವಿದ್ಯಾರ್ಥಿಗಳಾಗಿದ್ದಾರೆ. ಇನ್ನೂ ಏಳು ಮಂದಿಯ ಪತ್ತೆಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಇವರು ಫೆ.5ರಂದು ಕಾಲೇಜಿನಲ್ಲಿ ಈ ಸಾಲಿನಲ್ಲಿ ತರಗತಿ ಸೇರ್ಪಡೆಯಾಗಿದ್ದ ಕಿರಿಯ ವಿದ್ಯಾರ್ಥಿಗಳನ್ನು ತಮ್ಮ ತರಗತಿಗೆ ಕರೆಸಿಕೊಂಡು ತಲೆ ತಗ್ಗಿಸಿ ನಿಲ್ಲಿಸುವುದು, ಮೀಸೆ ತೆಗೆಸುವಂತೆ ದಬಾಯಿಸುವುದು, ಅವರನ್ನು ತಳ್ಳಿಕೊಂಡು ವಾರ್ನ್ ಮಾಡುತ್ತಾ ಕೀಟಲೆ ಮಾಡುತ್ತಿದ್ದರು. ಈ ಬಗ್ಗೆ ನೊಂದ ವಿದ್ಯಾರ್ಥಿಗಳು ಬಿಪಿಎಡ್ ಕೋರ್ಸ್ ವಿಭಾಗ ಪ್ರಮುಖರಲ್ಲಿ ಹೇಳಿಕೊಂಡಿದ್ದರು. ವಿಭಾಗ ಮುಖ್ಯಸ್ಥ ಜಾರ್ಜ್ ಕಾಲೇಜಿನ ಆಡಳಿತ ಮಂಡಳಿ ಗಮನಕ್ಕೆ ತಂದಿದ್ದು, ಪೊಲೀಸರಿಗೆ ದೂರು ನೀಡಲಾಗಿತ್ತು.
ಇತ್ತೀಚೆಗೆ ಅಡ್ಯಾರಿನ ವಳಚ್ಚಿಲ್ ನಲ್ಲಿರುವ ಶ್ರೀನಿವಾಸ ಕಾಲೇಜಿನಲ್ಲಿ ಇದೇ ರೀತಿಯ ರ್ಯಾಗಿಂಗ್ ಪ್ರಕರಣ ನಡೆದಿತ್ತು. ಕಿರಿಯ ವಿದ್ಯಾರ್ಥಿಗಳನ್ನು ತರಗತಿಗೆ ಕರೆಸ್ಕೊಂಡು ಕೀಟಲೆ ನಡೆಸುತ್ತಿದ್ದ ಪ್ರಕರಣದಲ್ಲಿ ಪೊಲೀಸರು 9 ಮಂದಿಯನ್ನು ಬಂಧಿಸಿದ್ದರು. ಇದೀಗ ಒಂದೇ ತಿಂಗಳ ಅಂತರದಲ್ಲಿ ಮಂಗಳೂರು ನಗರ ವ್ಯಾಪ್ತಿಯಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.
ದೇರಳಕಟ್ಟೆ ; ಕಣಚೂರು ಕಾಲೇಜಿನಲ್ಲಿ ರ್ಯಾಗಿಂಗ್ ಭೂತ !! 18 ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು !
ರ್ಯಾಗಿಂಗ್ ; ಕಾಲೇಜನ್ನೇ ತೊರೆದ ಬಿ ಫಾರ್ಮಾ ವಿದ್ಯಾರ್ಥಿ, ಫೀಸ್ ಹಿಂತಿರುಗಿಸುವಂತೆ ಪೊಲೀಸ್ ದೂರು
ರ್ಯಾಗಿಂಗ್ ಪ್ರಕರಣ ; 9 ವಿದ್ಯಾರ್ಥಿಗಳ ಬಂಧನ, ರ್ಯಾಗಿಂಗ್ ಘಟನೆಗಳಿಗೆ ಆಯಾ ಸಂಸ್ಥೆಗಳೇ ಹೊಣೆ ; ಕಮಿಷನರ್
In connection to the Ragging case at Kanachur College in Ullal the Police have arrested 11 Students out of 18. The arrested are all identified as students from Kerala.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
16-08-25 10:20 am
Mangalore Correspondent
Headline karnataka Impact, Lucky Scheme, Frau...
15-08-25 09:22 pm
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm